• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೈನ್ಯಕ್ಕೆ ದೇಶಿ ಶಸ್ತ್ರಾಸ್ತ್ರ, ಸೈನ್ಯ ಸಿದ್ಧಪಡಿಸಿದೆ 15,000 ಕೋಟಿ ವೆಚ್ಚದ ಭರ್ಜರಿ ಪ್ಲಾನ್

TNN Correspondent Posted On May 14, 2018


  • Share On Facebook
  • Tweet It

ದೆಹಲಿ: ಭಾರತದ ಸೈನ್ಯಕ್ಕೆ ಹಲವು ವರ್ಷಗಳ ನಿರಂತರ ಪ್ರಯತ್ನದ ನಂತರ, ಇದೀಗ ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ದೊರೆಯುವ ಸಮಯ ಕೂಡಿ ಬಂದಿದೆ. ದೇಶದ ಸೈನ್ಯ ವಿದೇಶಿ ಶಸ್ತ್ರಾಸ್ತ್ರಗಳ ಮೇಲೆ ಅವಲಂಬನೆಯಿಂದ ಆಗುತ್ತಿರುವ ವಿಳಂಬ ಹಾಗೂ ಶಸ್ತ್ರಾಸ್ತ್ರ ಸಂಗ್ರಹ ಸಮಸ್ಯೆಯನ್ನು ನೀಗಿಸಲು 15,000 ಕೋಟಿ ರೂಪಾಯಿ ವೆಚ್ಚ ಶಸ್ತ್ರಾಸ್ತ್ರ ಉತ್ಪಾದನೆ ಯೋಜನೆಯನ್ನು ಸೈನ್ಯ ರೂಪಿಸಿದೆ.

ಈ ಯೋಜನೆಯಲ್ಲಿ ಸೇನೆ ಮತ್ತು ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳು ಉಸ್ತುವಾರಿ ವಹಿಸಿಕೊಳ್ಳಲಿದ್ದು, 11 ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿವೆ. 10 ವರ್ಷ ಗುರಿ ನಿಗದಿಪಡಿಸಲಾಗಿದೆ. ಏಪ್ರಿಲ್ ನಲ್ಲಿ ನಡೆದ ಸೇನೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.

ಶಸ್ತ್ರಾಸ್ತ್ರ ಪೂರೈಕೆಯಲ್ಲಿ ಎಲ್ಲ ಕಂಪೆನಿಗಳು ನಿಗದಿಪಡಿಸಿರುವ ಗಡುವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈ ಕುರಿರು ಸೇನೆ ಕಠೋರ ನಿಲುವು ತಳೆಯಲಿದೆ. ಶಸ್ತ್ರಾಸ್ತ್ರಗಳನ್ನು ದೇಶಿಯವಾಗಿ ತಯಾರಿಸುವ ಈ ಅತಿ ದೊಡ್ಡ ಯೋಜನೆಯನ್ನು ಪ್ರಥಮ ಹಂತದಲ್ಲಿ ನೋಡಿಕೊಂಡು, ಮುಂದಿನ ಉತ್ಪಾದನಾ ಗುರಿಗಳನ್ನು ನಿಗದಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಕ್ಕೆ ಶಸ್ತ್ರಾಸ್ತ್ರ ಕೊರತೆ ನೀಗಿಸಿ, 30 ದಿನಗಳವರೆಗೆ ನಿಂತರವಾಗಿ ಯುದ್ದಕ್ಕೆ ಸಾಕಾಗುವಷ್ಟು ಶಸ್ತ್ರಾಸ್ತ್ರ ಸಂಗ್ರಹ ಮಾಡುವುದು, ವಿದೇಶಿ ಅವಲಂಬನೆಯನ್ನು ತಪ್ಪಿಸಲು ಈ ಯೋಜನೆ ಪೂರಕವಾಗಲಿದೆ. ಆರಂಭದಲ್ಲಿ ರಾಕೆಟ್‌ಗಳು, ವಾಯು ರಕ್ಷಣಾ ವ್ಯವಸ್ಥೆ (ಏರ್‌ ಡಿಫೆನ್ಸ್‌ ಸಿಸ್ಟಂ), ಆರ್ಟಿಲರಿ ಗನ್‌ಗಳು, ಪದಾತಿದಳ ಸಮರ ವಾಹನಗಳು, ಗ್ರೆನೇಡ್‌ ಲಾಂಚರ್‌ಗಳು ಹಾಗೂ ಯುದ್ಧಭೂಮಿಯಲ್ಲಿ ಬಳಸುವ ಇತರ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಲು ನಿರ್ಧರಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search