• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ಕ್ಷಮೆಗೆ ಮಿಡಿಯಿತು ಉಗ್ರನ ಮನ, ಪ್ರಾಣಭಿಕ್ಷೆ ನೀಡಿದ ಯೋಧರಿಗೆ ನಮನ

TNN Correspondent Posted On May 11, 2018
0


0
Shares
  • Share On Facebook
  • Tweet It

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಜಮ್ಮು-ಕಾಶ್ಮೀರದಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ಪಾಕಿಸ್ತಾನಿ ಉಗ್ರರನ್ನು ಹೆಡೆಮುರಿಕಟ್ಟಲಾಗುತ್ತಿದೆ. ಪಾಕಿಸ್ತಾನದಿಂದ ಹಣಪಡೆದ ಪ್ರತ್ಯೆಕತಾವಾದಿಗಳಿಗೆ ಎನ್ಐಎ ಮೂಲಕ ಬಿಸಿ ಮುಟ್ಟಿಸಲಾಗಿದೆ.

ಹಾಗಂತ ಬರೀ ಗುಂಡಿನ ದಾಳಿಗಳ ಮೂಲಕವೇ ಜಮ್ಮು-ಕಾಶ್ಮೀರದಲ್ಲಿ ತಪ್ಪು ಮಾಡಿದವರಿಗೆ ಪಾಠ ಕಲಿಸುತ್ತಿಲ್ಲ. ಬದಲಾಗಿ ಕಲ್ಲು ತೂರಾಟಗಾರರಿಗೆ ನಾಗರಿಕರಂತೆ ಜೀವನ ನಡೆಸಲು ಪ್ರಕರಣ ಕೈಬಿಟ್ಟು ಜೀವನ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಇದೇ ರೀತಿ ಇತ್ತೀಚೆಗೆ ಕಾಶ್ಮೀರದ ಬಾರಾಮುಲ್ಲಾದಲ್ಲಿ ಗುಂಡಿನ ದಾಳಿ ಮಾಡಿ ಮೂವರು ಯುವಕರನ್ನು ಹತ್ಯೆಗೈದ ಉಗ್ರನನ್ನು ಸೈನಿಕರು ಬಂಧಿಸಿದ್ದು, ಕೊಲ್ಲದೆ ಬಿಟ್ಟ ಯೋಧರಿಗೆ ಉಗ್ರ ಕೃತಜ್ಞತೆ ಸಲ್ಲಿಸಿದ್ದಾನೆ.

ಹೌದು, ಕಳೆದ ಏ.30ರಂದು ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಐಜಾಜ್ ದಾಳಿ ಮಾಡಿ ಮೂವರನ್ನು ಕೊಂದಿದ್ದ. ಇದಕ್ಕೆ ಪ್ರತಿಯಾಗಿ ಕಾರ್ಯಾಚರಣೆ ನಡೆಸಿದ ಸೈನಿಕರು ಐಜಾಜ್ ಸೇರಿ ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ.

ಹೀಗೆ ಯೋಧರು ಎನ್ ಕೌಂಟರ್ ಮಾಡಿ ಬಿಸಾಕದೆ ಪ್ರಾಣಭಿಕ್ಷೆ ನೀಡಿರುವ ಕುರಿತು ಉಗ್ರ ಐಜಾಜ್ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ಪಾಕಿಸ್ತಾನದ ಪಿತೂರಿಯಿಂದ ನಾವು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಿದ್ದೆವು. ಆದರೆ ಯೋಧರು ಮಾತ್ರ ನಮ್ಮನ್ನು ಹತ್ಯೆ ಮಾಡದೆ ಪ್ರಾಣಭಿಕ್ಷೆ ನೀಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಎಂದಿದ್ದಾನೆ. ಅಲ್ಲದೆ, ಉಗ್ರ ಸಂಘಟನೆ ಸೇರಿರುವ ಎಲ್ಲರೂ ವಾಪಸ್ ಮನೆಗೆ ಬಂದು ನಾಗರಿಕರಾಗಿ ಬದುಕಬೇಕು ಎಂದು ಸಹ ಕರೆ ನೀಡಿದ್ದಾನೆ.

ಒಟ್ಟಿನಲ್ಲಿ ಸೈನಿಕರು ತೋರಿದ ಕರುಣೆಯಿಂದ ಉಗ್ರನೊಬ್ಬನ ಮನಸ್ಸು ಬದಲಾವಣೆಯಾಗಿ ನಾಗರಿಕನಂತೆ ಬದುಕುತ್ತೇನೆ ಎಂದು ಹೇಳಿರುವುದಲ್ಲದೆ, ಸಂಘಟನೆ ಬಿಟ್ಟು ಮಾನವರಾಗಿ ಎಂದು ಕರೆ ನೀಡಿರುವುದು ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search