• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರ ಸ್ವೀಕಾರ, ಸಿದ್ದರಾಮಯ್ಯ ಗರ್ವಭಂಗ!

TNN Correspondent Posted On May 17, 2018
0


0
Shares
  • Share On Facebook
  • Tweet It

ಕೊನೆಗೂ ಆ ದಿನ ಬಂದೇ ಬಿಟ್ಟಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಹುಟ್ಟು ಹೋರಾಟಗಾರ ಬಿ.ಎಸ್.ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿದರೂ ವಿಫಲರಾದ ಸಿದ್ದರಾಮಯ್ಯನವರ ಗರ್ವಭಂಗ ಮಾಡಿದ್ದಾರೆ.

ಹೌದು, ಚುನಾವಣೆಗೂ ಮೊದಲು ಸಿದ್ದರಾಮಯ್ಯನವರ ಹುರುಪು, ಆಡಳಿತ ನಡೆಸುವಾಗ ಹಿಂದೂಗಳ ವಿರುದ್ಧ ತೋರಿದ ಧೋರಣೆ, ಸಾಲು ಸಾಲು ಹಿಂದೂಗಳ ಹತ್ಯೆಯಾದರೂ ಮಾಡಿದ ನಿರ್ಲಕ್ಷ್ಯ, ಮೌಢ್ಯ ನಿಷೇಧದ ಹೆಸರಿನಲ್ಲಿ ಹಿಂದೂಗಳ ಆಚರಣೆಗೆ ತಂದ ಭಂಗ, 3,500 ರೈತರು ಆತ್ಮಹತ್ಯೆ ಮಾಡಿಕೊಂಡರೂ ಕ್ರಮ ಕೈಗೊಳ್ಳದೇ ಇರುವುದು, ಸಚಿವರ ಹಗರಣ… ಹೀಗೆ ಸಾಲು ಸಾಲು ವೈಫಲ್ಯದಿಂದಾಗಿ ಸಿದ್ದರಾಮಯ್ಯನವರನ್ನು ಜನ ತಿರಸ್ಕರಿಸಿದ್ದಾರೆ. ಸಿದ್ದರಾಮಯ್ಯನವರನ್ನು ತವರೂರಿನಲ್ಲೇ ಸೋಲಿಸಿದ್ದು ಜನರ ಆಕ್ರೋಶಕ್ಕೆ ಹಿಡಿದ ಕನ್ನಡಿಯಾಗಿದೆ.

ಬಿದ್ದರೂ ಮಿಸೆ ಮಣ್ಣಾಗಲಿಲ್ಲ ಎಂಬಂತೆ ಚುನಾವಣೆ ಬಳಿಕ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು, ಅವರಪ್ಪನಾಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಎಂದು ಅಬ್ಬರಿಸಿದ್ದ ಸಿದ್ದರಾಮಯ್ಯನವರು ಜೆಡಿಎಸ್ ಜತೆ ಒಪ್ಪಂದ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾಗಿದ್ದರು.

ಆದರೆ ಕೊನೆಗೂ ಸಂವಿಧಾನದ ನಿಯಮದಂತೆ ಅತಿ ಹೆಚ್ಚು ಸ್ಥಾನ ಹೊಂದಿರುವ ಪಕ್ಷಕ್ಕೇ ರಾಜ್ಯಪಾಲರು ಮಣೆ ಹಾಕಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಇದರಿಂದ ಸಿದ್ದರಾಮಯ್ಯನವರ ಗರ್ವಭಂಗವಾದಂತಾಗಿದೆ. ಬಿಜೆಪಿ ಆಡಳಿತವಿರುವ 23ನೇ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಹಾಗೆಯೇ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಯಡಿಯೂರಪ್ಪನವರು ಉತ್ತಮ ಆಡಳಿತ ನೀಡಲಿ, ಹಿಂದೂಗಳು ಸೇರಿ ಎಲ್ಲ ವರ್ಗದವರು, ರೈತರ ಹಿತ ಕಾಪಾಡಲಿ. ಹತ್ತು ದಿನದಲ್ಲಿ ಬಹುಮತ ಸಾಬೀತುಪಡಿಸುವ ಮೂಲಕ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಅಲೆ ಎಬ್ಬಿಸಲಿ ಎಂಬುದೇ ನಮ್ಮ ಆಶಯವಾಗಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search