• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಯಾರು ಗೆದ್ದರೂ ಅವರು ಇಡೀ ಕ್ಷೇತ್ರದ ಪ್ರತಿನಿಧಿ!

Hanumantha Kamath Posted On May 14, 2018
0


0
Shares
  • Share On Facebook
  • Tweet It

ಚುನಾವಣೆಯ ಕಾವು ತಾರಕಕ್ಕೆ ಏರಿದೆ. ಮಂಗಳವಾರದ ಫಲಿತಾಂಶದ ಮೇಲೆ ಈಗ ಎಲ್ಲರ ಚಿತ್ತ. ಒಂದು ಕಡೆ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎನ್ನುವ ಬೆಟ್ಟಿಂಗ್ ಶುರುವಾಗಿದೆ. ಬಿಜೆಪಿ ಗೆಲ್ಲುತ್ತದಾ, ಕಾಂಗ್ರೆಸ್ ಗೆಲ್ಲುತ್ತದಾ? ಆಯಾಯ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಎಷ್ಟು ಅಂತರದಲ್ಲಿ ಗೆಲ್ಲುತ್ತಾರೆ? ಎದುರಾಳಿ ಎಷ್ಟು ಮತಗಳ ಅಂತರದಲ್ಲಿ ಸೋಲುತ್ತಾರೆ, ಇಂತಹುದೇ ಲೆಕ್ಕಾಚಾರಗಳಲ್ಲಿ ಬೆಟ್ಟಿಂಗ್ ನಡೆಯುತ್ತಾ ಇರುತ್ತದೆ. ಇನ್ನು ಕೆಲವರು ತಾವು ಬಿಜೆಪಿಯ ಕಟ್ಟಾಳುಗಳಂತೆ ಮತ್ತೆ ಕೆಲವರು ಕಾಂಗ್ರೆಸ್ಸಿನ ಅಜೀವ ಸದಸ್ಯರಂತೆ ವರ್ತಿಸಿರುವುದನ್ನು ಕೂಡ ಈ ಚುನಾವಣೆ ಕಂಡಿದೆ. ಸಾಮಾಜಿಕ ತಾಣಗಳಲ್ಲಿ ಪರ, ವಿರೋಧ ಚರ್ಚೆ, ಕಮೆಂಟ್ಸ್ ಗಳು ಲೆಕ್ಕಕ್ಕೆ ಸಿಗದಷ್ಟು ಹಾರಾಟ ನೋಡಿವೆ. ಕೆಲವರು ಹಣದ ಆಸೆಗೆ ತಮ್ಮತನವನ್ನು ಮಾರಿ ಯಾರದ್ದೋ ಪರವಾಗಿ ಕೆಲಸ ಮಾಡಿದ್ದನ್ನು ಕೂಡ ಈ ಚುನಾವಣೆಯಲ್ಲಿ ನೋಡಿದ್ದೇವೆ. ಇನ್ನು ಹಲವರು ತಮ್ಮ ದ್ವೇಷವನ್ನು ತೀರಿಸಲು ಈ ಚುನಾವಣೆಯಲ್ಲಿ ಯಾರ್ಯಾರಿಗೊ ಮತ ಹಾಕಿ ಬೀಗಿದ್ದನ್ನು ಕೂಡ ನೋಡಿದ್ದೇವೆ. ಒಟ್ಟಿನಲ್ಲಿ ಚುನಾವಣೆ ಎಂದರೆ ಒಬ್ಬ ಒಳ್ಳೆಯ ಅಭ್ಯರ್ಥಿಯನ್ನು ನಾವೆಲ್ಲರು ಸೇರಿ ಗೆಲ್ಲಿಸುವುದು ಆಗಬೇಕಿತ್ತು. ಅದು ಆಗಿದೆಯಾ ಎನ್ನುವುದಕ್ಕೆ ನಾಳೆ ಉತ್ತರ ಸಿಗಲಿದೆ.
ನಾಳೆ ಕರ್ನಾಟಕದ 222 ಕ್ಷೇತ್ರಗಳ ಫಲಿತಾಂಶ ಗೊತ್ತಾಗಲಿದೆ. ಯಾರು ಗೆದ್ದರೂ ಆ ಶಾಸಕರು ತಮ್ಮ ಕ್ಷೇತ್ರದ ಎಲ್ಲರಿಗೂ ಜನಪ್ರತಿನಿಧಿ. ತಮ್ಮ ಕ್ಷೇತ್ರದಲ್ಲಿ ಆಗಬೇಕಿರುವ ಮೂಲಭೂತ ಅಭಿವೃದ್ಧಿ ಕೆಲಸಗಳಿಗೆ ಗಮನ ಕೊಡಲಿ ಎನ್ನುವುದೇ ನಿರೀಕ್ಷೆ. ಗೆದ್ದವರು ತಮ್ಮ ಜಾತಿ, ಪಕ್ಷದವರಿಗೆ ಮಾತ್ರ ಶಾಸಕರಲ್ಲ. ಅವರು ಎಲ್ಲರಿಗೂ ಶಾಸಕರು. ಹಾಗೆ ಪಕ್ಷಗಳ ಕಾರ್ಯಕರ್ತರು ಕೂಡ. ಚುನಾವಣೆಗೆ 15 ದಿನಗಳಿರುವಾಗ ಆಯಾ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷಕ್ಕಾಗಿ ಅಭ್ಯರ್ಥಿಯ ಗೆಲುವಿಗಾಗಿ ಸಾಕಷ್ಟು ಹೋರಾಟ ಮಾಡಿರುತ್ತೀರಿ. ಈಗ ಚುನಾವಣೆ ಮುಗಿದಿದೆ. ಇನ್ನೇನಿದ್ದರೂ ಎಲ್ಲರೂ ಒಟ್ಟಾಗಿ ನಮ್ಮ ಕ್ಷೇತ್ರ ಹೇಗೆ ಅಭಿವೃದ್ಧಿಯಾಗಬೇಕು ಎಂದು ಯೋಚಿಸುವುದಷ್ಟೇ ಕೆಲಸ!

0
Shares
  • Share On Facebook
  • Tweet It


vote poll


Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Hanumantha Kamath February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Hanumantha Kamath February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search