• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಮ್ಮ ವಿರುದ್ಧ ಬರೆದರೇ ಹುಷಾರ್!: ವರದಿಗಾರನ ಮೇಲೆ ಸಚಿವ ತನ್ವೀರ್ ಸೇಠ ಬೆಂಬಲಿಗರ ಹಲ್ಲೆ

TNN Correspondent Posted On May 8, 2018
0


0
Shares
  • Share On Facebook
  • Tweet It

ಮೈಸೂರು: ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ನಿರಂತರವಾಗಿ ಅಧಿಕಾರಿಗಳ ಮೇಲೆ ಕಿರುಕುಳ ನೀಡುವುದು ಸೇರಿ ನಾನಾ ಅನಾಚಾರಗಳನ್ನು ನಡೆಸಿದ ಸಿದ್ರಾಮಯ್ಯ ಸರ್ಕಾರದ ಸಚಿವರು, ಅವರ ಬೆಂಬಲಿಗರು ಚುನಾವಣೆಯ ಹೊತ್ತಲ್ಲಿ ಮತ್ತೊಮ್ಮೆ ಎಡವಿದ್ದು, ಈ ಬಾರಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕೋಧ್ಯಮದ ಮೇಲೆಯೇ ದಾಳಿ ಮಾಡಿದ್ದಾರೆ. ಮೈಸೂರಿನಲ್ಲಿ ಸಚಿವ ತನ್ವೀರ್ ಸೇಠ ಬೆಂಬಲಿಗರು ವರದಿಗಾರಿಕೆಗೆ ತೆರಳಿದ್ದ ಆಂಗ್ಲ ಪತ್ರಿಕೆಯ ವರದಿಗಾರನ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿ ಮನೆಯೊಂದರಲ್ಲಿ ಕೂಡಿ ಹಾಕಿ ಧರ್ಪ ಮೆರೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ತನ್ವೀರ್ ಸೇಠ್ ಸೋಮವಾರ ಬೆಳಗ್ಗೆ ಎನ್.ಆರ್ ಕ್ಷೇತ್ರದ ಗಾಯತ್ರಿಪುರಂ ಬಡಾವಣೆಯಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿದ್ದರು. ಈ ಸುದ್ದಿಯನ್ನು ವರದಿ ಮಾಡಲು ತೆರಳಿದ್ದ ವರದಿಗಾರ ಶಿವೇಂದ್ರ ಅರಸ್ ಅವರನ್ನು ತನ್ವೀರ್ ಸೇಠ ಬೆಂಬಲಿಗರು ತಡೆ ಹಿಡಿದಿದ್ದಾರೆ. ವಿಚಾರಣೆ ಆರಂಭಿಸಿದ್ದಾರೆ. ಶಿವೇಂದ್ರ ತಮ್ಮ ಪರಿಚಯ ಹೇಳಿಕೊಂಡರೂ ನಂಬದ ಕಾಂಗ್ರೆಸ್ ಕಾರ್ಯಕರ್ತರು ಶಿವೇಂದ್ರ ಅವರ ಹತ್ತಿರವಿದ್ದ ಪೆನ್ ಮತ್ತು ಪುಸ್ತಕ ಕಿತ್ತುಕೊಂಡು ಸ್ಥಳದಿಂದ ತೆರಳಲು ಬಿಡದೇ, ತಡೆದಿದ್ದಾರೆ.

ಶಿವೇಂದ್ರ ಹತ್ತಿರವಿರುವ ಫೋನ್ ಕಿತ್ತುಕೊಂಡು, ಹಲ್ಲೆ ನಡೆಸಿದ್ದಾರೆ. ಅಲ್ಲದೇ ಬಲವಂತವಾಗಿ ಮನೆಯೊಳಗೆ ಕೂಡಿ ಹಾಕಿದ್ದಾರೆ. ಈ ಮಾಹಿತಿ ತಿಳಿದ ಸಚಿವ ತನ್ವೀರ್ ಸೇಠ್ ನಮ್ಮ ವಿರುದ್ಧ ಬರೆದರೇ ಸುಮ್ಮನೇ ಇರುವುದಿಲ್ಲ ಎಂದು ಧಮ್ಕಿ ಹಾಕಿ, ನಂತರ ಬಿಡುಗಡೆ ಮಾಡಿದ್ದಾರೆ. ವರದಿಗಾರನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿ, ಗುಂಡಾಗಿರಿ ಪ್ರದರ್ಶಿಸಿರುವ ಸಚಿವ ತನ್ವೀರ್ ಸೇಠ ವಿರುದ್ಧ ದೂರು ದಾಖಲಿಸಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search