• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉತ್ತರಾಖಂಡದಲ್ಲಿ ಲವ್ ಜಿಹಾದಿನಲ್ಲಿ ತೊಡಗಿದ್ದವನಿಗೆ ತಕ್ಕ ಶಾಸ್ತಿ, ಅರ್ಷಾದ್ ಅಲಿಗೆ 12 ವರ್ಷ ಜೈಲು ಶಿಕ್ಷೆ!

TNN Correspondent Posted On May 7, 2018


  • Share On Facebook
  • Tweet It

ಡೆಹ್ರಾಡೂನ್: ದೇಶದಲ್ಲಿ ದಿನೇದಿನೆ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಉತ್ತರಾಖಂಡದಲ್ಲಿ ಲವ್ ಜಿಹಾದ್ ಎಸಗಿದ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ ತಕ್ಕ ಶಾಸ್ತಿ ಮಾಡುವ ಮೂಲಕ ದೇಶದಲ್ಲಿ ಯಾರೂ ಲವ್ ಜಿಹಾದಿನಲ್ಲಿ ತೊಡಗಬಾರದು ಎಂಬ ಸ್ಪಷ್ಟ ಸಂದೇಶ ರವಾನಿಸಲಾಗಿದೆ.

ಹೌದು, ಉತ್ತರಾಖಂಡದ ನೈನಿತಲ್ ಜಿಲ್ಲೆಯ ರಾಮನಗರ ಎಂಬಲ್ಲಿ 17 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ, ಕೊನೆಗೆ ಮತಾಂತರಗೊಳಿಸಿದ ಪ್ರಕರಣದಲ್ಲಿ ಅರ್ಷಾದ್ ಅಲಿ ಎಂಬಾತನಿಗೆ ಉತ್ತರಾಖಂಡ್ ಪೋಕ್ಸೋ ವಿಶೇಷ ನ್ಯಾಯಾಲಯ ಬರೋಬ್ಬರಿ 12 ವರ್ಷ ಜೈಲು ಶಿಕ್ಷೆ ವಿಧಿಸಿದೆ.

2016ರ ಮಾರ್ಚ್ 19ರಂದು ಹೈಸ್ಕೂಲು ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ್ದ ಅರ್ಷಾದ್ ಅಲಿ, ರಾಮನಗರದ ಕಾಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಬಳಿಕ ತನ್ನ ಮನೆಗೆ ಕರೆದೊಯ್ದು ಬಲವಂತವಾಗಿ ಮತಾಂತರಗೊಳಿಸಿ ಮದುವೆಯಾಗಿದ್ದ. ಬಳಿಕ ಬಾಲಕಿಯ ತಂದೆ ಮಾರ್ಚ್ 20ರಂದು ಬಾಲಕಿ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಿಸಿದ್ದರು.

ಈ ಕುರಿತು ತನಿಖೆ ನಡೆಸಿದ ಪೊಲೀಸರು ಉದ್ದಮ್ ಸಿಂಗ್ ನಗರ ಜಿಲ್ಲೆಯ ಕಾಶಿಪುರ ಎಂಬಲ್ಲಿ ಅರ್ಷಾದ್ ಅಲಿಯನ್ನು ಬಂಧಿಸಿದ್ದಲ್ಲದೆ, ಬಾಲಕಿಯನ್ನು ರಕ್ಷಿಸಿದ್ದರು. ಬಾಲಕಿಯು ನ್ಯಾಯಾಲಯದ ಎದುರು ಅರ್ಷಾದ್ ಅಲ್ ತನ್ನನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ, ಬಲವಂತವಾಗಿ ಮತಾಂತರಿಸಿ ಮದುವೆಯಾಗಿದ್ದಾನೆ ಎಂದು ತಿಳಿಸಿದ್ದಳು.

ಈಗ ಪ್ರಕರಣದ ಸಂಪೂರ್ಣ ವಿಚಾರಣೆ ಮುಗಿದಿದ್ದು, ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಬಲವಂತವಾಗಿ ಮತಾಂತರಗೊಳಿಸಿದ ಆರೋಪದಲ್ಲಿ ನ್ಯಾಯಾಲಯ 12 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಆ ಮೂಲಕ ಹಿಂದೂ ಯುವತಿಯರನ್ನು ಪ್ರೀತಿಸುವ ನಾಟಕವಾಡಿಯೋ, ಬಲವಂತವಾಗಿ ಎಳೆದೊಯ್ದು ಮತಾಂತರ ಮಾಡುತ್ತಿದ್ದ ಮುಸ್ಲಿಂ ಮೂಲಭೂತವಾದಿಗಳಿಗೆ ಸರಿಯಾದ ಪಾಠ ಕಲಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
Tulunadu News September 28, 2023
ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
Tulunadu News September 28, 2023
Leave A Reply

  • Recent Posts

    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
  • Popular Posts

    • 1
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 2
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 3
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 4
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 5
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search