• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನ್ಯಕ್ಕೆ ದೇಶಿ ಶಸ್ತ್ರಾಸ್ತ್ರ, ಸೈನ್ಯ ಸಿದ್ಧಪಡಿಸಿದೆ 15,000 ಕೋಟಿ ವೆಚ್ಚದ ಭರ್ಜರಿ ಪ್ಲಾನ್

TNN Correspondent Posted On May 14, 2018
0


0
Shares
  • Share On Facebook
  • Tweet It

ದೆಹಲಿ: ಭಾರತದ ಸೈನ್ಯಕ್ಕೆ ಹಲವು ವರ್ಷಗಳ ನಿರಂತರ ಪ್ರಯತ್ನದ ನಂತರ, ಇದೀಗ ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ದೊರೆಯುವ ಸಮಯ ಕೂಡಿ ಬಂದಿದೆ. ದೇಶದ ಸೈನ್ಯ ವಿದೇಶಿ ಶಸ್ತ್ರಾಸ್ತ್ರಗಳ ಮೇಲೆ ಅವಲಂಬನೆಯಿಂದ ಆಗುತ್ತಿರುವ ವಿಳಂಬ ಹಾಗೂ ಶಸ್ತ್ರಾಸ್ತ್ರ ಸಂಗ್ರಹ ಸಮಸ್ಯೆಯನ್ನು ನೀಗಿಸಲು 15,000 ಕೋಟಿ ರೂಪಾಯಿ ವೆಚ್ಚ ಶಸ್ತ್ರಾಸ್ತ್ರ ಉತ್ಪಾದನೆ ಯೋಜನೆಯನ್ನು ಸೈನ್ಯ ರೂಪಿಸಿದೆ.

ಈ ಯೋಜನೆಯಲ್ಲಿ ಸೇನೆ ಮತ್ತು ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳು ಉಸ್ತುವಾರಿ ವಹಿಸಿಕೊಳ್ಳಲಿದ್ದು, 11 ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿವೆ. 10 ವರ್ಷ ಗುರಿ ನಿಗದಿಪಡಿಸಲಾಗಿದೆ. ಏಪ್ರಿಲ್ ನಲ್ಲಿ ನಡೆದ ಸೇನೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.

ಶಸ್ತ್ರಾಸ್ತ್ರ ಪೂರೈಕೆಯಲ್ಲಿ ಎಲ್ಲ ಕಂಪೆನಿಗಳು ನಿಗದಿಪಡಿಸಿರುವ ಗಡುವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈ ಕುರಿರು ಸೇನೆ ಕಠೋರ ನಿಲುವು ತಳೆಯಲಿದೆ. ಶಸ್ತ್ರಾಸ್ತ್ರಗಳನ್ನು ದೇಶಿಯವಾಗಿ ತಯಾರಿಸುವ ಈ ಅತಿ ದೊಡ್ಡ ಯೋಜನೆಯನ್ನು ಪ್ರಥಮ ಹಂತದಲ್ಲಿ ನೋಡಿಕೊಂಡು, ಮುಂದಿನ ಉತ್ಪಾದನಾ ಗುರಿಗಳನ್ನು ನಿಗದಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಕ್ಕೆ ಶಸ್ತ್ರಾಸ್ತ್ರ ಕೊರತೆ ನೀಗಿಸಿ, 30 ದಿನಗಳವರೆಗೆ ನಿಂತರವಾಗಿ ಯುದ್ದಕ್ಕೆ ಸಾಕಾಗುವಷ್ಟು ಶಸ್ತ್ರಾಸ್ತ್ರ ಸಂಗ್ರಹ ಮಾಡುವುದು, ವಿದೇಶಿ ಅವಲಂಬನೆಯನ್ನು ತಪ್ಪಿಸಲು ಈ ಯೋಜನೆ ಪೂರಕವಾಗಲಿದೆ. ಆರಂಭದಲ್ಲಿ ರಾಕೆಟ್‌ಗಳು, ವಾಯು ರಕ್ಷಣಾ ವ್ಯವಸ್ಥೆ (ಏರ್‌ ಡಿಫೆನ್ಸ್‌ ಸಿಸ್ಟಂ), ಆರ್ಟಿಲರಿ ಗನ್‌ಗಳು, ಪದಾತಿದಳ ಸಮರ ವಾಹನಗಳು, ಗ್ರೆನೇಡ್‌ ಲಾಂಚರ್‌ಗಳು ಹಾಗೂ ಯುದ್ಧಭೂಮಿಯಲ್ಲಿ ಬಳಸುವ ಇತರ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಲು ನಿರ್ಧರಿಸಲಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search