• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೈನಿಕರ ಕ್ಷಮೆಗೆ ಮಿಡಿಯಿತು ಉಗ್ರನ ಮನ, ಪ್ರಾಣಭಿಕ್ಷೆ ನೀಡಿದ ಯೋಧರಿಗೆ ನಮನ

TNN Correspondent Posted On May 11, 2018


  • Share On Facebook
  • Tweet It

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಜಮ್ಮು-ಕಾಶ್ಮೀರದಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ಪಾಕಿಸ್ತಾನಿ ಉಗ್ರರನ್ನು ಹೆಡೆಮುರಿಕಟ್ಟಲಾಗುತ್ತಿದೆ. ಪಾಕಿಸ್ತಾನದಿಂದ ಹಣಪಡೆದ ಪ್ರತ್ಯೆಕತಾವಾದಿಗಳಿಗೆ ಎನ್ಐಎ ಮೂಲಕ ಬಿಸಿ ಮುಟ್ಟಿಸಲಾಗಿದೆ.

ಹಾಗಂತ ಬರೀ ಗುಂಡಿನ ದಾಳಿಗಳ ಮೂಲಕವೇ ಜಮ್ಮು-ಕಾಶ್ಮೀರದಲ್ಲಿ ತಪ್ಪು ಮಾಡಿದವರಿಗೆ ಪಾಠ ಕಲಿಸುತ್ತಿಲ್ಲ. ಬದಲಾಗಿ ಕಲ್ಲು ತೂರಾಟಗಾರರಿಗೆ ನಾಗರಿಕರಂತೆ ಜೀವನ ನಡೆಸಲು ಪ್ರಕರಣ ಕೈಬಿಟ್ಟು ಜೀವನ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಇದೇ ರೀತಿ ಇತ್ತೀಚೆಗೆ ಕಾಶ್ಮೀರದ ಬಾರಾಮುಲ್ಲಾದಲ್ಲಿ ಗುಂಡಿನ ದಾಳಿ ಮಾಡಿ ಮೂವರು ಯುವಕರನ್ನು ಹತ್ಯೆಗೈದ ಉಗ್ರನನ್ನು ಸೈನಿಕರು ಬಂಧಿಸಿದ್ದು, ಕೊಲ್ಲದೆ ಬಿಟ್ಟ ಯೋಧರಿಗೆ ಉಗ್ರ ಕೃತಜ್ಞತೆ ಸಲ್ಲಿಸಿದ್ದಾನೆ.

ಹೌದು, ಕಳೆದ ಏ.30ರಂದು ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಐಜಾಜ್ ದಾಳಿ ಮಾಡಿ ಮೂವರನ್ನು ಕೊಂದಿದ್ದ. ಇದಕ್ಕೆ ಪ್ರತಿಯಾಗಿ ಕಾರ್ಯಾಚರಣೆ ನಡೆಸಿದ ಸೈನಿಕರು ಐಜಾಜ್ ಸೇರಿ ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ.

ಹೀಗೆ ಯೋಧರು ಎನ್ ಕೌಂಟರ್ ಮಾಡಿ ಬಿಸಾಕದೆ ಪ್ರಾಣಭಿಕ್ಷೆ ನೀಡಿರುವ ಕುರಿತು ಉಗ್ರ ಐಜಾಜ್ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ಪಾಕಿಸ್ತಾನದ ಪಿತೂರಿಯಿಂದ ನಾವು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಿದ್ದೆವು. ಆದರೆ ಯೋಧರು ಮಾತ್ರ ನಮ್ಮನ್ನು ಹತ್ಯೆ ಮಾಡದೆ ಪ್ರಾಣಭಿಕ್ಷೆ ನೀಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಎಂದಿದ್ದಾನೆ. ಅಲ್ಲದೆ, ಉಗ್ರ ಸಂಘಟನೆ ಸೇರಿರುವ ಎಲ್ಲರೂ ವಾಪಸ್ ಮನೆಗೆ ಬಂದು ನಾಗರಿಕರಾಗಿ ಬದುಕಬೇಕು ಎಂದು ಸಹ ಕರೆ ನೀಡಿದ್ದಾನೆ.

ಒಟ್ಟಿನಲ್ಲಿ ಸೈನಿಕರು ತೋರಿದ ಕರುಣೆಯಿಂದ ಉಗ್ರನೊಬ್ಬನ ಮನಸ್ಸು ಬದಲಾವಣೆಯಾಗಿ ನಾಗರಿಕನಂತೆ ಬದುಕುತ್ತೇನೆ ಎಂದು ಹೇಳಿರುವುದಲ್ಲದೆ, ಸಂಘಟನೆ ಬಿಟ್ಟು ಮಾನವರಾಗಿ ಎಂದು ಕರೆ ನೀಡಿರುವುದು ಸ್ವಾಗತಾರ್ಹವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search