• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಯಾರು ಗೆದ್ದರೂ ಅವರು ಇಡೀ ಕ್ಷೇತ್ರದ ಪ್ರತಿನಿಧಿ!

Hanumantha Kamath Posted On May 14, 2018
0


0
Shares
  • Share On Facebook
  • Tweet It

ಚುನಾವಣೆಯ ಕಾವು ತಾರಕಕ್ಕೆ ಏರಿದೆ. ಮಂಗಳವಾರದ ಫಲಿತಾಂಶದ ಮೇಲೆ ಈಗ ಎಲ್ಲರ ಚಿತ್ತ. ಒಂದು ಕಡೆ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎನ್ನುವ ಬೆಟ್ಟಿಂಗ್ ಶುರುವಾಗಿದೆ. ಬಿಜೆಪಿ ಗೆಲ್ಲುತ್ತದಾ, ಕಾಂಗ್ರೆಸ್ ಗೆಲ್ಲುತ್ತದಾ? ಆಯಾಯ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಎಷ್ಟು ಅಂತರದಲ್ಲಿ ಗೆಲ್ಲುತ್ತಾರೆ? ಎದುರಾಳಿ ಎಷ್ಟು ಮತಗಳ ಅಂತರದಲ್ಲಿ ಸೋಲುತ್ತಾರೆ, ಇಂತಹುದೇ ಲೆಕ್ಕಾಚಾರಗಳಲ್ಲಿ ಬೆಟ್ಟಿಂಗ್ ನಡೆಯುತ್ತಾ ಇರುತ್ತದೆ. ಇನ್ನು ಕೆಲವರು ತಾವು ಬಿಜೆಪಿಯ ಕಟ್ಟಾಳುಗಳಂತೆ ಮತ್ತೆ ಕೆಲವರು ಕಾಂಗ್ರೆಸ್ಸಿನ ಅಜೀವ ಸದಸ್ಯರಂತೆ ವರ್ತಿಸಿರುವುದನ್ನು ಕೂಡ ಈ ಚುನಾವಣೆ ಕಂಡಿದೆ. ಸಾಮಾಜಿಕ ತಾಣಗಳಲ್ಲಿ ಪರ, ವಿರೋಧ ಚರ್ಚೆ, ಕಮೆಂಟ್ಸ್ ಗಳು ಲೆಕ್ಕಕ್ಕೆ ಸಿಗದಷ್ಟು ಹಾರಾಟ ನೋಡಿವೆ. ಕೆಲವರು ಹಣದ ಆಸೆಗೆ ತಮ್ಮತನವನ್ನು ಮಾರಿ ಯಾರದ್ದೋ ಪರವಾಗಿ ಕೆಲಸ ಮಾಡಿದ್ದನ್ನು ಕೂಡ ಈ ಚುನಾವಣೆಯಲ್ಲಿ ನೋಡಿದ್ದೇವೆ. ಇನ್ನು ಹಲವರು ತಮ್ಮ ದ್ವೇಷವನ್ನು ತೀರಿಸಲು ಈ ಚುನಾವಣೆಯಲ್ಲಿ ಯಾರ್ಯಾರಿಗೊ ಮತ ಹಾಕಿ ಬೀಗಿದ್ದನ್ನು ಕೂಡ ನೋಡಿದ್ದೇವೆ. ಒಟ್ಟಿನಲ್ಲಿ ಚುನಾವಣೆ ಎಂದರೆ ಒಬ್ಬ ಒಳ್ಳೆಯ ಅಭ್ಯರ್ಥಿಯನ್ನು ನಾವೆಲ್ಲರು ಸೇರಿ ಗೆಲ್ಲಿಸುವುದು ಆಗಬೇಕಿತ್ತು. ಅದು ಆಗಿದೆಯಾ ಎನ್ನುವುದಕ್ಕೆ ನಾಳೆ ಉತ್ತರ ಸಿಗಲಿದೆ.
ನಾಳೆ ಕರ್ನಾಟಕದ 222 ಕ್ಷೇತ್ರಗಳ ಫಲಿತಾಂಶ ಗೊತ್ತಾಗಲಿದೆ. ಯಾರು ಗೆದ್ದರೂ ಆ ಶಾಸಕರು ತಮ್ಮ ಕ್ಷೇತ್ರದ ಎಲ್ಲರಿಗೂ ಜನಪ್ರತಿನಿಧಿ. ತಮ್ಮ ಕ್ಷೇತ್ರದಲ್ಲಿ ಆಗಬೇಕಿರುವ ಮೂಲಭೂತ ಅಭಿವೃದ್ಧಿ ಕೆಲಸಗಳಿಗೆ ಗಮನ ಕೊಡಲಿ ಎನ್ನುವುದೇ ನಿರೀಕ್ಷೆ. ಗೆದ್ದವರು ತಮ್ಮ ಜಾತಿ, ಪಕ್ಷದವರಿಗೆ ಮಾತ್ರ ಶಾಸಕರಲ್ಲ. ಅವರು ಎಲ್ಲರಿಗೂ ಶಾಸಕರು. ಹಾಗೆ ಪಕ್ಷಗಳ ಕಾರ್ಯಕರ್ತರು ಕೂಡ. ಚುನಾವಣೆಗೆ 15 ದಿನಗಳಿರುವಾಗ ಆಯಾ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷಕ್ಕಾಗಿ ಅಭ್ಯರ್ಥಿಯ ಗೆಲುವಿಗಾಗಿ ಸಾಕಷ್ಟು ಹೋರಾಟ ಮಾಡಿರುತ್ತೀರಿ. ಈಗ ಚುನಾವಣೆ ಮುಗಿದಿದೆ. ಇನ್ನೇನಿದ್ದರೂ ಎಲ್ಲರೂ ಒಟ್ಟಾಗಿ ನಮ್ಮ ಕ್ಷೇತ್ರ ಹೇಗೆ ಅಭಿವೃದ್ಧಿಯಾಗಬೇಕು ಎಂದು ಯೋಚಿಸುವುದಷ್ಟೇ ಕೆಲಸ!

0
Shares
  • Share On Facebook
  • Tweet It


vote poll


Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Hanumantha Kamath June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Hanumantha Kamath June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search