• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ಕಟ್ಟಿದ ಸಿಪಿಎಂ, ಕಾಂಗ್ರೆಸ್ಸಿಗೆ ಬಿಜೆಪಿ ಸರ್ಕಾರ ಹೇಗೆ ತಪರಾಕಿ ನೀಡಿದೆ ನೋಡಿ!

TNN Correspondent Posted On May 7, 2018
0


0
Shares
  • Share On Facebook
  • Tweet It

ಅಗರ್ತಲಾ: ತ್ರಿಪುರಾದಲ್ಲಿ ದಶಕಗಳ ಬಳಿಕ ಆಡಳಿತಕ್ಕೆ ಬಂದ ಬಿಜೆಪಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಈಗ ದೇಶದ ಗಮನ ಸೆಳೆಯುತ್ತಿದೆ. ಎರಡು ದಿನದ ಹಿಂದಷ್ಟೇ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ನಮಾಜ್ ಮಾಡುವ ಹಾಗಿಲ್ಲ ಎಂದು ಸೂಚಿಸುವ ಮೂಲಕ ಶಾಂತಿ-ಸುವ್ಯವಸ್ಥೆ ಕಾಪಾಡಲು ಮುಂದಾಗಿದ್ದ ರಾಜ್ಯ ಸರ್ಕಾರ ಈಗ ಮತ್ತೊಂದು ಮಹತ್ತರ ನಿರ್ಧಾರ ಘೋಷಿಸಿದೆ.

ಹೌದು, ರಾಜ್ಯಾದ್ಯಂತ ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ಕಟ್ಟುವ ಮೂಲಕ ದರ್ಪ ಮೆರೆದಿದ್ದ ಭಾರತೀಯ ಕಮ್ಯುನಿಸ್ಟ್ ಪಾರ್ಟಿ ಹಾಗೂ ಕಾಂಗ್ರೆಸ್ಸಿಗೆ ಬಿಜೆಪಿ ಸರಿಯಾಗಿಯೇ ತಪರಾಕಿ ನೀಡಿದೆ.

ರಾಜ್ಯಾದ್ಯಂತ ಸಿಪಿಎಂ ಹಾಗೂ ಕಾಂಗ್ರೆಸ್ ಪಕ್ಷಗಳು ಸರ್ಕಾರಿ ಜಾಗದಲ್ಲಿ ಸುಮಾರು ನೂರು ಕಚೇರಿ ಕಟ್ಟಿವೆ. ಇವುಗಳನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ಸರ್ಕಾರವೇ ಈ ಕಾರ್ಯ ಮಾಡಬೇಕಾಗುತ್ತದೆ ಎಂದು ಬಿಪ್ಲಬ್ ಕುಮಾರ್ ನೇತೃತ್ವದ ಸರ್ಕಾರ ಸೂಚನೆ ನೀಡಿದೆ.

ಅಗರ್ತಲಾದ ಹಳೆ ಮೋಟಾರ್ ಸ್ಟಾಂಡ್ ಬಳಿ ನಿರ್ಮಿಸಿದ್ದ ಹಲವು ಪಕ್ಷಗಳ ಕಚೇರಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ, ಕೂಡಲೇ ಪಕ್ಷಗಳೇ ಕಚೇರಿ ತೆರವುಗೊಳಿಸಬೇಕು. ಇಲ್ಲದಿದ್ದರೆ ನಾವೇ ಬುಲ್ಡೋಜರ್ ಹರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಆದರೆ ಇದಕ್ಕೆ ಸಿಪಿಎಂ ಹಾಗೂ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿವೆ. ಆದರೂ ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ಕಟ್ಟಿರುವ ಕುರಿತು ಸಿಪಿಎಂ ರಾಜ್ಯ ಕಾರ್ಯದರ್ಶಿ ಬಿಜನ್ ಧರ್ ಒಪ್ಪಿಕೊಂದ್ದಾರೆ. ಆದರೆ, ರಾಜ್ಯ ಸರ್ಕಾರ ರಾಜಕೀಯ ದ್ವೇಷದಿಂದ ಹೀಗೆ ಮಾಡುತ್ತಿದೆ ಎಂದು ಧರ್ ಆರೋಪಿಸಿದ್ದಾರೆ.

ಅಲ್ಲ, ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ನಿರ್ಮಿಸುವ ಕುರಿತು ಸ್ವತಃ ಸಿಪಿಎಂ ಮುಖಂಡರೇ ಒಪ್ಪಿಕೊಂಡಿದ್ದಾರೆ. ಕಾನೂನಿ ಪ್ರಕಾರ ಹೀಗೆ ಮಾಡುವುದು ತಪ್ಪು ಎಂಬುದು ಗೊತ್ತಿದ್ದರೂ ಕಟ್ಟಡ ನಿರ್ಮಿಸಿ, ಈಗ ತೆರವುಗೊಳಿಸಿ ಎಂದು ಸರ್ಕಾರ ನ್ಯಾಯಯುತವಾಗಿ ನಡೆದುಕೊಂಡರೂ, ಇದನ್ನು ರಾಜಕೀಯ ಪ್ರೇರಿತ ಕ್ರಮ ಎನ್ನುವ ಇವರಿಗೆ ಏನೆನ್ನಬೇಕು?

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search