• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಲ್ಲಿ ಬಿಎಸ್ ವೈ ಸರ್ಕಾರ ಸಾಲಮನ್ನಾ ಮಾಡಲು ಚಿಂತನೆ ನಡೆಸಿದರೆ, ಅಲ್ಲಿ ಕೇಂದ್ರ ಸರ್ಕಾರ ನೀರಾವರಿಗೆ ಹಣ ಮೀಸಲಿಟ್ಟಿದೆ

TNN Correspondent Posted On May 18, 2018


  • Share On Facebook
  • Tweet It

ದೆಹಲಿ: ರಾಜ್ಯದಲ್ಲಿ ಸರ್ಕಾರ ರಚಿಸಿದ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರ ಸಾಲ ಮನ್ನಾ ಮಾಡಲು ಮುಂದಾಗಿದ್ದರೆ, ಅಲ್ಲಿ ಕೇಂದ್ರ ಸರ್ಕಾರ ಸದ್ದಿಲ್ಲದೆ ರೈತರ ಅನುಕೂಲಕ್ಕಾಗಿ ಹಣ ಮೀಸಲಿಡುವ ಮೂಲಕ ಬಿಜೆಪಿ ರೈತರ ಪರ ಎಂಬುದನ್ನು ಸಾಬೀತುಪಡಿಸಿದೆ.

ಈಗಾಗಲೇ ಕೇಂದ್ರ ಸರ್ಕಾರ ಇದುವರೆಗೆ ಫಸಲ್ ಬಿಮಾ ಯೋಜನೆ, ಕೃಷಿ ಸಿಂಚಾಯಿ ಯೋಜನೆ, ರೈತರ ಬೆಳೆಗೆ ಒಂದೂವರೆ ಪಟ್ಟು ಬೆಂಬಲ ಬೆಲೆ ಘೋಷಿಸುವ ಮೂಲಕ ರೈತರ ಪರವಾಗಿ ನಿಂತಿದೆ. ಈಗ ರೈತರ ಆದಾಯ ಹೆಚ್ಚಿಸುವ ದೃಷ್ಟಿಯಿಂದ ನೀರಾವರಿ ಅಭಿವೃದ್ಧಿಗೆ 5000 ಸಾವಿರ ರೂಪಾಯಿ ಮಂಜೂರು ಮಾಡಲು ಸಚಿವ ಸಂಪುಟ ಸಭೆ ಅಂಕಿತ ಹಾಕಿದೆ.

ಹೌದು, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಡಿಯಲ್ಲಿ ಸಣ್ಣ ನೀರಾವರಿ ಫಂಡ್ (ಎಂಇಪಿ) ಆಗಿ 5 ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಿದೆ. ಕೇಂದ್ರ ಸರ್ಕಾರ ಕೃಷಿ ಸಿಂಚಾಯಿ ಯೋಜನೆ ಅನ್ವಯ 10 ಲಕ್ಷ ಹೆಕ್ಟೇರ್ ಕೃಷಿಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ಈಗ ಸಣ್ಣ ನೀರಾವರಿ ಫಂಡ್ ಆಗಿ 5,000 ಕೋಟಿ ರೂಪಾಯಿ ಮಂಜೂರು ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ಈಗಾಗಲೇ 2000 ಕೋಟಿ ರೂಪಾಯಿ ನೀಡಿದೆ. 2019-20ನೇ ಸಾಲಿನಲ್ಲಿ ಉಳಿದ 3000 ಕೋಟಿ ರೂಪಾಯಿ ನೀಡುವುದಾಗಿ ಸರ್ಕಾರ ತಿಳಿಸಿದೆ. ಸಣ್ಣ ನೀರಾವರಿ ಅಭಿವೃದ್ಧಿಗಾಗಿ ವಿವಿಧ ತಂತ್ರಜ್ಞಾನ ಅಳವಡಿಕೆ, ನೀರಿನ ಪೂರೈಕೆ ಸೇರಿ ಹಲವು ಅಂಶಗಳನ್ನು ಈ ಹಣದ ಮೂಲಕ ಅಭಿವೃದ್ಧಿಗೊಳಿಸಲಾಗುತ್ತದೆ.

  • Share On Facebook
  • Tweet It


- Advertisement -


Trending Now
ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
Tulunadu News June 8, 2023
ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
Tulunadu News June 8, 2023
Leave A Reply

  • Recent Posts

    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
  • Popular Posts

    • 1
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 2
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 3
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • 4
      ಹೆಣ್ಣು ಕಾಮದ ಸರಕಲ್ಲ!
    • 5
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search