• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚುನಾವಣೆಗೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಎಷ್ಟು ಜನ ಕೇಸ್ ಎದುರಿಸುತ್ತಿದ್ದಾರೆ ಗೊತ್ತಾ?

TNN Correspondent Posted On May 7, 2018
0


0
Shares
  • Share On Facebook
  • Tweet It

ಬೆಂಗಳೂರು: ಆಡಳಿತ ವಿರೋಧಿ ಅಲೆಯಿದ್ದರೂ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶತಾಯ-ಗತಾಯ ಗೆಲುವು ಸಾಧಿಸಲೇಬೇಕು ಎಂದು ಶಪಥಗೈದಂತಿರುವ ಕಾಂಗ್ರೆಸ್, ಅದೇ ಭರದಲ್ಲಿ ಅಪರಾಧ ಹಿನ್ನೆಲೆಯುಳ್ಳವರಿಗೂ ಟಿಕೆಟ್ ನೀಡಿದೆ ಎಂಬುದಕ್ಕೆ ಮಹತ್ತರ ಅಂಶವೊಂದು ಬಹಿರಂಗವಾಗಿದ್ದು, ಕಾಂಗ್ರೆಸ್ಸಿನ ಗೂಂಡಾ ಸಂಸ್ಕೃತಿಗೆ ಇದು ಕನ್ನಡಿ ಹಿಡಿದಂತಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಹೌದು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಎಂಬ ಸಂಸ್ಥೆ ಈ ಕುರಿತು ಅಧ್ಯಯನ ವರದಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ಸಿನ 220 ಅಭ್ಯರ್ಥಿಗಳಲ್ಲಿ ಶೇ.94ರಷ್ಟು ಅಭ್ಯರ್ಥಿಗಳು 207 ಅಭ್ಯರ್ಥಿಗಳು ಕೋಟ್ಯಧೀಶರು ಎಂದು ತಿಳಿದುಬಂದಿದ್ದು, ಸಮಾಜವಾದಿ ಮುಖ್ಯಮಂತ್ರಿಯವರ ಪಕ್ಷದಲ್ಲಿ ಇಷ್ಟೊಂದು ಕೋಟ್ಯಧೀಶರಿಗೆ ಟಿಕೆಟ್ ನೀಡಲಾಗಿದೆಯಾ ಎಂಬ ಅಚ್ಚರಿ ಕಾಡುತ್ತಿದೆ.

ಅಷ್ಟೇ ಅಲ್ಲ, ವರದಿ ಪ್ರಕಾರ ಈ 220 ಅಭ್ಯರ್ಥಿಗಳಲ್ಲಿ 59 ಅಭ್ಯರ್ಥಿಗಳು, ಅಂದರೆ ಶೇ.27ರಷ್ಟು ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ. ಇದರಲ್ಲೇ 32 ಅಭ್ಯರ್ಥಿಗಳು, ಅಂದರೆ ಶೇ.15ರಷ್ಟು ಜನ ಗಂಭೀರ ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೇ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಮೊಹಮ್ಮದ್ ನಲಪಾಡ್ ಹ್ಯಾರಿಸ್ ತಂದ ಎನ್.ಎ.ಹ್ಯಾರಿಸ್ ಅವರಿಗೂ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ತಾನು ಕ್ರಿಮಿನಲ್ ಕೇಸು ಎದುರಿಸುತ್ತಿರುವ ಅಭ್ಯರ್ಥಿಗಳಿಗೂ ಟಿಕೆಟ್ ನೀಡುವೆ ಎಂಬುದನ್ನು ಸಾಬೀತುಪಡಿಸಿತ್ತು. ಈಗ ಸುಮಾರು 57 ಜನ ಪ್ರಕರಣ ಎದುರಿಸುತ್ತಿದ್ದು, ಅವರಿಗೂ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 3
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search