• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಮಾಜ್ ಮಾಡಲು ಒಪ್ಪಲಿಲ್ಲ ಎಂದು ಬಾಲಕಿಯನ್ನೇ ಕೊಲ್ಲುತ್ತಾರೆಂದರೆ ಇದೆಂತಹ ಅಸಹಿಷ್ಣುತೆ!

TNN Correspondent Posted On May 12, 2018
0


0
Shares
  • Share On Facebook
  • Tweet It

ಮುಂಬೈ: ಯಾವುದೇ ಧರ್ಮವಾಗಲಿ, ಧರ್ಮಗ್ರಂಥವಾಗಲಿ, ದೇವರನ್ನು ಪೂಜಿಸಿ, ಪ್ರಾರ್ಥಿಸಿ, ಕೊನೆಯ ಪಕ್ಷ ಮನದಲ್ಲಾದರೂ ನಮಿಸಿ ಎಂದು ಹೇಳುತ್ತದೆಯೇ ವಿನಾ ಕಡ್ಡಾಯವಾಗಿ ದೇವರ ಮುಂದೆ ಮಂಡಿಯೂರಿ ಎಂದು ಹೇಳುವುದಿಲ್ಲ. ದೇವರೂ ಸಹ ಎಂದೂ ನನ್ನ ಮುಂದೆ ಮಂಡಿಯೂರಿ ಪ್ರಾರ್ಥಿಸಿ ಎಂದು ಯಾರ ಕನಸಲ್ಲೂ ಬಂದು ಹೇಳಿಲ್ಲ.

ಆದರೆ ಮುಂಬೈಯ ಆಂಟಾಪ್ ಹಿಲ್ ಎಂಬ ಪ್ರದೇಶದಲ್ಲಿ ಬಾಲಕಿಯೊಬ್ಬಳು ನಮಾಜ್ ಮಾಡಲು ಒಪ್ಪಲಿಲ್ಲ, ಕರೆದಾಗ ಬರಲಿಲ್ಲ ಎಂದು ಬಾಲಕಿಯ ಚಿಕ್ಕಮ್ಮ ಹಾಗೂ ಇಬ್ಬರು ಸೇರಿ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಹೌದು, ಬಾಲಕಿಯ ತಾಯಿ ತೀರಿ ಹೋದ ಕಾರಣ, ಮಗಳನ್ನು ಸಾಕಲು ಆಗದ ಅಪ್ಪ ಆಕೆಯನ್ನು ಚಿಕ್ಕಮ್ಮನ ಬಳಿ ಬಿಟ್ಟಿದ್ದ. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಕಳೆದ ಶುಕ್ರವಾರ ಬಾಲಕಿಗೆ ನಮಾಜು ಮಾಡಲು ಬಾ ಎಂದಿದ್ದಾರೆ. ದೇವರು ಎಂದರೆ ಸ್ಪಷ್ಟ ಕಲ್ಪನೆಯನ್ನೇ ಇರದ, ಪ್ರಾರ್ಥನೆ ಎಂದರೆ ಸಂಪೂರ್ಣವಾಗಿ ಗೊತ್ತಿರದ ಬಾಲಕಿ ನಮಾಜಿಗೆ ಬರುವುದಿಲ್ಲ ಎಂದಿದ್ದಾಳೆ ಎಂದು ತಿಳಿದುಬಂದಿದೆ.

ಆಗ ಸುಮ್ಮನಿರದ ಚಿಕ್ಕಮ್ಮ ನಮಾಜಿಗೆ ಬರಲೇಬೇಕು ಎಂದು ಬಾಲಕಿಗೆ ಒತ್ತಾಯಿಸಿದ್ದಾಳೆ. ಆಗಲೂ ಬಾಲಕಿ ಬರದ ಕಾರಣ ತನ್ನ ಇಬ್ಬರು ಸಂಬಂಧಿಯನ್ನು ಕರೆಸಿ ಬಾಲಕಿಯ ಕತ್ತಿಗೆ ದುಪ್ಪಟ್ಟಾದಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಬಾಲಕಿಯ ಉಸಿರು ನಿಂತ ಮೇಲೆ ಭೀತಿಗೊಳಗಾದ ಮೂವರೂ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು, ಬಚ್ಚಲಿನಲ್ಲಿ ಕಾಲು ಜಾರಿ ಬಿದ್ದಿದ್ದು, ಚಿಕಿತ್ಸೆ ನೀಡಿ ಎಂದಿದ್ದಾರೆ. ತಪಾಸಣೆ ಬಳಿಕ ಅನುಮಾನಗೊಂಡ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಮಾಧ್ಯಮದವರ ಎದುರು ಬಾಲಕಿಯ ತಂದೆ ಅಳಲು ತೋಡಿಕೊಂಡಿದ್ದು, ನನ್ನ ಮಗಳನ್ನು ಸಾಕಿ ಎಂದು ಅವರ ಮನೆಯಲ್ಲಿ ಬಿಟ್ಟಿದ್ದೇ ತಪ್ಪಾಯಿತಾ? ನಮಾಜು ಮಾಡದಿದ್ದರೆ ನನಗೆ ಹೇಳಬಹುದಿತ್ತು, ಆದರೆ ಕೊಲೆಯನ್ನೇ ಏಕೆ ಮಾಡಬೇಕಿತ್ತು ಎಂದು ಅವಲತ್ತುಕೊಂಡಿದ್ದಾರೆ.

ಈಗ ಹೇಳಿ ಬಾಲಕಿ ನಮಾಜು ಮಾಡಲು ಒಪ್ಪದಿರುವುದೇ ತಪ್ಪಾಯಿತೇ? ಯಾವ ದೇವರು ತಾನೆ ನನಗೆ ಪ್ರಾರ್ಥನೆ ಮಾಡಲೇಬೇಕು ಎಂದು ಯಾವ ಧರ್ಮಗುರುವಿಗೆ ಹೇಳಿದ್ದಾನೆ? ಯಾವ ಧರ್ಮಗ್ರಂಥದಲ್ಲಿ ಪ್ರಾರ್ಥನೆ ಮಾಡದಿರುವುದು ಕೊಲೆ ಮಾಡುವಷ್ಟು ಅಪರಾಧ ಎಂದು ಉಲ್ಲೇಖಿಸಲಾಗಿದೆ? ಇಂತಹ ಧರ್ಮ ಅಸಹಿಷ್ಣುತೆಗೆ ಏನೆಂದು ಕರೆಯುವುದು? ಏಕೆ ಈ ಕುರಿತು ಯಾವ ಮಾಧ್ಯಮಗಳೂ ವರದಿ ಮಾಡುವುದಿಲ್ಲ?

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search