• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡಾ.ಕೇಶವ್ ಬಲಿರಾಮ್ ಹೆಡ್ಗೆವಾರ್ ಸ್ಮಾರಕ ಇನ್ನು ಪ್ರವಾಸಿ ತಾಣವಾಗಿ ಮಹಾರಾಷ್ಟ್ರ ಸರ್ಕಾರ ಘೋಷಣೆ!

TNN Correspondent Posted On May 8, 2018
0


0
Shares
  • Share On Facebook
  • Tweet It

ಮುಂಬೈ: ಮಹಾರಾಷ್ಟ್ರ ಸರ್ಕಾರ ಮಹತ್ತರ ಘೋಷಣೆಯೊಂದನ್ನು ಮಾಡಿದ್ದು, ರಾಷ್ಟ್ರೀಯ ಸ್ವಯಂ ಸಂಘದ ಸಂಸ್ಥಾಪಕ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್ ಸ್ಮಾರಕವನ್ನು ಪ್ರವಾಸಿ ತಾಣ ಎಂದು ಘೋಷಿಸಿದೆ.

ನಾಗಪುರದಲ್ಲಿ ಇರುವ ಸ್ಮೃತಿ ಮಂದಿರ ಎಂದೇ ಪ್ರಸಿದ್ಧಿಯಾಗಿರುವ ಸ್ಮಾರಕವನ್ನು ಮಹಾರಾಷ್ಟ್ರ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಪೋರೇಷನ್ ಹಾಗೂ ಜಿಲ್ಲಾ ಯೋಜನಾ ಆಯೋಗ ಶಿಫಾರಸಿನ ಮೇರೆಗೆ ಸಿ ಗ್ರೇಡ್ ಪ್ರವಾಸಿ ತಾಣದ ಸ್ಥಾನಮಾನ ನೀಡಿ ಘೋಷಣೆ ಮಾಡಿದೆ.

ನಾಗಪುರ ಬಿಜೆಪಿ ಉಪಾಧ್ಯಕ್ಷ ಭೂಷಣ್ ದಾವ್ಡೆ ಅವರು ಒಂದು ವರ್ಷದ ಹಿಂದೆ ನಾಗಪುರದ ರೇಷಿಮ್ ಬಾಗ್ ಸ್ಮೃತಿ ಮಂದಿರ್ ಸ್ಮಾರಕವನ್ನು ಪ್ರವಾಸಿ ತಾಣ ಎಂಬುದಾಗಿ ಘೋಷಿಸಬೇಕು ಎಂದು ಬೇಡಿಕೆ ಇಟ್ಟು ಮನವಿ ಸಲ್ಲಿಸಿದ್ದರು. ಈಗ ಒಂದು ವರ್ಷದ ಬಳಿಕ ಸ್ಥಾನಮಾನ ಸಿಕ್ಕಿದೆ.

ಸ್ಮೃತಿ ಮಂದಿರ್ ಪ್ರಮುಖ ಸ್ಮಾರಕವಾಗಿದ್ದು, ವಿಜಯ ದಶಮಿ ಸೇರಿ ಹಲವು ಪ್ರಮುಖ ದಿನಗಳಂದು ನೂರಾರು ಜನ ಸೇರುತ್ತಾರೆ. ಈಗ ಪ್ರವಾಸಿ ತಾಣ ಸ್ಥಾನಮಾನವೂ ಸಿಕ್ಕಿದ್ದು, ನಾಗಪುರ ನಗರ ಪಾಲಿಕೆ ಸ್ಮಾರಕದ ಅಭಿವೃದ್ಧಿಗೆ 3 ಕೋಟಿ ರೂಪಾಯಿ ಸಹ ಮಂಜೂರು ಮಾಡಿದೆ.

ಡಾ.ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರು ಬೇರೆ ನಾಲ್ಕು ಜನರೊಂದಿಗೆ ಸೇರಿ ಮಹಲ್ ಎಂಬಲ್ಲಿ 1925ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯನ್ನು ಸ್ಥಾಪಿಸಿದರು. ಇವರು 1940ರಂದು ನಿಧನರಾಗಿದ್ದು, ನಾಗಪುರದಲ್ಲಿ ಶವಸಂಸ್ಕಾರ ಮಾಡಲಾಗಿತ್ತು. ಇದು ಮುಂದೆ ಸ್ಮಾರಕವಾಗಿ ಬದಲಾವಣೆಯಾಗಿತ್ತು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search