• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರಿ ಶಾಲೆಗಳಲ್ಲಿನ್ನು ಯೆಸ್ ಸರ್/ಮೇಡಮ್ ಬದಲಿ ಜೈಹಿಂದ್ ಎನ್ನಬೇಕು, ಎಲ್ಲಿ ಗೊತ್ತಾ?

TNN Correspondent Posted On May 16, 2018
0


0
Shares
  • Share On Facebook
  • Tweet It

ಭೋಪಾಲ್: ಮೊದಲಿನಿಂದಲೂ ಸರ್ಕಾರಿ ಶಾಲೆಗಳಲ್ಲಿ ತರಗತಿಯ ಶಿಕ್ಷಕ/ಶಿಕ್ಷಕಿಯರು ಹಾಜರಾತಿ ತೆಗೆದುಕೊಳ್ಳುವಾಗ ವಿದ್ಯಾರ್ಥಿಗಳು ಯೆಸ್ ಸರ್/ಯೆಸ್ ಮೇಡಂ ಎಂದು ತಾವು ಬಂದಿರುವುದನ್ನು ಖಾತರಿಪಡಿಸುತ್ತಿದ್ದರು. ಆದರೆ ಇನ್ನು ಮುಂದೆ ವಿದ್ಯಾರ್ಥಿಗಳು ಯೆಸ್ ಸರ್/ಮೇಡಂ ಎನ್ನುವ ಬದಲಿ ಜೈಹಿಂದ್ ಎನ್ನಲಿದ್ದಾರೆ.

ಹೌದು, ಮಧ್ಯಪ್ರದೇಶ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಪ್ರಸಕ್ತ ಸಾಲಿನ ಜೂನ್ ಒಂದರಿಂದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಜರಾತಿ ತೆಗೆದುಕೊಳ್ಳುವಾಗ ಶಿಕ್ಷಕರಿಗೆ ಯೆಸ್ ಮೇಡಂ/ಸರ್ ಬದಲಿಗೆ ಜೈಹಿಂದ್ ಎನ್ನಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಈ ಕುರಿತು ಸರ್ಕಾರಿ ಶಾಲೆಗಳ ಇಲಾಖೆಯ ಉಪಕಾರ್ಯದರ್ಶಿ ಪ್ರಮೋದ್ ಸಿಂಗ್ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸ್ಫೂರ್ತಿ ತುಂಬುವ ದಿಸೆಯಲ್ಲಿ ರಾಜ್ಯ ಸರ್ಕಾರ ಯೆಸ್ ಸರ್/ಮೇಡಂ ಎನ್ನುವ ಬದಲು ಜೈಹಿಂದ್ ಎನ್ನುವಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿರುವ ಸುಮಾರು 1.22 ಲಕ್ಷ ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳು ಜೈಹಿಂದ್ ಎನ್ನುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಆದೇಶ ಖಾಸಗಿ ಶಾಲೆಗಳಿಗೆ ಅನ್ವಯಿಸುವುದಿಲ್ಲ. ಜೈ ಹಿಂದ್ ಎನ್ನುವುದು ವ್ಯಕ್ತಿಯಲ್ಲಿ ಸ್ಫೂರ್ತಿಯ ಕಿಡಿ ಹೊತ್ತಿಸುವುದರಿಂದ ಹಾಗೂ ಮಕ್ಕಳಲ್ಲಿ ಚಿಕ್ಕವರಿರುವಾಗಲೇ ದೇಶಪ್ರೇಮ ಬೆಳೆಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ವಿವರಿಸಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search