• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಸೈನ್ಯಕ್ಕೆ ದೊರೆಯಲಿದೆ ಅಗ್ನಿ-5 ಕ್ಷಿಪಣಿಯ ಬಲ, ವಿರೋಧಿಗಳ ಎದೆಯಲ್ಲಿ ನಡುಕ

TNN Correspondent Posted On May 13, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ರಕ್ಷಣಾ ಕ್ಷೇತ್ರಕ್ಕೆ ಹೊಸ ಬಲ ಬಂದಿದೆ. ಇದೀಗ ಭಾರತೀಯ ಸೈನ್ಯಕ್ಕೆ ಅಣ್ವಸ್ತ್ರ ಹೊತ್ತ್ಯೊಯುವ ಸಾರ್ಮರ್ಥ್ಯ ಹೊಂದಿರುವ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ಅಗ್ನಿ-5 ಶೀಘ್ರದಲ್ಲೇ ಸೈನ್ಯದ ಕೈ ಸೇರಲಿದೆ.

5,500 ರಿಂದ 5,800 ಕಿ.ಮೀ ಗುರಿ ತಲುಪುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷಿಪಣಿಯನ್ನು ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಪರೀಕ್ಷೆ ಯಶಸ್ವಿಯಾಗಿದ್ದು, ಮೇ ತಿಂಗಳಾಂತ್ಯದಲ್ಲಿ ಮತ್ತೊಂದು ಸುತ್ತಿನ ಪರೀಕ್ಷೆ ನಡೆಸಿದ ನಂತರ ಕ್ಷಿಪಣಿ ಸೈನ್ಯದ ಕೈ ಸೇರಲಿದೆ. ವಿಶ್ವದ ಕೆಲವೇ ರಾಷ್ಟ್ರಗಳು ಐದು ಸಾವಿರ ಕಿ.ಮೀ. ದೂರ ಸಾಗುವ ಸಾಮರ್ಥ್ಯ ಹೊಂದಿದ್ದು, ಇದೀಗ ಭಾರವೂ ಆ ರಾಷ್ಟ್ರಗಳ ಪಟ್ಟಿಗೆ ಸೇರಲಿದೆ. ಪ್ರಸ್ತುತ ಅಮೆರಿಕ, ಚೀನಾ, ಫ್ರಾನ್ಸ್ ಹಾಗೂ ಬ್ರಿಟನ್ ಗಳು ಮಾತ್ರ ಈ ಸಾಮರ್ಥ್ಯದ ಕ್ಷಿಪಣಿಯನ್ನು ಹೊಂದಿವೆ.

2012ರಿಂದ ಆರಂಭವಾದ ಅಗ್ನಿ-5 ಕ್ಷಿಪಣಿ ಪರೀಕ್ಷೆ 2015, 2016ರಲ್ಲೂ ಪ್ರಾಥಮಿಕ ಪರೀಕ್ಷೆಗಳು ನಡೆದಿದ್ದವು, ಕಳೆದ ಜನವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಜಲಂತರ್ಗಾಮಿ ಮೂಲಕ ಕ್ಷಿಪಣಿ ಉಡಾಯಿಸುವಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಶೀಘ್ರದಲ್ಲಿ ಈ ಸಮಸ್ಯೆಗಳು ಬಗೆಹರಿಯಲಿದೆ.

1500 ಕೆ.ಜಿ ಅಣ್ವಸ್ತ್ರವನ್ನು ಐದು ಸಾವಿರ ಕಿ.ಮೀ.ವರೆಗೆ ಹೊತ್ತ್ಯೊಯುವ ಸಾಮರ್ಥ್ಯ ಹೊಂದಿದ್ದು, ಡಿಆರ್ ಡಿಒ ಸಂಸ್ಥೆ ಈ ಕ್ಷಿಪಣಿಯನ್ನು ಸಿದ್ಧಪಡಿಸಿದೆ. ಅಗ್ನಿ-5 ಕ್ಷಿಪಣಿಯಿಂದ ಚೀನಾ, ಆಫ್ರಿಕಾ ಸೇರಿ ಐರೋಪ್ಯ ದೇಶಗಳ ಮೇಲೂ ಭಾರತ ದಾಳಿ ನಡೆಸುವ ಸಾಮರ್ಥ್ಯ ಹೊಂದಲಿದೆ.

0
Shares
  • Share On Facebook
  • Tweet It




Trending Now
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
  • Popular Posts

    • 1
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 2
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search