• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರಾಖಂಡದಲ್ಲಿ ಲವ್ ಜಿಹಾದಿನಲ್ಲಿ ತೊಡಗಿದ್ದವನಿಗೆ ತಕ್ಕ ಶಾಸ್ತಿ, ಅರ್ಷಾದ್ ಅಲಿಗೆ 12 ವರ್ಷ ಜೈಲು ಶಿಕ್ಷೆ!

TNN Correspondent Posted On May 7, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ದೇಶದಲ್ಲಿ ದಿನೇದಿನೆ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಉತ್ತರಾಖಂಡದಲ್ಲಿ ಲವ್ ಜಿಹಾದ್ ಎಸಗಿದ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ ತಕ್ಕ ಶಾಸ್ತಿ ಮಾಡುವ ಮೂಲಕ ದೇಶದಲ್ಲಿ ಯಾರೂ ಲವ್ ಜಿಹಾದಿನಲ್ಲಿ ತೊಡಗಬಾರದು ಎಂಬ ಸ್ಪಷ್ಟ ಸಂದೇಶ ರವಾನಿಸಲಾಗಿದೆ.

ಹೌದು, ಉತ್ತರಾಖಂಡದ ನೈನಿತಲ್ ಜಿಲ್ಲೆಯ ರಾಮನಗರ ಎಂಬಲ್ಲಿ 17 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ, ಕೊನೆಗೆ ಮತಾಂತರಗೊಳಿಸಿದ ಪ್ರಕರಣದಲ್ಲಿ ಅರ್ಷಾದ್ ಅಲಿ ಎಂಬಾತನಿಗೆ ಉತ್ತರಾಖಂಡ್ ಪೋಕ್ಸೋ ವಿಶೇಷ ನ್ಯಾಯಾಲಯ ಬರೋಬ್ಬರಿ 12 ವರ್ಷ ಜೈಲು ಶಿಕ್ಷೆ ವಿಧಿಸಿದೆ.

2016ರ ಮಾರ್ಚ್ 19ರಂದು ಹೈಸ್ಕೂಲು ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ್ದ ಅರ್ಷಾದ್ ಅಲಿ, ರಾಮನಗರದ ಕಾಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಬಳಿಕ ತನ್ನ ಮನೆಗೆ ಕರೆದೊಯ್ದು ಬಲವಂತವಾಗಿ ಮತಾಂತರಗೊಳಿಸಿ ಮದುವೆಯಾಗಿದ್ದ. ಬಳಿಕ ಬಾಲಕಿಯ ತಂದೆ ಮಾರ್ಚ್ 20ರಂದು ಬಾಲಕಿ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಿಸಿದ್ದರು.

ಈ ಕುರಿತು ತನಿಖೆ ನಡೆಸಿದ ಪೊಲೀಸರು ಉದ್ದಮ್ ಸಿಂಗ್ ನಗರ ಜಿಲ್ಲೆಯ ಕಾಶಿಪುರ ಎಂಬಲ್ಲಿ ಅರ್ಷಾದ್ ಅಲಿಯನ್ನು ಬಂಧಿಸಿದ್ದಲ್ಲದೆ, ಬಾಲಕಿಯನ್ನು ರಕ್ಷಿಸಿದ್ದರು. ಬಾಲಕಿಯು ನ್ಯಾಯಾಲಯದ ಎದುರು ಅರ್ಷಾದ್ ಅಲ್ ತನ್ನನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ, ಬಲವಂತವಾಗಿ ಮತಾಂತರಿಸಿ ಮದುವೆಯಾಗಿದ್ದಾನೆ ಎಂದು ತಿಳಿಸಿದ್ದಳು.

ಈಗ ಪ್ರಕರಣದ ಸಂಪೂರ್ಣ ವಿಚಾರಣೆ ಮುಗಿದಿದ್ದು, ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಬಲವಂತವಾಗಿ ಮತಾಂತರಗೊಳಿಸಿದ ಆರೋಪದಲ್ಲಿ ನ್ಯಾಯಾಲಯ 12 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಆ ಮೂಲಕ ಹಿಂದೂ ಯುವತಿಯರನ್ನು ಪ್ರೀತಿಸುವ ನಾಟಕವಾಡಿಯೋ, ಬಲವಂತವಾಗಿ ಎಳೆದೊಯ್ದು ಮತಾಂತರ ಮಾಡುತ್ತಿದ್ದ ಮುಸ್ಲಿಂ ಮೂಲಭೂತವಾದಿಗಳಿಗೆ ಸರಿಯಾದ ಪಾಠ ಕಲಿಸಲಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search