• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ಕ್ಷಮೆಗೆ ಮಿಡಿಯಿತು ಉಗ್ರನ ಮನ, ಪ್ರಾಣಭಿಕ್ಷೆ ನೀಡಿದ ಯೋಧರಿಗೆ ನಮನ

TNN Correspondent Posted On May 11, 2018
0


0
Shares
  • Share On Facebook
  • Tweet It

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಜಮ್ಮು-ಕಾಶ್ಮೀರದಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ಪಾಕಿಸ್ತಾನಿ ಉಗ್ರರನ್ನು ಹೆಡೆಮುರಿಕಟ್ಟಲಾಗುತ್ತಿದೆ. ಪಾಕಿಸ್ತಾನದಿಂದ ಹಣಪಡೆದ ಪ್ರತ್ಯೆಕತಾವಾದಿಗಳಿಗೆ ಎನ್ಐಎ ಮೂಲಕ ಬಿಸಿ ಮುಟ್ಟಿಸಲಾಗಿದೆ.

ಹಾಗಂತ ಬರೀ ಗುಂಡಿನ ದಾಳಿಗಳ ಮೂಲಕವೇ ಜಮ್ಮು-ಕಾಶ್ಮೀರದಲ್ಲಿ ತಪ್ಪು ಮಾಡಿದವರಿಗೆ ಪಾಠ ಕಲಿಸುತ್ತಿಲ್ಲ. ಬದಲಾಗಿ ಕಲ್ಲು ತೂರಾಟಗಾರರಿಗೆ ನಾಗರಿಕರಂತೆ ಜೀವನ ನಡೆಸಲು ಪ್ರಕರಣ ಕೈಬಿಟ್ಟು ಜೀವನ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಇದೇ ರೀತಿ ಇತ್ತೀಚೆಗೆ ಕಾಶ್ಮೀರದ ಬಾರಾಮುಲ್ಲಾದಲ್ಲಿ ಗುಂಡಿನ ದಾಳಿ ಮಾಡಿ ಮೂವರು ಯುವಕರನ್ನು ಹತ್ಯೆಗೈದ ಉಗ್ರನನ್ನು ಸೈನಿಕರು ಬಂಧಿಸಿದ್ದು, ಕೊಲ್ಲದೆ ಬಿಟ್ಟ ಯೋಧರಿಗೆ ಉಗ್ರ ಕೃತಜ್ಞತೆ ಸಲ್ಲಿಸಿದ್ದಾನೆ.

ಹೌದು, ಕಳೆದ ಏ.30ರಂದು ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಐಜಾಜ್ ದಾಳಿ ಮಾಡಿ ಮೂವರನ್ನು ಕೊಂದಿದ್ದ. ಇದಕ್ಕೆ ಪ್ರತಿಯಾಗಿ ಕಾರ್ಯಾಚರಣೆ ನಡೆಸಿದ ಸೈನಿಕರು ಐಜಾಜ್ ಸೇರಿ ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ.

ಹೀಗೆ ಯೋಧರು ಎನ್ ಕೌಂಟರ್ ಮಾಡಿ ಬಿಸಾಕದೆ ಪ್ರಾಣಭಿಕ್ಷೆ ನೀಡಿರುವ ಕುರಿತು ಉಗ್ರ ಐಜಾಜ್ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ಪಾಕಿಸ್ತಾನದ ಪಿತೂರಿಯಿಂದ ನಾವು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಿದ್ದೆವು. ಆದರೆ ಯೋಧರು ಮಾತ್ರ ನಮ್ಮನ್ನು ಹತ್ಯೆ ಮಾಡದೆ ಪ್ರಾಣಭಿಕ್ಷೆ ನೀಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಎಂದಿದ್ದಾನೆ. ಅಲ್ಲದೆ, ಉಗ್ರ ಸಂಘಟನೆ ಸೇರಿರುವ ಎಲ್ಲರೂ ವಾಪಸ್ ಮನೆಗೆ ಬಂದು ನಾಗರಿಕರಾಗಿ ಬದುಕಬೇಕು ಎಂದು ಸಹ ಕರೆ ನೀಡಿದ್ದಾನೆ.

ಒಟ್ಟಿನಲ್ಲಿ ಸೈನಿಕರು ತೋರಿದ ಕರುಣೆಯಿಂದ ಉಗ್ರನೊಬ್ಬನ ಮನಸ್ಸು ಬದಲಾವಣೆಯಾಗಿ ನಾಗರಿಕನಂತೆ ಬದುಕುತ್ತೇನೆ ಎಂದು ಹೇಳಿರುವುದಲ್ಲದೆ, ಸಂಘಟನೆ ಬಿಟ್ಟು ಮಾನವರಾಗಿ ಎಂದು ಕರೆ ನೀಡಿರುವುದು ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search