• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೈಸರ್ಗಿಕ ವಿಕೋಪದ ಮುನ್ಸೂಚನೆ ತಿಳಿಯಲು ನರೇಂದ್ರ ಮೋದಿ ಸರ್ಕಾರ ಯಾವ ಕ್ರಮ ಕೈಗೊಳ್ಳಲು ಮುಂದಾಗಿದೆ ಗೊತ್ತಾ?

TNN Correspondent Posted On May 9, 2018
0


0
Shares
  • Share On Facebook
  • Tweet It

ದೆಹಲಿ: ಅದು ಸುನಾಮಿ ಬರಲಿ, ಚಂಡಮಾರುತ ಅಪ್ಪಳಿಸಲಿ, ನೆರೆ ಹಾವಳಿ ಬರಲಿ, ಸರ್ಕಾರ ಮಾಡುವುದು ಒಂದೇ, ಪರಿಹಾರ ಘೋಷಣೆ. ಅದರಲ್ಲಿ ಸತ್ತವರಿಗಿಷ್ಟು, ಗಾಯಗೊಂಡವರಿಗೆ ಇಷ್ಟು, ಮನೆ ಕಳೆದುಕೊಂಡವರಿಗೆ ಇಷ್ಟು ಎಂಬ ವರ್ಗಗಳು ಬೇರೆ ಬೇರೆ.

ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾತ್ರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಜನರ ಹಿತದೃಷ್ಟಿಯಿಂದ ಯಾವುದೇ ಹವಾಮಾನ ವೈಪರೀತ್ಯ ಆಗುವ ಮೊದಲು ಮುನ್ಸೂಚನೆ ಸಿಗುವ ತಂತ್ರಜ್ಞಾನವೊಂದನ್ನು ಅಭಿವೃದ್ಧಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಹೌದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಭಾರತೀಯ ಹವಾಮಾನ ಇಲಾಖೆ ಹಾಗೂ ಟೆಲಿಕಾಂ ಇಲಾಖೆ ಸಹಯೋಗದಲ್ಲಿ ಎಸ್ಎಂಎಸ್ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಯೋಜನೆ ರೂಪಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅಂದರೆ, ಯಾವುದೇ ಮಹಾನಗರ, ಜಿಲ್ಲೆ, ತಾಲೂಕು, ಪಟ್ಟಣ, ಹೋಬಳಿ… ಹೀಗೆ ಯಾವುದೇ ಪ್ರದೇಶಕ್ಕಾದರೂ ಈ ಎಸ್ಎಂಎಸ್ ತಂತ್ರಜ್ಞಾನ ಅಳವಡಿಸುವುದು. ಇದು ಹವಾಮಾನ ವೈಪರೀತ್ಯದ ಲಕ್ಷಣಗಳನ್ನು ಗ್ರಹಿಸಿ ಜನರಿಗೆ ಅಥವಾ ಅಧಿಕಾರಿಗಳಿಗೆ ಸಂದೇಶ ರವಾನಿಸುವ ತಂತ್ರಜ್ಞಾನ ಹೊಂದಿದೆ.

ಹೀಗೆ ಹವಾಮಾನ ವೈಪರೀತ್ಯದ ಕುರಿತು ಬಂದ ಸಂದೇಶದ ಅನ್ವಯ ಆಯಾ ಸೀಮಿತ ಪ್ರದೇಶದ ಜನರನ್ನು ಮುಂಜಾಗ್ರತೆಯಾಗಿ ಬೇರೆ ಕಡೆ ಸ್ಥಳಾಂತರಿಸುವುದು ತಂತ್ರಜ್ಞಾನದ ಉದ್ದೇಶವಾಗಿದೆ. ಇತ್ತೀಚೆಗೆ ಉತ್ತರಾಖಂಡ, ರಾಜಸ್ಥಾನ ಸೇರಿ ಹಲವೆಡೆ ಚಂಡಮಾರುತದಿಂದ ನೂರಾರು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

 

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search