• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರಿ ಶಾಲೆಗಳಲ್ಲಿನ್ನು ಯೆಸ್ ಸರ್/ಮೇಡಮ್ ಬದಲಿ ಜೈಹಿಂದ್ ಎನ್ನಬೇಕು, ಎಲ್ಲಿ ಗೊತ್ತಾ?

TNN Correspondent Posted On May 16, 2018
0


0
Shares
  • Share On Facebook
  • Tweet It

ಭೋಪಾಲ್: ಮೊದಲಿನಿಂದಲೂ ಸರ್ಕಾರಿ ಶಾಲೆಗಳಲ್ಲಿ ತರಗತಿಯ ಶಿಕ್ಷಕ/ಶಿಕ್ಷಕಿಯರು ಹಾಜರಾತಿ ತೆಗೆದುಕೊಳ್ಳುವಾಗ ವಿದ್ಯಾರ್ಥಿಗಳು ಯೆಸ್ ಸರ್/ಯೆಸ್ ಮೇಡಂ ಎಂದು ತಾವು ಬಂದಿರುವುದನ್ನು ಖಾತರಿಪಡಿಸುತ್ತಿದ್ದರು. ಆದರೆ ಇನ್ನು ಮುಂದೆ ವಿದ್ಯಾರ್ಥಿಗಳು ಯೆಸ್ ಸರ್/ಮೇಡಂ ಎನ್ನುವ ಬದಲಿ ಜೈಹಿಂದ್ ಎನ್ನಲಿದ್ದಾರೆ.

ಹೌದು, ಮಧ್ಯಪ್ರದೇಶ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಪ್ರಸಕ್ತ ಸಾಲಿನ ಜೂನ್ ಒಂದರಿಂದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಜರಾತಿ ತೆಗೆದುಕೊಳ್ಳುವಾಗ ಶಿಕ್ಷಕರಿಗೆ ಯೆಸ್ ಮೇಡಂ/ಸರ್ ಬದಲಿಗೆ ಜೈಹಿಂದ್ ಎನ್ನಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಈ ಕುರಿತು ಸರ್ಕಾರಿ ಶಾಲೆಗಳ ಇಲಾಖೆಯ ಉಪಕಾರ್ಯದರ್ಶಿ ಪ್ರಮೋದ್ ಸಿಂಗ್ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸ್ಫೂರ್ತಿ ತುಂಬುವ ದಿಸೆಯಲ್ಲಿ ರಾಜ್ಯ ಸರ್ಕಾರ ಯೆಸ್ ಸರ್/ಮೇಡಂ ಎನ್ನುವ ಬದಲು ಜೈಹಿಂದ್ ಎನ್ನುವಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿರುವ ಸುಮಾರು 1.22 ಲಕ್ಷ ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳು ಜೈಹಿಂದ್ ಎನ್ನುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಆದೇಶ ಖಾಸಗಿ ಶಾಲೆಗಳಿಗೆ ಅನ್ವಯಿಸುವುದಿಲ್ಲ. ಜೈ ಹಿಂದ್ ಎನ್ನುವುದು ವ್ಯಕ್ತಿಯಲ್ಲಿ ಸ್ಫೂರ್ತಿಯ ಕಿಡಿ ಹೊತ್ತಿಸುವುದರಿಂದ ಹಾಗೂ ಮಕ್ಕಳಲ್ಲಿ ಚಿಕ್ಕವರಿರುವಾಗಲೇ ದೇಶಪ್ರೇಮ ಬೆಳೆಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ವಿವರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search