• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಮ್ಮ ವಿರುದ್ಧ ಬರೆದರೇ ಹುಷಾರ್!: ವರದಿಗಾರನ ಮೇಲೆ ಸಚಿವ ತನ್ವೀರ್ ಸೇಠ ಬೆಂಬಲಿಗರ ಹಲ್ಲೆ

TNN Correspondent Posted On May 8, 2018


  • Share On Facebook
  • Tweet It

ಮೈಸೂರು: ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ನಿರಂತರವಾಗಿ ಅಧಿಕಾರಿಗಳ ಮೇಲೆ ಕಿರುಕುಳ ನೀಡುವುದು ಸೇರಿ ನಾನಾ ಅನಾಚಾರಗಳನ್ನು ನಡೆಸಿದ ಸಿದ್ರಾಮಯ್ಯ ಸರ್ಕಾರದ ಸಚಿವರು, ಅವರ ಬೆಂಬಲಿಗರು ಚುನಾವಣೆಯ ಹೊತ್ತಲ್ಲಿ ಮತ್ತೊಮ್ಮೆ ಎಡವಿದ್ದು, ಈ ಬಾರಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕೋಧ್ಯಮದ ಮೇಲೆಯೇ ದಾಳಿ ಮಾಡಿದ್ದಾರೆ. ಮೈಸೂರಿನಲ್ಲಿ ಸಚಿವ ತನ್ವೀರ್ ಸೇಠ ಬೆಂಬಲಿಗರು ವರದಿಗಾರಿಕೆಗೆ ತೆರಳಿದ್ದ ಆಂಗ್ಲ ಪತ್ರಿಕೆಯ ವರದಿಗಾರನ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿ ಮನೆಯೊಂದರಲ್ಲಿ ಕೂಡಿ ಹಾಕಿ ಧರ್ಪ ಮೆರೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ತನ್ವೀರ್ ಸೇಠ್ ಸೋಮವಾರ ಬೆಳಗ್ಗೆ ಎನ್.ಆರ್ ಕ್ಷೇತ್ರದ ಗಾಯತ್ರಿಪುರಂ ಬಡಾವಣೆಯಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿದ್ದರು. ಈ ಸುದ್ದಿಯನ್ನು ವರದಿ ಮಾಡಲು ತೆರಳಿದ್ದ ವರದಿಗಾರ ಶಿವೇಂದ್ರ ಅರಸ್ ಅವರನ್ನು ತನ್ವೀರ್ ಸೇಠ ಬೆಂಬಲಿಗರು ತಡೆ ಹಿಡಿದಿದ್ದಾರೆ. ವಿಚಾರಣೆ ಆರಂಭಿಸಿದ್ದಾರೆ. ಶಿವೇಂದ್ರ ತಮ್ಮ ಪರಿಚಯ ಹೇಳಿಕೊಂಡರೂ ನಂಬದ ಕಾಂಗ್ರೆಸ್ ಕಾರ್ಯಕರ್ತರು ಶಿವೇಂದ್ರ ಅವರ ಹತ್ತಿರವಿದ್ದ ಪೆನ್ ಮತ್ತು ಪುಸ್ತಕ ಕಿತ್ತುಕೊಂಡು ಸ್ಥಳದಿಂದ ತೆರಳಲು ಬಿಡದೇ, ತಡೆದಿದ್ದಾರೆ.

ಶಿವೇಂದ್ರ ಹತ್ತಿರವಿರುವ ಫೋನ್ ಕಿತ್ತುಕೊಂಡು, ಹಲ್ಲೆ ನಡೆಸಿದ್ದಾರೆ. ಅಲ್ಲದೇ ಬಲವಂತವಾಗಿ ಮನೆಯೊಳಗೆ ಕೂಡಿ ಹಾಕಿದ್ದಾರೆ. ಈ ಮಾಹಿತಿ ತಿಳಿದ ಸಚಿವ ತನ್ವೀರ್ ಸೇಠ್ ನಮ್ಮ ವಿರುದ್ಧ ಬರೆದರೇ ಸುಮ್ಮನೇ ಇರುವುದಿಲ್ಲ ಎಂದು ಧಮ್ಕಿ ಹಾಕಿ, ನಂತರ ಬಿಡುಗಡೆ ಮಾಡಿದ್ದಾರೆ. ವರದಿಗಾರನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿ, ಗುಂಡಾಗಿರಿ ಪ್ರದರ್ಶಿಸಿರುವ ಸಚಿವ ತನ್ವೀರ್ ಸೇಠ ವಿರುದ್ಧ ದೂರು ದಾಖಲಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
Tulunadu News June 8, 2023
ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
Tulunadu News June 8, 2023
Leave A Reply

  • Recent Posts

    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
  • Popular Posts

    • 1
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 2
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 3
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • 4
      ಹೆಣ್ಣು ಕಾಮದ ಸರಕಲ್ಲ!
    • 5
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search