• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಧರ್ಮದ ಬಗ್ಗೆ ಅವನಹೇಳನಕಾರಿಯಾಗಿ ಮಾತನಾಡಿದ ಮುಸ್ಲಿಂ ಯುವಕ ಈಗ ಜೈಲು ಪಾಲು!

TNN Correspondent Posted On May 18, 2018
0


0
Shares
  • Share On Facebook
  • Tweet It

ಡಿಸ್ಪುರ: ಮೊದಲಿನಿಂದಲೂ ಹಾಗೆಯೇ. ಹಿಂದೂ ಧರ್ಮ ಹಲವರ ದಾಳಿಗೆ, ಅವಹೇಳನಕಾರಿ ಹೇಳಿಕೆಗೆ ಒಳಗಾಗಿದೆ, ಈಗಲೂ ಒಳಗಾಗುತ್ತಿದೆ. ಅದಕ್ಕಾಗಿಯೇ ಕೆಲವರು ಭಗವದ್ಗೀತೆಯನ್ನು ಸುಟ್ಟು ಹಾಕುತ್ತೇವೆ ಎನ್ನುತ್ತಾರೆ, ರಾಮನೇ ಇಲ್ಲ ಎಂದು ಬೊಬ್ಬೆ ಹಾಕುತ್ತಾರೆ. ನಾವು ಹಿಂದೂಗಳೂ ಇಂತಹ ಕುತ್ಸಿತ ಮನಸ್ಸಿನವರನ್ನು ತಿರಸ್ಕರಿಸಿ ಸುಮ್ಮನಾಗುತ್ತೇವೆ. ಇದಕ್ಕೆ ಯಾರು ಏನೇ ಅಂದರೂ ಹಿಂದೂ ಧರ್ಮಕ್ಕೆ ಏನೂ ಮಾಡಲಾಗುವುದಿಲ್ಲ ಎಂಬ ಆತ್ಮವಿಶ್ವಾಸವೂ ಇದ್ದರೂ ಇರಬಹುದು.

ಆದರೆ ಈ ಬಾರಿ ಹಾಗೆ ಆಗಿಲ್ಲ. ಹಿಂದೂ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದವನಿಗೆ, ಹಿಂದೂ ಧರ್ಮೀಯರನ್ನು ಕೀಳಾಗಿ ಕಂಡ ಮುಸ್ಲಿಂ ಯುವಕನಿಗೆ ತಕ್ಕ ಶಾಸ್ತಿಯಾಗಿದ್ದು, ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಹೌದು, ಎರಡು ವಾರಗಳ ಹಿಂದೆ ಅಸ್ಸಾಂನ ಕರೀಂ ಗಂಜ್ ಜಿಲ್ಲೆಯ ಕಲಿಗಂಜ್ ಪ್ರದೇಶದಲ್ಲಿ ಶಾಹಿನ್ ಅಹ್ಮದ್ ಎಂಬ ಮುಸ್ಲಿಂ ಯುವಕ ಫೇಸ್ ಬುಕ್ಕಿನಲ್ಲಿ ಲೈವ್ ಬಂದು ಹಿಂದೂ ಧರ್ಮ ಹಾಗೂ ಹಿಂದೂಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಎಂದು ತಿಳಿದುಬಂದಿದೆ.

ಇದರಿಂದ ಕುಪಿತರಾಗಿದ್ದ ಯುವ ಸಂಘಟನೆಯೊಂದರ ಮುಖಂಡ ದೇವ್ ದುಲಾಲ್ ದಾಸ್ ಎಂಬುವವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಜರಂಗದಳ ಹಿಂದೂ ಸಂಘಟನೆಯ ಮುಖಂಡರು ಸಹ ಹಲವೆಡೆ ಪ್ರತಿಭಟನೆ ಮಾಡಿದ್ದರು. ಕೊನೆಗೆ ಒತ್ತಡ ಜಾಸ್ತಿಯಾದ ಬಳಿಕ ಪ್ರಕರಣ ದಾಖಲಾಗಿ 15 ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ.

ಯಾವುದೇ ಧರ್ಮವಾಗಲಿ ಬೇರೊಂದು ಧರ್ಮ, ಸಮುದಾಯ ಹಾಗೂ ವ್ಯಕ್ತಿಗಳನ್ನು ಕೀಳಾಗಿ ಕಾಣಿ, ಅವರನ್ನು ಹೀಯಾಳಿಸಿ, ಮನನೋಯಿಸಿ ಎಂದು ಹೇಳುವುದಿಲ್ಲ. ಆದರೆ ಇಸ್ಲಾಮಿನ ಕೆಲವು ಮೂಲಭೂತವಾದಿಗಳು ಹಿಂದೂ ಧರ್ಮೀಯರನ್ನು ಮತಾಂತರಗೊಳಿಸುವುದು, ಹೀಯಾಳಿಸುವುದು ಮಾಡುತ್ತಾರೆ. ಅಂತಹವರಿಗೆ ಈ ಮುಸ್ಲಿಂ ಯುವಕನಿಗೆ ಆದ ಗತಿಯೇ ಆದಾಗ ಮಾತ್ರ ಹಿಂದೂ ಧರ್ಮವನ್ನು ಕೆಣಕುವುದು ನಿಲ್ಲುತ್ತದೆ. ಹಾಗೆನಿಸುವುದಿಲ್ಲವೇ?

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search