• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೈಸರ್ಗಿಕ ವಿಕೋಪದ ಮುನ್ಸೂಚನೆ ತಿಳಿಯಲು ನರೇಂದ್ರ ಮೋದಿ ಸರ್ಕಾರ ಯಾವ ಕ್ರಮ ಕೈಗೊಳ್ಳಲು ಮುಂದಾಗಿದೆ ಗೊತ್ತಾ?

TNN Correspondent Posted On May 9, 2018
0


0
Shares
  • Share On Facebook
  • Tweet It

ದೆಹಲಿ: ಅದು ಸುನಾಮಿ ಬರಲಿ, ಚಂಡಮಾರುತ ಅಪ್ಪಳಿಸಲಿ, ನೆರೆ ಹಾವಳಿ ಬರಲಿ, ಸರ್ಕಾರ ಮಾಡುವುದು ಒಂದೇ, ಪರಿಹಾರ ಘೋಷಣೆ. ಅದರಲ್ಲಿ ಸತ್ತವರಿಗಿಷ್ಟು, ಗಾಯಗೊಂಡವರಿಗೆ ಇಷ್ಟು, ಮನೆ ಕಳೆದುಕೊಂಡವರಿಗೆ ಇಷ್ಟು ಎಂಬ ವರ್ಗಗಳು ಬೇರೆ ಬೇರೆ.

ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾತ್ರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಜನರ ಹಿತದೃಷ್ಟಿಯಿಂದ ಯಾವುದೇ ಹವಾಮಾನ ವೈಪರೀತ್ಯ ಆಗುವ ಮೊದಲು ಮುನ್ಸೂಚನೆ ಸಿಗುವ ತಂತ್ರಜ್ಞಾನವೊಂದನ್ನು ಅಭಿವೃದ್ಧಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಹೌದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಭಾರತೀಯ ಹವಾಮಾನ ಇಲಾಖೆ ಹಾಗೂ ಟೆಲಿಕಾಂ ಇಲಾಖೆ ಸಹಯೋಗದಲ್ಲಿ ಎಸ್ಎಂಎಸ್ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಯೋಜನೆ ರೂಪಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅಂದರೆ, ಯಾವುದೇ ಮಹಾನಗರ, ಜಿಲ್ಲೆ, ತಾಲೂಕು, ಪಟ್ಟಣ, ಹೋಬಳಿ… ಹೀಗೆ ಯಾವುದೇ ಪ್ರದೇಶಕ್ಕಾದರೂ ಈ ಎಸ್ಎಂಎಸ್ ತಂತ್ರಜ್ಞಾನ ಅಳವಡಿಸುವುದು. ಇದು ಹವಾಮಾನ ವೈಪರೀತ್ಯದ ಲಕ್ಷಣಗಳನ್ನು ಗ್ರಹಿಸಿ ಜನರಿಗೆ ಅಥವಾ ಅಧಿಕಾರಿಗಳಿಗೆ ಸಂದೇಶ ರವಾನಿಸುವ ತಂತ್ರಜ್ಞಾನ ಹೊಂದಿದೆ.

ಹೀಗೆ ಹವಾಮಾನ ವೈಪರೀತ್ಯದ ಕುರಿತು ಬಂದ ಸಂದೇಶದ ಅನ್ವಯ ಆಯಾ ಸೀಮಿತ ಪ್ರದೇಶದ ಜನರನ್ನು ಮುಂಜಾಗ್ರತೆಯಾಗಿ ಬೇರೆ ಕಡೆ ಸ್ಥಳಾಂತರಿಸುವುದು ತಂತ್ರಜ್ಞಾನದ ಉದ್ದೇಶವಾಗಿದೆ. ಇತ್ತೀಚೆಗೆ ಉತ್ತರಾಖಂಡ, ರಾಜಸ್ಥಾನ ಸೇರಿ ಹಲವೆಡೆ ಚಂಡಮಾರುತದಿಂದ ನೂರಾರು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

 

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search