• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದಲ್ಲಿ ಕಾಂಗ್ರೆಸ್ ಬಿತ್ತು, ಬಿಜೆಪಿ ಗೆಲ್ಲಲು ಕಾರಣಗಳಿವೆ ಹತ್ತು

TNN Correspondent Posted On May 18, 2018
0


0
Shares
  • Share On Facebook
  • Tweet It

ಕರ್ನಾಟಕ ರಾಜಕೀಯ ದೇಶಾದ್ಯಂತ ಸದ್ದು ಮಾಡುತ್ತಿದೆ. ಎಲ್ಲೆಲ್ಲೂ, ಎಂತ ಘಟಾನುಘಟಿಗಳ ಬಾಯಲ್ಲೂ ರಾಜ್ಯದ ರಾಜಕೀಯದ ಮಾತುಗಳೇ ಕೇಳಿಬರುತ್ತಿವೆ. ಆದಾಗ್ಯೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಂದೆ ಹಲವು ಸವಾಲುಗಳು ಇವೆ ಎಂಬುದನ್ನು ಯಡಿಯೂರಪ್ಪನವರು ಮರೆಯಬಾರದು. ಅತ್ತ ಆ ಭಾಗ್ಯ, ಈ ಭಾಗ್ಯ ಕೊಟ್ಟೆ ಎಂದು ಬೀಗುತ್ತಿದ್ದ ಸಿದ್ದರಾಮಯ್ಯನವರೇ ಚಾಮುಂಡೇಶ್ವರಿಯಲ್ಲಿ ಸೋತು ಮುಖ ಒಣಗಿಸಿಕೊಂಡು ತಿರುಗಾಡುತ್ತಿದ್ದಾರೆ. ಜೆಡಿಎಸ್ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ ಎಂಬುದು ಸಹ ಅಷ್ಟೇ ದಿಟ.

ಹಾಗಾದರೆ ರಾಜ್ಯದಲ್ಲಿ ಕಮಲ ಅರಳಲು ಕಾರಣವೇನು? ಯಾಕೆ ತುಂಬ ಜನ ಬಿಜೆಪಿಯನ್ನೇ ಗೆಲ್ಲಿಸಿದರು? ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾರಣಗಳೇನು? ಯಾವ ಕಾರಣಕ್ಕಾಗಿ ಬಿಜೆಪಿ ಗೆದ್ದಿತು? ಎಂಬ ತರಹೇವಾರಿ ಪ್ರಶ್ನೆಗಳು ಜನರನ್ನು ಕಾಡುತ್ತಿರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರವಾಗಿ ಇಲ್ಲಿ ಹತ್ತು ಅಂಶಗಳನ್ನು ನೀಡಲಾಗಿದೆ.

