• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನ್ಯಕ್ಕೆ ದೇಶಿ ಶಸ್ತ್ರಾಸ್ತ್ರ, ಸೈನ್ಯ ಸಿದ್ಧಪಡಿಸಿದೆ 15,000 ಕೋಟಿ ವೆಚ್ಚದ ಭರ್ಜರಿ ಪ್ಲಾನ್

TNN Correspondent Posted On May 14, 2018
0


0
Shares
  • Share On Facebook
  • Tweet It

ದೆಹಲಿ: ಭಾರತದ ಸೈನ್ಯಕ್ಕೆ ಹಲವು ವರ್ಷಗಳ ನಿರಂತರ ಪ್ರಯತ್ನದ ನಂತರ, ಇದೀಗ ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ದೊರೆಯುವ ಸಮಯ ಕೂಡಿ ಬಂದಿದೆ. ದೇಶದ ಸೈನ್ಯ ವಿದೇಶಿ ಶಸ್ತ್ರಾಸ್ತ್ರಗಳ ಮೇಲೆ ಅವಲಂಬನೆಯಿಂದ ಆಗುತ್ತಿರುವ ವಿಳಂಬ ಹಾಗೂ ಶಸ್ತ್ರಾಸ್ತ್ರ ಸಂಗ್ರಹ ಸಮಸ್ಯೆಯನ್ನು ನೀಗಿಸಲು 15,000 ಕೋಟಿ ರೂಪಾಯಿ ವೆಚ್ಚ ಶಸ್ತ್ರಾಸ್ತ್ರ ಉತ್ಪಾದನೆ ಯೋಜನೆಯನ್ನು ಸೈನ್ಯ ರೂಪಿಸಿದೆ.

ಈ ಯೋಜನೆಯಲ್ಲಿ ಸೇನೆ ಮತ್ತು ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳು ಉಸ್ತುವಾರಿ ವಹಿಸಿಕೊಳ್ಳಲಿದ್ದು, 11 ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿವೆ. 10 ವರ್ಷ ಗುರಿ ನಿಗದಿಪಡಿಸಲಾಗಿದೆ. ಏಪ್ರಿಲ್ ನಲ್ಲಿ ನಡೆದ ಸೇನೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.

ಶಸ್ತ್ರಾಸ್ತ್ರ ಪೂರೈಕೆಯಲ್ಲಿ ಎಲ್ಲ ಕಂಪೆನಿಗಳು ನಿಗದಿಪಡಿಸಿರುವ ಗಡುವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈ ಕುರಿರು ಸೇನೆ ಕಠೋರ ನಿಲುವು ತಳೆಯಲಿದೆ. ಶಸ್ತ್ರಾಸ್ತ್ರಗಳನ್ನು ದೇಶಿಯವಾಗಿ ತಯಾರಿಸುವ ಈ ಅತಿ ದೊಡ್ಡ ಯೋಜನೆಯನ್ನು ಪ್ರಥಮ ಹಂತದಲ್ಲಿ ನೋಡಿಕೊಂಡು, ಮುಂದಿನ ಉತ್ಪಾದನಾ ಗುರಿಗಳನ್ನು ನಿಗದಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಕ್ಕೆ ಶಸ್ತ್ರಾಸ್ತ್ರ ಕೊರತೆ ನೀಗಿಸಿ, 30 ದಿನಗಳವರೆಗೆ ನಿಂತರವಾಗಿ ಯುದ್ದಕ್ಕೆ ಸಾಕಾಗುವಷ್ಟು ಶಸ್ತ್ರಾಸ್ತ್ರ ಸಂಗ್ರಹ ಮಾಡುವುದು, ವಿದೇಶಿ ಅವಲಂಬನೆಯನ್ನು ತಪ್ಪಿಸಲು ಈ ಯೋಜನೆ ಪೂರಕವಾಗಲಿದೆ. ಆರಂಭದಲ್ಲಿ ರಾಕೆಟ್‌ಗಳು, ವಾಯು ರಕ್ಷಣಾ ವ್ಯವಸ್ಥೆ (ಏರ್‌ ಡಿಫೆನ್ಸ್‌ ಸಿಸ್ಟಂ), ಆರ್ಟಿಲರಿ ಗನ್‌ಗಳು, ಪದಾತಿದಳ ಸಮರ ವಾಹನಗಳು, ಗ್ರೆನೇಡ್‌ ಲಾಂಚರ್‌ಗಳು ಹಾಗೂ ಯುದ್ಧಭೂಮಿಯಲ್ಲಿ ಬಳಸುವ ಇತರ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಲು ನಿರ್ಧರಿಸಲಾಗಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search