• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೈಸರ್ಗಿಕ ವಿಕೋಪದ ಮುನ್ಸೂಚನೆ ತಿಳಿಯಲು ನರೇಂದ್ರ ಮೋದಿ ಸರ್ಕಾರ ಯಾವ ಕ್ರಮ ಕೈಗೊಳ್ಳಲು ಮುಂದಾಗಿದೆ ಗೊತ್ತಾ?

TNN Correspondent Posted On May 9, 2018


  • Share On Facebook
  • Tweet It

ದೆಹಲಿ: ಅದು ಸುನಾಮಿ ಬರಲಿ, ಚಂಡಮಾರುತ ಅಪ್ಪಳಿಸಲಿ, ನೆರೆ ಹಾವಳಿ ಬರಲಿ, ಸರ್ಕಾರ ಮಾಡುವುದು ಒಂದೇ, ಪರಿಹಾರ ಘೋಷಣೆ. ಅದರಲ್ಲಿ ಸತ್ತವರಿಗಿಷ್ಟು, ಗಾಯಗೊಂಡವರಿಗೆ ಇಷ್ಟು, ಮನೆ ಕಳೆದುಕೊಂಡವರಿಗೆ ಇಷ್ಟು ಎಂಬ ವರ್ಗಗಳು ಬೇರೆ ಬೇರೆ.

ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾತ್ರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಜನರ ಹಿತದೃಷ್ಟಿಯಿಂದ ಯಾವುದೇ ಹವಾಮಾನ ವೈಪರೀತ್ಯ ಆಗುವ ಮೊದಲು ಮುನ್ಸೂಚನೆ ಸಿಗುವ ತಂತ್ರಜ್ಞಾನವೊಂದನ್ನು ಅಭಿವೃದ್ಧಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಹೌದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಭಾರತೀಯ ಹವಾಮಾನ ಇಲಾಖೆ ಹಾಗೂ ಟೆಲಿಕಾಂ ಇಲಾಖೆ ಸಹಯೋಗದಲ್ಲಿ ಎಸ್ಎಂಎಸ್ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಯೋಜನೆ ರೂಪಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅಂದರೆ, ಯಾವುದೇ ಮಹಾನಗರ, ಜಿಲ್ಲೆ, ತಾಲೂಕು, ಪಟ್ಟಣ, ಹೋಬಳಿ… ಹೀಗೆ ಯಾವುದೇ ಪ್ರದೇಶಕ್ಕಾದರೂ ಈ ಎಸ್ಎಂಎಸ್ ತಂತ್ರಜ್ಞಾನ ಅಳವಡಿಸುವುದು. ಇದು ಹವಾಮಾನ ವೈಪರೀತ್ಯದ ಲಕ್ಷಣಗಳನ್ನು ಗ್ರಹಿಸಿ ಜನರಿಗೆ ಅಥವಾ ಅಧಿಕಾರಿಗಳಿಗೆ ಸಂದೇಶ ರವಾನಿಸುವ ತಂತ್ರಜ್ಞಾನ ಹೊಂದಿದೆ.

ಹೀಗೆ ಹವಾಮಾನ ವೈಪರೀತ್ಯದ ಕುರಿತು ಬಂದ ಸಂದೇಶದ ಅನ್ವಯ ಆಯಾ ಸೀಮಿತ ಪ್ರದೇಶದ ಜನರನ್ನು ಮುಂಜಾಗ್ರತೆಯಾಗಿ ಬೇರೆ ಕಡೆ ಸ್ಥಳಾಂತರಿಸುವುದು ತಂತ್ರಜ್ಞಾನದ ಉದ್ದೇಶವಾಗಿದೆ. ಇತ್ತೀಚೆಗೆ ಉತ್ತರಾಖಂಡ, ರಾಜಸ್ಥಾನ ಸೇರಿ ಹಲವೆಡೆ ಚಂಡಮಾರುತದಿಂದ ನೂರಾರು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

 

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search