  1. ರಾಜ್ಯದಲ್ಲಿ ಬಿಜೆಪಿಗೆ ಜನ ಬೆಂಬಲಿಸಲು ಮೊದಲನೇ ಕಾರಣವೆಂದರೆ ಆಡಳಿತ ವಿರೋಧಿ ಅಲೆ. ಸಿದ್ದರಾಮಯ್ಯನವರು ಸೀಮಿತ ಸಮುದಾಯಕ್ಕಾಗಿ ಯೋಜನೆ ಜಾರಿಗೊಳಿಸಿದ್ದು, ಸರ್ಕಾರದ ಹಲವು ಹಗರಣ, ಅಧಿಕಾರಿಗಳ ವರ್ಗಾವಣೆ ಸೇರಿ ಹಲವು ಕಾರಣಗಳಿಂದ ಜನ ಬಿಜೆಪಿಗೆ ಮತ ಹಾಕಿದರು ಎಂಬುದರಲ್ಲಿ ಸಂಶಯವಿಲ್ಲ.
  2. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಿಂದೂಗಳ ನಿರ್ಲಕ್ಷ್ಯವೂ ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಮಹತ್ತರ ಪಾತ್ರ ವಹಿಸಿದೆ. ಹನುಮ ಜಯಂತಿಗೆ ಅಡ್ಡಿ, ಗಣೇಶ ಚತುರ್ಥಿಗೆ ನಿಯಮ, 22 ಹಿಂದೂಗಳ ಹತ್ಯೆಯಾದರೂ ಕ್ರಮ ಕೈಗೊಳ್ಳದಿರುವುದು ಹಾಗೂ ಬಿಜೆಪಿಯ ಹಿಂದುತ್ವದ ಮಂತ್ರದಿಂದ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆಯಾಯಿತು.
  3. ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಡೆಸಿದ ಸಾಲು ಸಾಲು ರ್ಯಾಲಿಗಳು, ರಾಜ್ಯ ಸರ್ಕಾರದ ವೈಫಲ್ಯ ಎತ್ತಿ ತೋರಿಸಿದ್ದು, ಮೋದಿ ಅಲೆಯಿಂದ ಬಿಜೆಪಿಗೆ ಗೆಲುವು ನಿರಾಯಾಸವಾಗಿ ಲಭಿಸಿತು.
  4. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು, ಯೋಜನೆಗಳು ರಾಜ್ಯದಲ್ಲೂ ಜನ ಬಿಜೆಪಿಯನ್ನು ಬೆಂಬಲಿಸುವಂತೆ ಆಯಿತು.
  5. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತ್ಯೇಕ ಲಿಂಗಾಯತ ಧರ್ಮದ ಪರ ನಿಂತಿರುವುದು ಸಹ ಬಿಜೆಪಿಗೆ ವರದಾನವಾಯಿತು. ಮೋದಿ ಪರ ಒಲವಿದ್ದ ಯುವ ಲಿಂಗಾಯತರು ಸಿದ್ದರಾಮಯ್ಯರನ್ನು ಮಕಾಡೆ ಮಲಗಿಸಿದರು. ಅದೇ ಕಾರಣಕ್ಕೆ ಲಿಂಗಾಯತರು ಜಾಸ್ತಿ ಇರುವ ಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸಿತು.
  6. ಫೈರ್ ಬ್ರ್ಯಾಂಡ್ ಮುಖ್ಯಮಂತ್ರಿ ಎಂದೇ ಖ್ಯಾತಿಯಾಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಕರ್ನಾಟಕದಲ್ಲಿ ನಡೆಸಿದ ಸಾಲು ರ್ಯಾಲಿ, ಸಮಾವೇಶಗಳಿಂದ ರಾಜ್ಯದಲ್ಲಿ ಕಮಲ ಅರಳಲು ಸಹಕಾರಿಯಾಯಿತು.
  7. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಹಿಂದುತ್ವ ಮುನ್ನೆಲೆಗೆ ಬಂತು. ಆದರೆ, ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯನವರ ಡೋಂಗಿ ಹಿಂದುತ್ವವನ್ನು ಜನ ನಂಬದೆ, ಬಿಜೆಪಿಯನ್ನು ಬೆಂಬಲಿಸಿದರು.
  8. ರಾಜ್ಯದಲ್ಲಿ ಈ ಬಾರಿ ಯಡಿಯೂರಪ್ಪನವರ ವರ್ಚಸ್ಸು, ಸುರೇಶ್ ಕುಮಾರ್ ಅವರಂತಹ ನಾಯಕರ ಬೆಂಬಲ, ವಿರೋಧ ಪಕ್ಷದಲ್ಲಿ ಹಲವು ವಿಚಾರಗಳ ಪ್ರಸ್ತಾಪ, ಮಹದಾಯಿ ವಿಚಾರದಲ್ಲಿ ಬಿಜೆಪಿ ನಡೆಸಿದ ಪ್ರಯತ್ನಗಳೂ ಕಮಲ ಅರಳಲು ಬೆನ್ನೆಲುಬಾದವು.
  9. ಐದು ವರ್ಷ ರಾಜ್ಯವಾಳಿದ ಸಿದ್ದರಾಮಯ್ಯನವರು ಕಾನೂನು ಸುವ್ಯವಸ್ಥೆಯನ್ನೇ ಕಾಪಾಡಲಿಲ್ಲ. ಕರಾವಳಿ ಹೊತ್ತಿ ಉರಿಯಿತು, ಸಂಶೋಧಕ ಎಂ.ಎಂ.ಕಲಬುರ್ಗಿ ಹತ್ಯೆಯಾಯಿತು, ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದರು. 22 ಹಿಂದೂಗಳ ಹತ್ಯೆಯಾಯಿತು. ಆದರೂ ಸಿದ್ದರಾಮಯ್ಯನವರು ಮಗುಮ್ಮಾಗಿದ್ದದ್ದು ಬಿಜೆಪಿ ಗೆಲುವಿಗೆ ಸಹಕಾರಿಯಾಯಿತು.
  10. ಮೇಲಾಗಿ ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇದೆ. ದೇಶದ 22 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ. ಅಲ್ಲದೆ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಈ ಎಲ್ಲ ಕಾರಣಗಳು ರಾಜ್ಯದಲ್ಲಿ ಜನ ಬಿಜೆಪಿಯನ್ನು ನಂಬಿ, ಮತ ಹಾಕಲು ಕಾರಣವಾದವು.
0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search