• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರ ಸ್ವೀಕಾರ, ಸಿದ್ದರಾಮಯ್ಯ ಗರ್ವಭಂಗ!

TNN Correspondent Posted On May 17, 2018


  • Share On Facebook
  • Tweet It

ಕೊನೆಗೂ ಆ ದಿನ ಬಂದೇ ಬಿಟ್ಟಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಹುಟ್ಟು ಹೋರಾಟಗಾರ ಬಿ.ಎಸ್.ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿದರೂ ವಿಫಲರಾದ ಸಿದ್ದರಾಮಯ್ಯನವರ ಗರ್ವಭಂಗ ಮಾಡಿದ್ದಾರೆ.

ಹೌದು, ಚುನಾವಣೆಗೂ ಮೊದಲು ಸಿದ್ದರಾಮಯ್ಯನವರ ಹುರುಪು, ಆಡಳಿತ ನಡೆಸುವಾಗ ಹಿಂದೂಗಳ ವಿರುದ್ಧ ತೋರಿದ ಧೋರಣೆ, ಸಾಲು ಸಾಲು ಹಿಂದೂಗಳ ಹತ್ಯೆಯಾದರೂ ಮಾಡಿದ ನಿರ್ಲಕ್ಷ್ಯ, ಮೌಢ್ಯ ನಿಷೇಧದ ಹೆಸರಿನಲ್ಲಿ ಹಿಂದೂಗಳ ಆಚರಣೆಗೆ ತಂದ ಭಂಗ, 3,500 ರೈತರು ಆತ್ಮಹತ್ಯೆ ಮಾಡಿಕೊಂಡರೂ ಕ್ರಮ ಕೈಗೊಳ್ಳದೇ ಇರುವುದು, ಸಚಿವರ ಹಗರಣ… ಹೀಗೆ ಸಾಲು ಸಾಲು ವೈಫಲ್ಯದಿಂದಾಗಿ ಸಿದ್ದರಾಮಯ್ಯನವರನ್ನು ಜನ ತಿರಸ್ಕರಿಸಿದ್ದಾರೆ. ಸಿದ್ದರಾಮಯ್ಯನವರನ್ನು ತವರೂರಿನಲ್ಲೇ ಸೋಲಿಸಿದ್ದು ಜನರ ಆಕ್ರೋಶಕ್ಕೆ ಹಿಡಿದ ಕನ್ನಡಿಯಾಗಿದೆ.

ಬಿದ್ದರೂ ಮಿಸೆ ಮಣ್ಣಾಗಲಿಲ್ಲ ಎಂಬಂತೆ ಚುನಾವಣೆ ಬಳಿಕ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು, ಅವರಪ್ಪನಾಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಎಂದು ಅಬ್ಬರಿಸಿದ್ದ ಸಿದ್ದರಾಮಯ್ಯನವರು ಜೆಡಿಎಸ್ ಜತೆ ಒಪ್ಪಂದ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾಗಿದ್ದರು.

ಆದರೆ ಕೊನೆಗೂ ಸಂವಿಧಾನದ ನಿಯಮದಂತೆ ಅತಿ ಹೆಚ್ಚು ಸ್ಥಾನ ಹೊಂದಿರುವ ಪಕ್ಷಕ್ಕೇ ರಾಜ್ಯಪಾಲರು ಮಣೆ ಹಾಕಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಇದರಿಂದ ಸಿದ್ದರಾಮಯ್ಯನವರ ಗರ್ವಭಂಗವಾದಂತಾಗಿದೆ. ಬಿಜೆಪಿ ಆಡಳಿತವಿರುವ 23ನೇ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಹಾಗೆಯೇ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಯಡಿಯೂರಪ್ಪನವರು ಉತ್ತಮ ಆಡಳಿತ ನೀಡಲಿ, ಹಿಂದೂಗಳು ಸೇರಿ ಎಲ್ಲ ವರ್ಗದವರು, ರೈತರ ಹಿತ ಕಾಪಾಡಲಿ. ಹತ್ತು ದಿನದಲ್ಲಿ ಬಹುಮತ ಸಾಬೀತುಪಡಿಸುವ ಮೂಲಕ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಅಲೆ ಎಬ್ಬಿಸಲಿ ಎಂಬುದೇ ನಮ್ಮ ಆಶಯವಾಗಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search