• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರಿ ಶಾಲೆಗಳಲ್ಲಿನ್ನು ಯೆಸ್ ಸರ್/ಮೇಡಮ್ ಬದಲಿ ಜೈಹಿಂದ್ ಎನ್ನಬೇಕು, ಎಲ್ಲಿ ಗೊತ್ತಾ?

TNN Correspondent Posted On May 16, 2018
0


0
Shares
  • Share On Facebook
  • Tweet It

ಭೋಪಾಲ್: ಮೊದಲಿನಿಂದಲೂ ಸರ್ಕಾರಿ ಶಾಲೆಗಳಲ್ಲಿ ತರಗತಿಯ ಶಿಕ್ಷಕ/ಶಿಕ್ಷಕಿಯರು ಹಾಜರಾತಿ ತೆಗೆದುಕೊಳ್ಳುವಾಗ ವಿದ್ಯಾರ್ಥಿಗಳು ಯೆಸ್ ಸರ್/ಯೆಸ್ ಮೇಡಂ ಎಂದು ತಾವು ಬಂದಿರುವುದನ್ನು ಖಾತರಿಪಡಿಸುತ್ತಿದ್ದರು. ಆದರೆ ಇನ್ನು ಮುಂದೆ ವಿದ್ಯಾರ್ಥಿಗಳು ಯೆಸ್ ಸರ್/ಮೇಡಂ ಎನ್ನುವ ಬದಲಿ ಜೈಹಿಂದ್ ಎನ್ನಲಿದ್ದಾರೆ.

ಹೌದು, ಮಧ್ಯಪ್ರದೇಶ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಪ್ರಸಕ್ತ ಸಾಲಿನ ಜೂನ್ ಒಂದರಿಂದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಜರಾತಿ ತೆಗೆದುಕೊಳ್ಳುವಾಗ ಶಿಕ್ಷಕರಿಗೆ ಯೆಸ್ ಮೇಡಂ/ಸರ್ ಬದಲಿಗೆ ಜೈಹಿಂದ್ ಎನ್ನಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಈ ಕುರಿತು ಸರ್ಕಾರಿ ಶಾಲೆಗಳ ಇಲಾಖೆಯ ಉಪಕಾರ್ಯದರ್ಶಿ ಪ್ರಮೋದ್ ಸಿಂಗ್ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸ್ಫೂರ್ತಿ ತುಂಬುವ ದಿಸೆಯಲ್ಲಿ ರಾಜ್ಯ ಸರ್ಕಾರ ಯೆಸ್ ಸರ್/ಮೇಡಂ ಎನ್ನುವ ಬದಲು ಜೈಹಿಂದ್ ಎನ್ನುವಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿರುವ ಸುಮಾರು 1.22 ಲಕ್ಷ ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳು ಜೈಹಿಂದ್ ಎನ್ನುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಆದೇಶ ಖಾಸಗಿ ಶಾಲೆಗಳಿಗೆ ಅನ್ವಯಿಸುವುದಿಲ್ಲ. ಜೈ ಹಿಂದ್ ಎನ್ನುವುದು ವ್ಯಕ್ತಿಯಲ್ಲಿ ಸ್ಫೂರ್ತಿಯ ಕಿಡಿ ಹೊತ್ತಿಸುವುದರಿಂದ ಹಾಗೂ ಮಕ್ಕಳಲ್ಲಿ ಚಿಕ್ಕವರಿರುವಾಗಲೇ ದೇಶಪ್ರೇಮ ಬೆಳೆಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ವಿವರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search