• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹೆಸರು ಬದಲಿಸಿ ಯುವತಿಯ ಪ್ರೀತಿಸಿದ ಮುಸ್ಲಿಂ ಯುವಕ, ಯುವತಿ ಏನಾದಳು ಗೊತ್ತೇ?

TNN Correspondent Posted On May 12, 2018


  • Share On Facebook
  • Tweet It

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದೇಶದಿಂದ ಒಳನುಸುಳುವ ಮುಸ್ಲಿಮರು ಹಿಂದೂಗಳ ಆಚರಣೆಗೆ ಅಡ್ಡಿಯಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಲವ್ ಜಿಹಾದ್ ಪ್ರಕರಣಗಳು ಸಹ ಜಾಸ್ತಿಯಾಗುತ್ತಿರುವುದು ಭೀತಿ ಹುಟ್ಟಿಸಿದೆ.

ಹೌದು, ಪಶ್ಚಿಮ ಬಂಗಾಳದ ದಕ್ಷಿಣ ಪರಗಣ 24 ಜಿಲ್ಲೆಯ ಫಾಲ್ತಾ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ದಿಗಿರ್ ಪುರ ಎಂಬಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ಹೆಸರಿನಲ್ಲಿ ಯುವತಿಯನ್ನು ಪ್ರೀತಿಸಿ, ಈಗ ನಿಜಬಣ್ಣ ಬಯಲಾಗಿದ್ದು, ಇದರಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಲವ್ ಜಿಹಾದ್ ಎಂಬ ಆರೋಪಗಳು ಕೇಳಿಬಂದಿವೆ.

ದ್ವಿತೀಯ ಪಿಯುಸಿ ಓದಿದ್ದ ಪ್ರಿಯಾ ಮೊಂಡೊಲ್ ಎಂಬ ಯುವತಿಯ ಮೊಬೈಲ್ ಗೆ ಮಿಸ್ಡ್ ಕಾಲ್ ಬಂದಿದೆ. ಅದಕ್ಕೆ ಪ್ರತಿಯಾಗಿ ವಾಪಸ್ ಕರೆ ಮಾಡಿದ ಪ್ರಿಯಾ ಯಾರೆಂದು ಕೇಳಿದ್ದಾಳೆ. ಅದಕ್ಕೆ ತನ್ನ ಹೆಸರು ರಾಜೇಶ್ ಎಂದೂ, ಸೂರ್ಯಪುರದಿಂದ ಕರೆ ಮಾಡುತ್ತಿದ್ದೇನೆ ಎಂದೂ ತಿಳಿಸಿದ್ದಾನೆ. ಹೀಗೆ ಮೊಬೈಲಿನಲ್ಲಿ ಸ್ನೇಹಿತರಾದ ಅವರು ಪ್ರೇಮಿಗಳು ಆಗಲು ತುಂಬ ಸಮಯ ತೆಗೆದುಕೊಂಡಿರಲಿಲ್ಲ.

ಕೊನೆಗೆ ಒಂದು ದಿನ ಇಬ್ಬರೂ ಮದುವೆಯಾಗಲು ನಿಶ್ಚಯಿಸಿದ್ದು, ಸೋ ಕಾಲ್ಡ್ ರಾಜೇಶ್ ಯುವತಿಯ ಮನೆಗೆ ಬಂದು, ತನ್ನೆ ಹೆಸರು ರಾಜೇಶ್, ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಯುವತಿ ತಂದೆಗೆ ಗುರುತಿನ ಚೀಟಿ ನೀಡಿದ್ದಾನೆ. ಆದರೆ ಎಚ್ಚೆತ್ತುಕೊಂಡ ಅವರ ತಂದೆ, ಇದು ನಕಲಿ ಐಡಿ ಎಂದೂ, ಮಗಳನ್ನು ಕೊಡುವುದಿಲ್ಲವೆಂದೂ ತಿಳಿಸಿ ವಾಪಸ್ ಕಳುಹಿಸಿದ್ದಾರೆ.

ಆದರೆ ತನ್ನ ಪ್ರೀತಿಯ ಮೇಲೆ ನಂಬಿಕೆ ಇಟ್ಟುಕೊಂಡಿದ್ದ ಯುವತಿ ಅದೇ ಮೇ 8ರ ಮಧ್ಯಾಹ್ನ ಡೈಮಂಡ್ ಹಾರ್ಬರ್ ರೈಲ್ವೆ ನಿಲ್ದಾಣದಲ್ಲಿ ರಾಜೇಶ್ ನನ್ನು ಭೇಟಿಯಾಗಿದ್ದಾಳೆ. ಆಗ ಆತನ ಹೆಸರು ರಾಜೇಶ್ ಅಲ್ಲ, ಮಮುದ್ ಶೇಖ್ ಎಂಬುದು ಗೊತ್ತಾಗಿದೆ. ಆಗ ಇಬ್ಬರೂ ಜಗಳವಾಡಿದ್ದು, ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಂಗಾಳದ ದೈನಿಕ್ ಜುಗಾಸಂಖ ಪತ್ರಿಕೆ ವರದಿ ಮಾಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search