• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಯಾರು ಗೆದ್ದರೂ ಅವರು ಇಡೀ ಕ್ಷೇತ್ರದ ಪ್ರತಿನಿಧಿ!

Hanumantha Kamath Posted On May 14, 2018
0


0
Shares
  • Share On Facebook
  • Tweet It

ಚುನಾವಣೆಯ ಕಾವು ತಾರಕಕ್ಕೆ ಏರಿದೆ. ಮಂಗಳವಾರದ ಫಲಿತಾಂಶದ ಮೇಲೆ ಈಗ ಎಲ್ಲರ ಚಿತ್ತ. ಒಂದು ಕಡೆ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎನ್ನುವ ಬೆಟ್ಟಿಂಗ್ ಶುರುವಾಗಿದೆ. ಬಿಜೆಪಿ ಗೆಲ್ಲುತ್ತದಾ, ಕಾಂಗ್ರೆಸ್ ಗೆಲ್ಲುತ್ತದಾ? ಆಯಾಯ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಎಷ್ಟು ಅಂತರದಲ್ಲಿ ಗೆಲ್ಲುತ್ತಾರೆ? ಎದುರಾಳಿ ಎಷ್ಟು ಮತಗಳ ಅಂತರದಲ್ಲಿ ಸೋಲುತ್ತಾರೆ, ಇಂತಹುದೇ ಲೆಕ್ಕಾಚಾರಗಳಲ್ಲಿ ಬೆಟ್ಟಿಂಗ್ ನಡೆಯುತ್ತಾ ಇರುತ್ತದೆ. ಇನ್ನು ಕೆಲವರು ತಾವು ಬಿಜೆಪಿಯ ಕಟ್ಟಾಳುಗಳಂತೆ ಮತ್ತೆ ಕೆಲವರು ಕಾಂಗ್ರೆಸ್ಸಿನ ಅಜೀವ ಸದಸ್ಯರಂತೆ ವರ್ತಿಸಿರುವುದನ್ನು ಕೂಡ ಈ ಚುನಾವಣೆ ಕಂಡಿದೆ. ಸಾಮಾಜಿಕ ತಾಣಗಳಲ್ಲಿ ಪರ, ವಿರೋಧ ಚರ್ಚೆ, ಕಮೆಂಟ್ಸ್ ಗಳು ಲೆಕ್ಕಕ್ಕೆ ಸಿಗದಷ್ಟು ಹಾರಾಟ ನೋಡಿವೆ. ಕೆಲವರು ಹಣದ ಆಸೆಗೆ ತಮ್ಮತನವನ್ನು ಮಾರಿ ಯಾರದ್ದೋ ಪರವಾಗಿ ಕೆಲಸ ಮಾಡಿದ್ದನ್ನು ಕೂಡ ಈ ಚುನಾವಣೆಯಲ್ಲಿ ನೋಡಿದ್ದೇವೆ. ಇನ್ನು ಹಲವರು ತಮ್ಮ ದ್ವೇಷವನ್ನು ತೀರಿಸಲು ಈ ಚುನಾವಣೆಯಲ್ಲಿ ಯಾರ್ಯಾರಿಗೊ ಮತ ಹಾಕಿ ಬೀಗಿದ್ದನ್ನು ಕೂಡ ನೋಡಿದ್ದೇವೆ. ಒಟ್ಟಿನಲ್ಲಿ ಚುನಾವಣೆ ಎಂದರೆ ಒಬ್ಬ ಒಳ್ಳೆಯ ಅಭ್ಯರ್ಥಿಯನ್ನು ನಾವೆಲ್ಲರು ಸೇರಿ ಗೆಲ್ಲಿಸುವುದು ಆಗಬೇಕಿತ್ತು. ಅದು ಆಗಿದೆಯಾ ಎನ್ನುವುದಕ್ಕೆ ನಾಳೆ ಉತ್ತರ ಸಿಗಲಿದೆ.
ನಾಳೆ ಕರ್ನಾಟಕದ 222 ಕ್ಷೇತ್ರಗಳ ಫಲಿತಾಂಶ ಗೊತ್ತಾಗಲಿದೆ. ಯಾರು ಗೆದ್ದರೂ ಆ ಶಾಸಕರು ತಮ್ಮ ಕ್ಷೇತ್ರದ ಎಲ್ಲರಿಗೂ ಜನಪ್ರತಿನಿಧಿ. ತಮ್ಮ ಕ್ಷೇತ್ರದಲ್ಲಿ ಆಗಬೇಕಿರುವ ಮೂಲಭೂತ ಅಭಿವೃದ್ಧಿ ಕೆಲಸಗಳಿಗೆ ಗಮನ ಕೊಡಲಿ ಎನ್ನುವುದೇ ನಿರೀಕ್ಷೆ. ಗೆದ್ದವರು ತಮ್ಮ ಜಾತಿ, ಪಕ್ಷದವರಿಗೆ ಮಾತ್ರ ಶಾಸಕರಲ್ಲ. ಅವರು ಎಲ್ಲರಿಗೂ ಶಾಸಕರು. ಹಾಗೆ ಪಕ್ಷಗಳ ಕಾರ್ಯಕರ್ತರು ಕೂಡ. ಚುನಾವಣೆಗೆ 15 ದಿನಗಳಿರುವಾಗ ಆಯಾ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷಕ್ಕಾಗಿ ಅಭ್ಯರ್ಥಿಯ ಗೆಲುವಿಗಾಗಿ ಸಾಕಷ್ಟು ಹೋರಾಟ ಮಾಡಿರುತ್ತೀರಿ. ಈಗ ಚುನಾವಣೆ ಮುಗಿದಿದೆ. ಇನ್ನೇನಿದ್ದರೂ ಎಲ್ಲರೂ ಒಟ್ಟಾಗಿ ನಮ್ಮ ಕ್ಷೇತ್ರ ಹೇಗೆ ಅಭಿವೃದ್ಧಿಯಾಗಬೇಕು ಎಂದು ಯೋಚಿಸುವುದಷ್ಟೇ ಕೆಲಸ!

0
Shares
  • Share On Facebook
  • Tweet It


vote poll


Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Hanumantha Kamath November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Hanumantha Kamath November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search