• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಪ್ರಮುಖರ ಹತ್ಯೆಗೆ ಸಂಚು ರೂಪಿಸಿದ ಉಗ್ರನ ಹೆಡೆಮುರಿ ಕಟ್ಟಿದ ಮಹಾ ಪೊಲೀಸ್

TNN Correspondent Posted On May 18, 2018
0


0
Shares
  • Share On Facebook
  • Tweet It

ಮುಂಬೈ: ಭಾರತದ ವಿರುದ್ಧ ಮತ್ತು ದೇಶದಲ್ಲಿ ಕುಕೃತ್ಯಗಳನ್ನು ನಡೆಸಲು ಸದಾ ಪ್ರಯತ್ನಿಸುವ ಪಾಕಿ ಮೂಲದ ಭಯೋತ್ಪಾದಕರ ದೇಶದ ಪೊಲೀಸರ ಕೈಗೆ ಸಿಲುಕಿ ಏಟು ತಿನ್ನುವುದು ಸಾಮಾನ್ಯ. ಇದೀಗ ದೇಶದ ಪ್ರಮುಖ ನಾಯಕರನ್ನು ಗುರಿಯಾಗಿಟ್ಟುಕೊಂಡು ಕುಕೃತ್ಯಗಳನ್ನು ನಡೆಸಲು ಯೋಜಿಸಿದ ಭಯೋತ್ಪಾದಕನ್ನೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

32 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ಭಯೋತ್ಪಾದಕ ನಿಯಂತ್ರಣ ದಳ ಬಂಧಿಸಿದ್ದು, ಭಾರತದ ಪ್ರಮುಖ ಮುಖಂಡರನ್ನು ಹತ್ಯೆ ಮಾಡಲು ಈತ ಸಂಚು ರೂಪಿಸುತ್ತಿದ್ದ ಎನ್ನಲಾಗಿದೆ. ಪಾಕಿಸ್ತಾನದ ಕರಾಚಿಯಲ್ಲಿ  ಭಯೋತ್ಪಾದಕ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆದುಕೊಂಡಿದ್ದಾನೆ ಎಂದು ಎಟಿಎಸ್ ತಿಳಿಸಿದೆ.

ಆರೋಪಿ ಭಾರಿ ಆಗಂತುಕ ಬಾಂಬ್ ಗಳನ್ನು, ಸೊಫಿಸ್ಟಿಕೇಟೆಡ್ ಮದ್ದುಗುಂಡುಗಳನ್ನು, ಸುಸೈಡ್ ಬಾಂಬ್ ಗಳನ್ನು, ಗನ್ ಗಳನ್ನು ಬಳಸುವ ತರಬೇತಿಯನ್ನು ಕರಾಚಿ ಮೂಲದ ಭಯೋತ್ಪಾದಕ ಸಂಘಟನೆಯಲ್ಲಿ ತರಬೇತಿ ಪಡೆದಿದ್ದಾನೆ.

ಈತ ಮುಂಬೈನಲ್ಲಿ ಪೊಲೀಸರ ಲಿಸ್ಟ್ ನಲ್ಲಿರುವ ವ್ಯಕ್ತಿಯೊಬ್ಬನ ಜೊತೆ ಸಂಪರ್ಕ ಸಾಧಿಸಿದ್ದು, ಆತನ ಮೂಲಕ ಶಾರ್ಜಾಗೆ ಪ್ರಯಾಣಿಸಿ, ಅಲ್ಲಿ ಆತನ ಪತ್ರವನ್ನು ತೋರಿಸಿ ಭಯೋತ್ಪಾದಕ ಸಂಘಟನೆ ಸೇರಿದ್ದಾನೆ. ದುಬೈನಿಂದ ಕರಾಚಿಗೆ ಹೋಗಿ ಅಲ್ಲಿ ಭಯೋತ್ಪಾದಕ ಸಂಘಟನೆಯಿಂದ ತರಬೇತಿ ಪಡೆದುಕೊಂಡಿದ್ದಾನೆ. ಈತನನ್ನು ಮೇ.11 ರಂದು ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ ಬಂಧಿಸಿ, ವಿಚಾರಣೆ ಆರಂಭಿಸಿದೆ.

ಬಂಧಿತ ವ್ಯಕ್ತಿ ಸಾರ್ವಜನಿಕರು ಸೇರುವ ಸ್ಥಳದಲ್ಲಿ ಮತ್ತು ದೇಶದ ಪ್ರಮುಖ ವ್ಯಕ್ತಿಗಳನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಎಂದು ತಿಳಿದು ಬಂದಿದೆ. ಶಂಕಿತ ಉಗ್ರನನ್ನು ಸಿಟಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಿದ್ದು, ಮೇ.21ರವರೆಗೆ ಪೊಲೀಸರ ವಶಕ್ಕೆ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search