• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ಕ್ಷಮೆಗೆ ಮಿಡಿಯಿತು ಉಗ್ರನ ಮನ, ಪ್ರಾಣಭಿಕ್ಷೆ ನೀಡಿದ ಯೋಧರಿಗೆ ನಮನ

TNN Correspondent Posted On May 11, 2018
0


0
Shares
  • Share On Facebook
  • Tweet It

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಜಮ್ಮು-ಕಾಶ್ಮೀರದಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ಪಾಕಿಸ್ತಾನಿ ಉಗ್ರರನ್ನು ಹೆಡೆಮುರಿಕಟ್ಟಲಾಗುತ್ತಿದೆ. ಪಾಕಿಸ್ತಾನದಿಂದ ಹಣಪಡೆದ ಪ್ರತ್ಯೆಕತಾವಾದಿಗಳಿಗೆ ಎನ್ಐಎ ಮೂಲಕ ಬಿಸಿ ಮುಟ್ಟಿಸಲಾಗಿದೆ.

ಹಾಗಂತ ಬರೀ ಗುಂಡಿನ ದಾಳಿಗಳ ಮೂಲಕವೇ ಜಮ್ಮು-ಕಾಶ್ಮೀರದಲ್ಲಿ ತಪ್ಪು ಮಾಡಿದವರಿಗೆ ಪಾಠ ಕಲಿಸುತ್ತಿಲ್ಲ. ಬದಲಾಗಿ ಕಲ್ಲು ತೂರಾಟಗಾರರಿಗೆ ನಾಗರಿಕರಂತೆ ಜೀವನ ನಡೆಸಲು ಪ್ರಕರಣ ಕೈಬಿಟ್ಟು ಜೀವನ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಇದೇ ರೀತಿ ಇತ್ತೀಚೆಗೆ ಕಾಶ್ಮೀರದ ಬಾರಾಮುಲ್ಲಾದಲ್ಲಿ ಗುಂಡಿನ ದಾಳಿ ಮಾಡಿ ಮೂವರು ಯುವಕರನ್ನು ಹತ್ಯೆಗೈದ ಉಗ್ರನನ್ನು ಸೈನಿಕರು ಬಂಧಿಸಿದ್ದು, ಕೊಲ್ಲದೆ ಬಿಟ್ಟ ಯೋಧರಿಗೆ ಉಗ್ರ ಕೃತಜ್ಞತೆ ಸಲ್ಲಿಸಿದ್ದಾನೆ.

ಹೌದು, ಕಳೆದ ಏ.30ರಂದು ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಐಜಾಜ್ ದಾಳಿ ಮಾಡಿ ಮೂವರನ್ನು ಕೊಂದಿದ್ದ. ಇದಕ್ಕೆ ಪ್ರತಿಯಾಗಿ ಕಾರ್ಯಾಚರಣೆ ನಡೆಸಿದ ಸೈನಿಕರು ಐಜಾಜ್ ಸೇರಿ ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ.

ಹೀಗೆ ಯೋಧರು ಎನ್ ಕೌಂಟರ್ ಮಾಡಿ ಬಿಸಾಕದೆ ಪ್ರಾಣಭಿಕ್ಷೆ ನೀಡಿರುವ ಕುರಿತು ಉಗ್ರ ಐಜಾಜ್ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ಪಾಕಿಸ್ತಾನದ ಪಿತೂರಿಯಿಂದ ನಾವು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಿದ್ದೆವು. ಆದರೆ ಯೋಧರು ಮಾತ್ರ ನಮ್ಮನ್ನು ಹತ್ಯೆ ಮಾಡದೆ ಪ್ರಾಣಭಿಕ್ಷೆ ನೀಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಎಂದಿದ್ದಾನೆ. ಅಲ್ಲದೆ, ಉಗ್ರ ಸಂಘಟನೆ ಸೇರಿರುವ ಎಲ್ಲರೂ ವಾಪಸ್ ಮನೆಗೆ ಬಂದು ನಾಗರಿಕರಾಗಿ ಬದುಕಬೇಕು ಎಂದು ಸಹ ಕರೆ ನೀಡಿದ್ದಾನೆ.

ಒಟ್ಟಿನಲ್ಲಿ ಸೈನಿಕರು ತೋರಿದ ಕರುಣೆಯಿಂದ ಉಗ್ರನೊಬ್ಬನ ಮನಸ್ಸು ಬದಲಾವಣೆಯಾಗಿ ನಾಗರಿಕನಂತೆ ಬದುಕುತ್ತೇನೆ ಎಂದು ಹೇಳಿರುವುದಲ್ಲದೆ, ಸಂಘಟನೆ ಬಿಟ್ಟು ಮಾನವರಾಗಿ ಎಂದು ಕರೆ ನೀಡಿರುವುದು ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search