• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೆಸರು ಬದಲಿಸಿ ಯುವತಿಯ ಪ್ರೀತಿಸಿದ ಮುಸ್ಲಿಂ ಯುವಕ, ಯುವತಿ ಏನಾದಳು ಗೊತ್ತೇ?

TNN Correspondent Posted On May 12, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದೇಶದಿಂದ ಒಳನುಸುಳುವ ಮುಸ್ಲಿಮರು ಹಿಂದೂಗಳ ಆಚರಣೆಗೆ ಅಡ್ಡಿಯಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಲವ್ ಜಿಹಾದ್ ಪ್ರಕರಣಗಳು ಸಹ ಜಾಸ್ತಿಯಾಗುತ್ತಿರುವುದು ಭೀತಿ ಹುಟ್ಟಿಸಿದೆ.

ಹೌದು, ಪಶ್ಚಿಮ ಬಂಗಾಳದ ದಕ್ಷಿಣ ಪರಗಣ 24 ಜಿಲ್ಲೆಯ ಫಾಲ್ತಾ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ದಿಗಿರ್ ಪುರ ಎಂಬಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ಹೆಸರಿನಲ್ಲಿ ಯುವತಿಯನ್ನು ಪ್ರೀತಿಸಿ, ಈಗ ನಿಜಬಣ್ಣ ಬಯಲಾಗಿದ್ದು, ಇದರಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಲವ್ ಜಿಹಾದ್ ಎಂಬ ಆರೋಪಗಳು ಕೇಳಿಬಂದಿವೆ.

ದ್ವಿತೀಯ ಪಿಯುಸಿ ಓದಿದ್ದ ಪ್ರಿಯಾ ಮೊಂಡೊಲ್ ಎಂಬ ಯುವತಿಯ ಮೊಬೈಲ್ ಗೆ ಮಿಸ್ಡ್ ಕಾಲ್ ಬಂದಿದೆ. ಅದಕ್ಕೆ ಪ್ರತಿಯಾಗಿ ವಾಪಸ್ ಕರೆ ಮಾಡಿದ ಪ್ರಿಯಾ ಯಾರೆಂದು ಕೇಳಿದ್ದಾಳೆ. ಅದಕ್ಕೆ ತನ್ನ ಹೆಸರು ರಾಜೇಶ್ ಎಂದೂ, ಸೂರ್ಯಪುರದಿಂದ ಕರೆ ಮಾಡುತ್ತಿದ್ದೇನೆ ಎಂದೂ ತಿಳಿಸಿದ್ದಾನೆ. ಹೀಗೆ ಮೊಬೈಲಿನಲ್ಲಿ ಸ್ನೇಹಿತರಾದ ಅವರು ಪ್ರೇಮಿಗಳು ಆಗಲು ತುಂಬ ಸಮಯ ತೆಗೆದುಕೊಂಡಿರಲಿಲ್ಲ.

ಕೊನೆಗೆ ಒಂದು ದಿನ ಇಬ್ಬರೂ ಮದುವೆಯಾಗಲು ನಿಶ್ಚಯಿಸಿದ್ದು, ಸೋ ಕಾಲ್ಡ್ ರಾಜೇಶ್ ಯುವತಿಯ ಮನೆಗೆ ಬಂದು, ತನ್ನೆ ಹೆಸರು ರಾಜೇಶ್, ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಯುವತಿ ತಂದೆಗೆ ಗುರುತಿನ ಚೀಟಿ ನೀಡಿದ್ದಾನೆ. ಆದರೆ ಎಚ್ಚೆತ್ತುಕೊಂಡ ಅವರ ತಂದೆ, ಇದು ನಕಲಿ ಐಡಿ ಎಂದೂ, ಮಗಳನ್ನು ಕೊಡುವುದಿಲ್ಲವೆಂದೂ ತಿಳಿಸಿ ವಾಪಸ್ ಕಳುಹಿಸಿದ್ದಾರೆ.

ಆದರೆ ತನ್ನ ಪ್ರೀತಿಯ ಮೇಲೆ ನಂಬಿಕೆ ಇಟ್ಟುಕೊಂಡಿದ್ದ ಯುವತಿ ಅದೇ ಮೇ 8ರ ಮಧ್ಯಾಹ್ನ ಡೈಮಂಡ್ ಹಾರ್ಬರ್ ರೈಲ್ವೆ ನಿಲ್ದಾಣದಲ್ಲಿ ರಾಜೇಶ್ ನನ್ನು ಭೇಟಿಯಾಗಿದ್ದಾಳೆ. ಆಗ ಆತನ ಹೆಸರು ರಾಜೇಶ್ ಅಲ್ಲ, ಮಮುದ್ ಶೇಖ್ ಎಂಬುದು ಗೊತ್ತಾಗಿದೆ. ಆಗ ಇಬ್ಬರೂ ಜಗಳವಾಡಿದ್ದು, ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಂಗಾಳದ ದೈನಿಕ್ ಜುಗಾಸಂಖ ಪತ್ರಿಕೆ ವರದಿ ಮಾಡಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search