• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಲಿಸುತ್ತಿರುವ ರೈಲಿನಲ್ಲಿ ಲೈಂಗಿಕ ಕಿರುಕುಳದಿಂದ ಮಹಿಳೆ ರಕ್ಷಿಸಿದ ಪೇದೆಗೆ ರೈಲ್ವೆ ಸಚಿವಾಲಯದ ಪ್ರಶಸ್ತಿ

TNN Correspondent Posted On May 12, 2018
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ದೇಶದ ಹಲವೆಡೆ ನಿಯೋಜನೆಗೊಂಡಿರುವ ಭದ್ರತಾ ಸಿಬ್ಬಂದಿ ಯಾವಾಗಲೂ ಶೌರ್ಯ, ರಕ್ಷಣೆಗೆ ಹೆಸರು ಎಂಬ ಮಾತಿಗೆ ರೈಲ್ವೆ ಭದ್ರತಾ ಪಡೆ ಪೇದೆಯೊಬ್ಬರು ಅನ್ವರ್ಥವಾಗಿ ನಿಂತಿದ್ದು, ಅವರಿಗೆ ರೈಲ್ವೆ ಸಚಿವಾಲಯದಿಂದ ಸಿಗುವ ಶೌರ್ಯ ಪ್ರಶಸ್ತಿ ಲಭಿಸಿದೆ.

ಹೌದು, ಕಳೆದ ಏಪ್ರಿಲ್ 4, 2018ರಂದು ರೈಲೊಂದು ವೆಲಚೇರಿಯಿಂದ ಚಿಂತಾದ್ರಿಪೇಟೆಗೆ ಹೊರಟಿದ್ದ ರೈಲಿನಲ್ಲಿ ರಾತ್ರಿ 11.45ರ ಸುಮಾರಿಗೆ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.

ಇದನ್ನು ಗಮನಿಸಿದ ರೈಲ್ವೆ ಭದ್ರತಾ ಪಡೆಯ ಪೇದೆ ಕೆ,ಶಿವಾಜಿ, ಲೈಂಗಿಕ ಕಿರುಕುಳ ನೀಡುತ್ತಿದ್ದವನಿಗೆ ಹೊಡೆದು, ಮಹಿಳೆಯನ್ನು ರಕ್ಷಿಸಿದ್ದಾರೆ, ಬಳಿಕ ಆರೋಪಿಯನ್ನು ರೈಲ್ವೆ ಪೊಲೀಸರಿಗೆ ಒಪ್ಪಿಸಲಾಗಿದೆ.

ಬಳಿಕ ಮಹಿಳೆಯನ್ನು ರಕ್ಷಿಸಿ ಚೆನ್ನೈನ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದಾಗ್ಯೂ, ಪೇದೆಯವರ ಶೌರ್ಯದಿಂದ ಮಹಿಳೆಯೊಬ್ಬರ ಮಾನ ರಕ್ಷಣೆಯಾಗಿದ್ದು ಇಲಾಖೆಯ ಸಿಬ್ಬಂದಿ ಮೆಚ್ಚುಗೆ ವ್ಯಕ್ತಡಪಡಿಸಿದ್ದಾರೆ.

ಮೊದಲಿಗೆ ಪೇದೆಯ ಶೌರ್ಯ ಮೆಚ್ಚಿ ಪೂರ್ವ ರೈಲು ವಿಭಾಗದ ಜನರಲ್ ಇನ್ಸ್ಪೆಕ್ಟರ್ ಪೊನ್ನ್ ಮಾಣಿಕಾವೆಲ್ ಅವರು ಐದು ಸಾವಿರ ರೂಪಾಯಿ ನಗದು ಬಹುಮಾನ ನೀಡಿದ್ದರು,

ಹೀಗೆ ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯನ್ನು ರಕ್ಷಿಸಿದ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯದಿಂದ ಯಾವುದೇ ಅಧಿಕಾರಿ ಶೌರ್ಯ, ಭದ್ರತೆಯಲ್ಲಿ ಬದ್ಧತೆ ತೋರಿಸಿದರೆ ನೀಡುವ ಶೌರ್ಯ ಪ್ರಶಸ್ತಿ ನೀಡಲಾಗುವುದು ಎಂಬುದಾಗಿ ರೈಲ್ವೆ ಸಚಿವಾಲಯ ಘೋಷಿಸಿದೆ ಎಂದು ತಿಳಿದುಬಂದಿದೆ. ಬಹುಮಾನ ಒಂದು ಲಕ್ಷ ರೂಪಾಯಿ ನಗದು ಹೊಂದಿದೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search