• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ಕಟ್ಟಿದ ಸಿಪಿಎಂ, ಕಾಂಗ್ರೆಸ್ಸಿಗೆ ಬಿಜೆಪಿ ಸರ್ಕಾರ ಹೇಗೆ ತಪರಾಕಿ ನೀಡಿದೆ ನೋಡಿ!

TNN Correspondent Posted On May 7, 2018
0


0
Shares
  • Share On Facebook
  • Tweet It

ಅಗರ್ತಲಾ: ತ್ರಿಪುರಾದಲ್ಲಿ ದಶಕಗಳ ಬಳಿಕ ಆಡಳಿತಕ್ಕೆ ಬಂದ ಬಿಜೆಪಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಈಗ ದೇಶದ ಗಮನ ಸೆಳೆಯುತ್ತಿದೆ. ಎರಡು ದಿನದ ಹಿಂದಷ್ಟೇ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ನಮಾಜ್ ಮಾಡುವ ಹಾಗಿಲ್ಲ ಎಂದು ಸೂಚಿಸುವ ಮೂಲಕ ಶಾಂತಿ-ಸುವ್ಯವಸ್ಥೆ ಕಾಪಾಡಲು ಮುಂದಾಗಿದ್ದ ರಾಜ್ಯ ಸರ್ಕಾರ ಈಗ ಮತ್ತೊಂದು ಮಹತ್ತರ ನಿರ್ಧಾರ ಘೋಷಿಸಿದೆ.

ಹೌದು, ರಾಜ್ಯಾದ್ಯಂತ ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ಕಟ್ಟುವ ಮೂಲಕ ದರ್ಪ ಮೆರೆದಿದ್ದ ಭಾರತೀಯ ಕಮ್ಯುನಿಸ್ಟ್ ಪಾರ್ಟಿ ಹಾಗೂ ಕಾಂಗ್ರೆಸ್ಸಿಗೆ ಬಿಜೆಪಿ ಸರಿಯಾಗಿಯೇ ತಪರಾಕಿ ನೀಡಿದೆ.

ರಾಜ್ಯಾದ್ಯಂತ ಸಿಪಿಎಂ ಹಾಗೂ ಕಾಂಗ್ರೆಸ್ ಪಕ್ಷಗಳು ಸರ್ಕಾರಿ ಜಾಗದಲ್ಲಿ ಸುಮಾರು ನೂರು ಕಚೇರಿ ಕಟ್ಟಿವೆ. ಇವುಗಳನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ಸರ್ಕಾರವೇ ಈ ಕಾರ್ಯ ಮಾಡಬೇಕಾಗುತ್ತದೆ ಎಂದು ಬಿಪ್ಲಬ್ ಕುಮಾರ್ ನೇತೃತ್ವದ ಸರ್ಕಾರ ಸೂಚನೆ ನೀಡಿದೆ.

ಅಗರ್ತಲಾದ ಹಳೆ ಮೋಟಾರ್ ಸ್ಟಾಂಡ್ ಬಳಿ ನಿರ್ಮಿಸಿದ್ದ ಹಲವು ಪಕ್ಷಗಳ ಕಚೇರಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ, ಕೂಡಲೇ ಪಕ್ಷಗಳೇ ಕಚೇರಿ ತೆರವುಗೊಳಿಸಬೇಕು. ಇಲ್ಲದಿದ್ದರೆ ನಾವೇ ಬುಲ್ಡೋಜರ್ ಹರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಆದರೆ ಇದಕ್ಕೆ ಸಿಪಿಎಂ ಹಾಗೂ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿವೆ. ಆದರೂ ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ಕಟ್ಟಿರುವ ಕುರಿತು ಸಿಪಿಎಂ ರಾಜ್ಯ ಕಾರ್ಯದರ್ಶಿ ಬಿಜನ್ ಧರ್ ಒಪ್ಪಿಕೊಂದ್ದಾರೆ. ಆದರೆ, ರಾಜ್ಯ ಸರ್ಕಾರ ರಾಜಕೀಯ ದ್ವೇಷದಿಂದ ಹೀಗೆ ಮಾಡುತ್ತಿದೆ ಎಂದು ಧರ್ ಆರೋಪಿಸಿದ್ದಾರೆ.

ಅಲ್ಲ, ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ನಿರ್ಮಿಸುವ ಕುರಿತು ಸ್ವತಃ ಸಿಪಿಎಂ ಮುಖಂಡರೇ ಒಪ್ಪಿಕೊಂಡಿದ್ದಾರೆ. ಕಾನೂನಿ ಪ್ರಕಾರ ಹೀಗೆ ಮಾಡುವುದು ತಪ್ಪು ಎಂಬುದು ಗೊತ್ತಿದ್ದರೂ ಕಟ್ಟಡ ನಿರ್ಮಿಸಿ, ಈಗ ತೆರವುಗೊಳಿಸಿ ಎಂದು ಸರ್ಕಾರ ನ್ಯಾಯಯುತವಾಗಿ ನಡೆದುಕೊಂಡರೂ, ಇದನ್ನು ರಾಜಕೀಯ ಪ್ರೇರಿತ ಕ್ರಮ ಎನ್ನುವ ಇವರಿಗೆ ಏನೆನ್ನಬೇಕು?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search