• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರು ಸಿಎಂ ಕ್ರಮಕ್ಕೆ ಅಂಜಿ ಆರೋಪಿಯೊಬ್ಬ ಹೇಗೆ ಶರಣಾಗಿದ್ದಾನೆ ನೋಡಿ!

TNN Correspondent Posted On May 11, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ಗಣನೀಯವಾಗಿ ಅಪರಾಧ ಪ್ರಕರಣ ಕಡಿಮೆಯಾಗುತ್ತಿವೆ ಎಂಬುದಕ್ಕೆ ಇತ್ತೀಚೆಗೆ ಕಳ್ಳತನ ಸೇರಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರು ಖುದ್ದು ಪೊಲೀಸ್ ಠಾಣೆಗೆ ಶರಣಾಗುತ್ತಿರುವುದು ಸಾಕ್ಷಿಯಾಗಿದೆ.

ಇದರ ಹಿಂದೆ ಯೋಗಿ ಆದಿತ್ಯನಾಥರ ಆದೇಶ ಇದೆ ಎಂಬುದು ಸಹ ಎಲ್ಲರಿಗೂ ಗೊತ್ತಿದ್ದು, ಈಗ ಇಂಥಾದ್ದೇ ಘಟನೆಯೊಂದು ಸುದ್ದಿಯಾಗಿದ್ದು, ಹಲವು ದರೋಡೆ, ಕೊಲೆ ಯತ್ನ ಸೇರಿ ಹಲವು ಪ್ರಕರಣಗಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ.

ದೀಪಸ್ರಾವ್ ಎಂಬಲ್ಲಿ ನೆಲೆಸಿದ್ದ ಫೈಜನ್ ಅಹ್ಮದ್ ಎಂಬಾತ ಹಲವು ಕಳ್ಳತನ ಹಾಗೂ ಕೊಲೆಗೆ ಯತ್ನ ಆರೋಪದಲ್ಲಿ ಪ್ರಕರಣ ದಾಖಲಾದ ಕಾರಣ 2014ರಿಂದಲೇ ತಲೆಮರೆಸಿಕೊಂಡಿದ್ದ.

ಆದರೆ ಯೋಗಿ ಆದಿತ್ಯನಾಥರು ಯಾವಾಗ ಆಡಳಿತಕ್ಕೆ ಬಂದು ಅಪರಾಧಿಗಳನ್ನು ಹೆಡೆಮುರಿಕಟ್ಟಲು ಶುರು ಮಾಡಿದರೋ ಈತನಿಗೆ ಭಯವಾಗಿದೆ. ಅಲ್ಲದೆ ಎನ್ಕೌಂಟರ್ ಮೂಲಕ ಗೂಂಡಾಗಳನ್ನು ಮಟ್ಟ ಹಾಕುವ ಕ್ರಮದಿಂದ ಈತ ತೀರಾ ಭೀತಿಗೊಳಗಾಗಿದ್ದಾನೆ ಎಂದು ತಿಳಿದುಬಂದಿದೆ.

ಹಾಗಾಗಿ ಅಹ್ಮದ್ ಅಮ್ರೋಹಾ ಪೊಲೀಸ್ ವರಿಷ್ಠಾಕಾರಿ ಕಚೇರಿಗೆ ಬಂದು ಶರಣಾಗಿದ್ದಾನೆ.

ಅಲ್ಲದೆ ಆತನ ಕೊರಳಿನಲ್ಲಿ ಭಿತ್ತಿಪತ್ರವೊಂದು ಸಿಕ್ಕಿದ್ದು, ನಾನು ಇನ್ನೆಂದೂ ಅಪರಾಧದಲ್ಲಿ ತೊಡಗುವುದಿಲ್ಲ ಎಂದು ಪ್ರಮಾಣ ಮಾಡುತ್ತೇನೆ. ನನಗೆ ಗುಂಡು ಹಾರಿಸಬೇಡಿ ಎಂದು ಬರೆದುಕೊಂಡಿರುವುದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ.

ಪೊಲೀಸ್ ವರಿಷ್ಠಾಕಾರಿ ಕಚೇರಿಗೆ ಆಗಮಿಸುವ ಮುನ್ನ ಆತ ಮಾಧ್ಯಮದವರಿಗೆ ತಾನು ಶರಣಾಗುವ ಕುರಿತು ಮಾಹಿತಿ ನೀಡಿದ್ದ. ಬಳಿಕ ಕಚೇರಿಗೆ ತೆರಳಿದ ಅಹ್ಮದ್ ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಬ್ರಿಜೇಶ್ ಸಿಂಗ್ ಅವರನ್ನು ಭೇಟಿಯಾಗಿ ಶರಣಾಗಿದ್ದಾನೆ.

ಇನ್ನೆಂದೂ ನಾನು ಯಾವುದೇ ಕಳ್ಳತನ, ಕೊಲೆ ಮಾಡುವುದಿಲ್ಲ. ನನ್ನನ್ನು ಕೊಲ್ಲಬೇಡಿ, ನನ್ನ ಕೊನೆ ಉಸಿರಿರುವವರೆಗೂ ಜೈಲಿನಲ್ಲೇ ಉಳಿಯುತ್ತೇನೆ ಎಂದು ಪೊಲೀಸರಿಗೆ ಮನವಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ಕಸ್ಟಡಿಗೆ ವಹಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಆಡಳಿತಕ್ಕೆ ಬಂದ ಬಳಿಕ ಅಪರಾಧ ಪ್ರಕರಣದಲ್ಲಿ ಸಿಲುಕಿದ ಆರೋಪಿಗಳೇ ಖುದ್ದು ಪೊಲೀಸ್ ಠಾಣೆಗೆ ಬಂದು ಶರಣಾಗುತ್ತಿರುವುದು ಉತ್ತಮ ಬೆಳವಣಿಗೆಯ ಜತೆಗೆ ಯೋಗಿ ಆದಿತ್ಯನಾಥರ ದಕ್ಷತೆಯ ಪ್ರತಿಬಿಂಬವೂ ಆಗಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆಯಾದರೂ, 22 ಹಿಂದೂಗಳ ಮಾರಣ ಹೋಮ ನಡೆಸಿದರೂ ರಾಜ್ಯ ಸರ್ಕಾರ ಮಾತ್ರ ಮಗುಮ್ಮಾಗಿ ಕುಳಿತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search