• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂ ಧರ್ಮದ ಬಗ್ಗೆ ಅವನಹೇಳನಕಾರಿಯಾಗಿ ಮಾತನಾಡಿದ ಮುಸ್ಲಿಂ ಯುವಕ ಈಗ ಜೈಲು ಪಾಲು!

TNN Correspondent Posted On May 18, 2018


  • Share On Facebook
  • Tweet It

ಡಿಸ್ಪುರ: ಮೊದಲಿನಿಂದಲೂ ಹಾಗೆಯೇ. ಹಿಂದೂ ಧರ್ಮ ಹಲವರ ದಾಳಿಗೆ, ಅವಹೇಳನಕಾರಿ ಹೇಳಿಕೆಗೆ ಒಳಗಾಗಿದೆ, ಈಗಲೂ ಒಳಗಾಗುತ್ತಿದೆ. ಅದಕ್ಕಾಗಿಯೇ ಕೆಲವರು ಭಗವದ್ಗೀತೆಯನ್ನು ಸುಟ್ಟು ಹಾಕುತ್ತೇವೆ ಎನ್ನುತ್ತಾರೆ, ರಾಮನೇ ಇಲ್ಲ ಎಂದು ಬೊಬ್ಬೆ ಹಾಕುತ್ತಾರೆ. ನಾವು ಹಿಂದೂಗಳೂ ಇಂತಹ ಕುತ್ಸಿತ ಮನಸ್ಸಿನವರನ್ನು ತಿರಸ್ಕರಿಸಿ ಸುಮ್ಮನಾಗುತ್ತೇವೆ. ಇದಕ್ಕೆ ಯಾರು ಏನೇ ಅಂದರೂ ಹಿಂದೂ ಧರ್ಮಕ್ಕೆ ಏನೂ ಮಾಡಲಾಗುವುದಿಲ್ಲ ಎಂಬ ಆತ್ಮವಿಶ್ವಾಸವೂ ಇದ್ದರೂ ಇರಬಹುದು.

ಆದರೆ ಈ ಬಾರಿ ಹಾಗೆ ಆಗಿಲ್ಲ. ಹಿಂದೂ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದವನಿಗೆ, ಹಿಂದೂ ಧರ್ಮೀಯರನ್ನು ಕೀಳಾಗಿ ಕಂಡ ಮುಸ್ಲಿಂ ಯುವಕನಿಗೆ ತಕ್ಕ ಶಾಸ್ತಿಯಾಗಿದ್ದು, ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಹೌದು, ಎರಡು ವಾರಗಳ ಹಿಂದೆ ಅಸ್ಸಾಂನ ಕರೀಂ ಗಂಜ್ ಜಿಲ್ಲೆಯ ಕಲಿಗಂಜ್ ಪ್ರದೇಶದಲ್ಲಿ ಶಾಹಿನ್ ಅಹ್ಮದ್ ಎಂಬ ಮುಸ್ಲಿಂ ಯುವಕ ಫೇಸ್ ಬುಕ್ಕಿನಲ್ಲಿ ಲೈವ್ ಬಂದು ಹಿಂದೂ ಧರ್ಮ ಹಾಗೂ ಹಿಂದೂಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಎಂದು ತಿಳಿದುಬಂದಿದೆ.

ಇದರಿಂದ ಕುಪಿತರಾಗಿದ್ದ ಯುವ ಸಂಘಟನೆಯೊಂದರ ಮುಖಂಡ ದೇವ್ ದುಲಾಲ್ ದಾಸ್ ಎಂಬುವವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಜರಂಗದಳ ಹಿಂದೂ ಸಂಘಟನೆಯ ಮುಖಂಡರು ಸಹ ಹಲವೆಡೆ ಪ್ರತಿಭಟನೆ ಮಾಡಿದ್ದರು. ಕೊನೆಗೆ ಒತ್ತಡ ಜಾಸ್ತಿಯಾದ ಬಳಿಕ ಪ್ರಕರಣ ದಾಖಲಾಗಿ 15 ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ.

ಯಾವುದೇ ಧರ್ಮವಾಗಲಿ ಬೇರೊಂದು ಧರ್ಮ, ಸಮುದಾಯ ಹಾಗೂ ವ್ಯಕ್ತಿಗಳನ್ನು ಕೀಳಾಗಿ ಕಾಣಿ, ಅವರನ್ನು ಹೀಯಾಳಿಸಿ, ಮನನೋಯಿಸಿ ಎಂದು ಹೇಳುವುದಿಲ್ಲ. ಆದರೆ ಇಸ್ಲಾಮಿನ ಕೆಲವು ಮೂಲಭೂತವಾದಿಗಳು ಹಿಂದೂ ಧರ್ಮೀಯರನ್ನು ಮತಾಂತರಗೊಳಿಸುವುದು, ಹೀಯಾಳಿಸುವುದು ಮಾಡುತ್ತಾರೆ. ಅಂತಹವರಿಗೆ ಈ ಮುಸ್ಲಿಂ ಯುವಕನಿಗೆ ಆದ ಗತಿಯೇ ಆದಾಗ ಮಾತ್ರ ಹಿಂದೂ ಧರ್ಮವನ್ನು ಕೆಣಕುವುದು ನಿಲ್ಲುತ್ತದೆ. ಹಾಗೆನಿಸುವುದಿಲ್ಲವೇ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search