• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿನ್ನಾನನ್ನು ಬೆಂಬಲಿಸುವ ಮುಸ್ಲಿಮರ ವಿರುದ್ಧ ಫತ್ವಾ ಹೊರಡಿಸಿದ ಮೌಲ್ವಿ

TNN Correspondent Posted On May 9, 2018
0


0
Shares
  • Share On Facebook
  • Tweet It

ದೆಹಲಿ: ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ದೇಶ ವಿಭಜನೆಯ ರೂವಾರಿ ಮಹಮ್ಮದ ಅಲಿ ಜಿನ್ನಾ ಭಾವಚಿತ್ರ ಅಳವಡಿಸಿರುವ ವಿವಾದ ತೀವ್ರವಾಗಿದ್ದು, ದಿನಕ್ಕೊಂದು ರೂಪ ಪಡೆಯುತ್ತಿದೆ. ಜಿನ್ನಾ ಭಾವಚಿತ್ರವನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿ ಹಿಂದೂ ಪರ, ರಾಷ್ಟ್ರಭಕ್ತ ದೇಶಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕೆಲವು ಮುಸ್ಲಿಂ ಸಂಘಟನೆಗಳು ದೇಶವಿರೋಧಿ ಜಿನ್ನಾ ಭಾವಚಿತ್ರ ಇರಲಿ ಎಂದು ಆಗ್ರಹಿಸಿದ್ದವು. ಇದಕ್ಕೆ ಪರ ವಿರೋಧ ಪ್ರತಿಕ್ರಿಯೆ ಬಂದಿದ್ದವು. ಇದೀಗ ದೇಶ ವಿಭಜಕ ಜಿನ್ನಾ ವಿರುದ್ಧ ಮುಸ್ಲಿಮರೆ ತಿರುಗಿಬಿದ್ದಿದ್ದು, ಜಿನ್ನಾನನ್ನು ಸಮರ್ಥಿಸುವವರ ವಿರುದ್ಧ ಮುಸ್ಲಿಂ ಮೌಲ್ವಿಯೊಬ್ಬರು ಫತ್ವಾ ಹೊರಡಿಸುವ ಮೂಲಕ, ದೇಶ ವಿರೋಧಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ.

ಬರೆಲಿಯ ಅಲಾ ಹಜರತ್ ದರ್ಗಾದ ಮೌಲ್ವಿ ಜಿನ್ನಾ ಬೆಂಬಲಿಸುವವರ ವಿರುದ್ಧ ಫತ್ವಾ ಹೊರಡಿಸಿದ್ದಾರೆ. ಭಾರತದ ಯಾವುದೇ ಮುಸ್ಲಿಮರು ಮಹಮ್ಮದ ಅಲಿ ಜಿನ್ನಾರನ್ನು ಬೆಂಬಲಿಸಬಾರದು. ಬೆಂಬಲಿಸುವುದು ತಪ್ಪು. ಜಿನ್ನಾ ಮುಸ್ಲಿಮರಿಗೆ ಮಾದರಿ ವ್ಯಕ್ತಿಯಲ್ಲ. ಆತ ವಿರೋಧಿ ರಾಷ್ಟ್ರದ ಜನಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲಿಘಡ ಮುಸ್ಲಿಂ ವಿವಿಯಲ್ಲಿ ಉಂಟಾಗಿರುವ ಗಲಭೆ ತೀವ್ರವಾಗಿ ಪ್ರತಿಭಟನೆ ವೇಳೆ ಪೊಲೀಸರು ಗಾಯಗೊಂಡಿದ್ದರು. ಅಲ್ಲದೇ ಇತ್ತೀಚೆಗೆ ಮುಸ್ಲಿಂ ಮುಖಂಡರೊಬ್ಬರು ದೇಶದ್ರೋಹಿ ಜಿನ್ನಾನ ಭಾವಚಿತ್ರ ಸುಟ್ಟು ಹಾಕಿದವರಿಗೆ ಒಂದು ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿ, ದೇಶಭಕ್ತಿ ಮೆರೆದಿದ್ದರು. ಇದೀಗ ಜಿನ್ನಾನನ್ನು ಬೆಂಬಲಿಸುವವರಿಗೆ ಫತ್ವಾ ಹೊರಡಿಸಿರುವುದು ಹೊಸ ಬದಲಾವಣೆಗೆ ಸಾಕ್ಷಿಯಾಗಿ ನಿಂತಿದೆ. ದೇಶದ ಮುಸ್ಲಿಂ ದೇಶ ಭಕ್ತರು ಎಂಬುದನ್ನು ದರ್ಗಾ ಮತ್ತು ಕೆಲ ಮುಸ್ಲಿಂ ಮುಖಂಡರು ಸಾಬೀತು ಪಡಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search