• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನ್ಯಕ್ಕೆ ದೇಶಿ ಶಸ್ತ್ರಾಸ್ತ್ರ, ಸೈನ್ಯ ಸಿದ್ಧಪಡಿಸಿದೆ 15,000 ಕೋಟಿ ವೆಚ್ಚದ ಭರ್ಜರಿ ಪ್ಲಾನ್

TNN Correspondent Posted On May 14, 2018
0


0
Shares
  • Share On Facebook
  • Tweet It

ದೆಹಲಿ: ಭಾರತದ ಸೈನ್ಯಕ್ಕೆ ಹಲವು ವರ್ಷಗಳ ನಿರಂತರ ಪ್ರಯತ್ನದ ನಂತರ, ಇದೀಗ ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ದೊರೆಯುವ ಸಮಯ ಕೂಡಿ ಬಂದಿದೆ. ದೇಶದ ಸೈನ್ಯ ವಿದೇಶಿ ಶಸ್ತ್ರಾಸ್ತ್ರಗಳ ಮೇಲೆ ಅವಲಂಬನೆಯಿಂದ ಆಗುತ್ತಿರುವ ವಿಳಂಬ ಹಾಗೂ ಶಸ್ತ್ರಾಸ್ತ್ರ ಸಂಗ್ರಹ ಸಮಸ್ಯೆಯನ್ನು ನೀಗಿಸಲು 15,000 ಕೋಟಿ ರೂಪಾಯಿ ವೆಚ್ಚ ಶಸ್ತ್ರಾಸ್ತ್ರ ಉತ್ಪಾದನೆ ಯೋಜನೆಯನ್ನು ಸೈನ್ಯ ರೂಪಿಸಿದೆ.

ಈ ಯೋಜನೆಯಲ್ಲಿ ಸೇನೆ ಮತ್ತು ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳು ಉಸ್ತುವಾರಿ ವಹಿಸಿಕೊಳ್ಳಲಿದ್ದು, 11 ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿವೆ. 10 ವರ್ಷ ಗುರಿ ನಿಗದಿಪಡಿಸಲಾಗಿದೆ. ಏಪ್ರಿಲ್ ನಲ್ಲಿ ನಡೆದ ಸೇನೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.

ಶಸ್ತ್ರಾಸ್ತ್ರ ಪೂರೈಕೆಯಲ್ಲಿ ಎಲ್ಲ ಕಂಪೆನಿಗಳು ನಿಗದಿಪಡಿಸಿರುವ ಗಡುವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈ ಕುರಿರು ಸೇನೆ ಕಠೋರ ನಿಲುವು ತಳೆಯಲಿದೆ. ಶಸ್ತ್ರಾಸ್ತ್ರಗಳನ್ನು ದೇಶಿಯವಾಗಿ ತಯಾರಿಸುವ ಈ ಅತಿ ದೊಡ್ಡ ಯೋಜನೆಯನ್ನು ಪ್ರಥಮ ಹಂತದಲ್ಲಿ ನೋಡಿಕೊಂಡು, ಮುಂದಿನ ಉತ್ಪಾದನಾ ಗುರಿಗಳನ್ನು ನಿಗದಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಕ್ಕೆ ಶಸ್ತ್ರಾಸ್ತ್ರ ಕೊರತೆ ನೀಗಿಸಿ, 30 ದಿನಗಳವರೆಗೆ ನಿಂತರವಾಗಿ ಯುದ್ದಕ್ಕೆ ಸಾಕಾಗುವಷ್ಟು ಶಸ್ತ್ರಾಸ್ತ್ರ ಸಂಗ್ರಹ ಮಾಡುವುದು, ವಿದೇಶಿ ಅವಲಂಬನೆಯನ್ನು ತಪ್ಪಿಸಲು ಈ ಯೋಜನೆ ಪೂರಕವಾಗಲಿದೆ. ಆರಂಭದಲ್ಲಿ ರಾಕೆಟ್‌ಗಳು, ವಾಯು ರಕ್ಷಣಾ ವ್ಯವಸ್ಥೆ (ಏರ್‌ ಡಿಫೆನ್ಸ್‌ ಸಿಸ್ಟಂ), ಆರ್ಟಿಲರಿ ಗನ್‌ಗಳು, ಪದಾತಿದಳ ಸಮರ ವಾಹನಗಳು, ಗ್ರೆನೇಡ್‌ ಲಾಂಚರ್‌ಗಳು ಹಾಗೂ ಯುದ್ಧಭೂಮಿಯಲ್ಲಿ ಬಳಸುವ ಇತರ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಲು ನಿರ್ಧರಿಸಲಾಗಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search