• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರು ಸಿಎಂ ಕ್ರಮಕ್ಕೆ ಅಂಜಿ ಆರೋಪಿಯೊಬ್ಬ ಹೇಗೆ ಶರಣಾಗಿದ್ದಾನೆ ನೋಡಿ!

TNN Correspondent Posted On May 11, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ಗಣನೀಯವಾಗಿ ಅಪರಾಧ ಪ್ರಕರಣ ಕಡಿಮೆಯಾಗುತ್ತಿವೆ ಎಂಬುದಕ್ಕೆ ಇತ್ತೀಚೆಗೆ ಕಳ್ಳತನ ಸೇರಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರು ಖುದ್ದು ಪೊಲೀಸ್ ಠಾಣೆಗೆ ಶರಣಾಗುತ್ತಿರುವುದು ಸಾಕ್ಷಿಯಾಗಿದೆ.

ಇದರ ಹಿಂದೆ ಯೋಗಿ ಆದಿತ್ಯನಾಥರ ಆದೇಶ ಇದೆ ಎಂಬುದು ಸಹ ಎಲ್ಲರಿಗೂ ಗೊತ್ತಿದ್ದು, ಈಗ ಇಂಥಾದ್ದೇ ಘಟನೆಯೊಂದು ಸುದ್ದಿಯಾಗಿದ್ದು, ಹಲವು ದರೋಡೆ, ಕೊಲೆ ಯತ್ನ ಸೇರಿ ಹಲವು ಪ್ರಕರಣಗಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ.

ದೀಪಸ್ರಾವ್ ಎಂಬಲ್ಲಿ ನೆಲೆಸಿದ್ದ ಫೈಜನ್ ಅಹ್ಮದ್ ಎಂಬಾತ ಹಲವು ಕಳ್ಳತನ ಹಾಗೂ ಕೊಲೆಗೆ ಯತ್ನ ಆರೋಪದಲ್ಲಿ ಪ್ರಕರಣ ದಾಖಲಾದ ಕಾರಣ 2014ರಿಂದಲೇ ತಲೆಮರೆಸಿಕೊಂಡಿದ್ದ.

ಆದರೆ ಯೋಗಿ ಆದಿತ್ಯನಾಥರು ಯಾವಾಗ ಆಡಳಿತಕ್ಕೆ ಬಂದು ಅಪರಾಧಿಗಳನ್ನು ಹೆಡೆಮುರಿಕಟ್ಟಲು ಶುರು ಮಾಡಿದರೋ ಈತನಿಗೆ ಭಯವಾಗಿದೆ. ಅಲ್ಲದೆ ಎನ್ಕೌಂಟರ್ ಮೂಲಕ ಗೂಂಡಾಗಳನ್ನು ಮಟ್ಟ ಹಾಕುವ ಕ್ರಮದಿಂದ ಈತ ತೀರಾ ಭೀತಿಗೊಳಗಾಗಿದ್ದಾನೆ ಎಂದು ತಿಳಿದುಬಂದಿದೆ.

ಹಾಗಾಗಿ ಅಹ್ಮದ್ ಅಮ್ರೋಹಾ ಪೊಲೀಸ್ ವರಿಷ್ಠಾಕಾರಿ ಕಚೇರಿಗೆ ಬಂದು ಶರಣಾಗಿದ್ದಾನೆ.

ಅಲ್ಲದೆ ಆತನ ಕೊರಳಿನಲ್ಲಿ ಭಿತ್ತಿಪತ್ರವೊಂದು ಸಿಕ್ಕಿದ್ದು, ನಾನು ಇನ್ನೆಂದೂ ಅಪರಾಧದಲ್ಲಿ ತೊಡಗುವುದಿಲ್ಲ ಎಂದು ಪ್ರಮಾಣ ಮಾಡುತ್ತೇನೆ. ನನಗೆ ಗುಂಡು ಹಾರಿಸಬೇಡಿ ಎಂದು ಬರೆದುಕೊಂಡಿರುವುದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ.

ಪೊಲೀಸ್ ವರಿಷ್ಠಾಕಾರಿ ಕಚೇರಿಗೆ ಆಗಮಿಸುವ ಮುನ್ನ ಆತ ಮಾಧ್ಯಮದವರಿಗೆ ತಾನು ಶರಣಾಗುವ ಕುರಿತು ಮಾಹಿತಿ ನೀಡಿದ್ದ. ಬಳಿಕ ಕಚೇರಿಗೆ ತೆರಳಿದ ಅಹ್ಮದ್ ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಬ್ರಿಜೇಶ್ ಸಿಂಗ್ ಅವರನ್ನು ಭೇಟಿಯಾಗಿ ಶರಣಾಗಿದ್ದಾನೆ.

ಇನ್ನೆಂದೂ ನಾನು ಯಾವುದೇ ಕಳ್ಳತನ, ಕೊಲೆ ಮಾಡುವುದಿಲ್ಲ. ನನ್ನನ್ನು ಕೊಲ್ಲಬೇಡಿ, ನನ್ನ ಕೊನೆ ಉಸಿರಿರುವವರೆಗೂ ಜೈಲಿನಲ್ಲೇ ಉಳಿಯುತ್ತೇನೆ ಎಂದು ಪೊಲೀಸರಿಗೆ ಮನವಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ಕಸ್ಟಡಿಗೆ ವಹಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಆಡಳಿತಕ್ಕೆ ಬಂದ ಬಳಿಕ ಅಪರಾಧ ಪ್ರಕರಣದಲ್ಲಿ ಸಿಲುಕಿದ ಆರೋಪಿಗಳೇ ಖುದ್ದು ಪೊಲೀಸ್ ಠಾಣೆಗೆ ಬಂದು ಶರಣಾಗುತ್ತಿರುವುದು ಉತ್ತಮ ಬೆಳವಣಿಗೆಯ ಜತೆಗೆ ಯೋಗಿ ಆದಿತ್ಯನಾಥರ ದಕ್ಷತೆಯ ಪ್ರತಿಬಿಂಬವೂ ಆಗಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆಯಾದರೂ, 22 ಹಿಂದೂಗಳ ಮಾರಣ ಹೋಮ ನಡೆಸಿದರೂ ರಾಜ್ಯ ಸರ್ಕಾರ ಮಾತ್ರ ಮಗುಮ್ಮಾಗಿ ಕುಳಿತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search