• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರಿಂದ ಮತ್ತೊಂದು ದಿಟ್ಟ ನಿರ್ಧಾರ, ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಾಜಿ ಸಿಎಂಗಳಿಗೆ ನೋಟಿಸ್!

TNN Correspondent Posted On May 19, 2018
0


0
Shares
  • Share On Facebook
  • Tweet It

ಲಖನೌ: ಯೋಗಿ ಆದಿತ್ಯನಾಥರೆಂದರೇನೆ ಹಾಗೆ. ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಹಲವು ದಿಟ್ಟ ನಿರ್ಧಾರ, ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶದ ಗಮನವನ್ನು ಸೆಳೆದವರು. ಆಡಳಿತಕ್ಕೆ ಬರುತ್ತಲೇ ರೋಡ್ ರೋಮಿಯೋಗಳ ನಿಗ್ರಹಕ್ಕಾಗಿ ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿದರು, ರೈತರ ಸಾಲ ಮನ್ನಾ ಮಾಡಿದರು, ಅಕ್ರಮ ಕಸಾಯಿಖಾನೆಗಳ ನಿರ್ನಾಮ ಮಾಡಿದರು, ರೌಡಿಗಳನ್ನು ಮಟ್ಟಹಾಕುವ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿದರು.

ಇಂತಹ ಯೋಗಿ ಆದಿತ್ಯನಾಥರು ಈಗ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ತಮ್ಮ ಅಧಿಕಾರಾವಧಿ ಮುಗಿದರೂ ಸರ್ಕಾರಿ ಬಂಗಲೆಯಲ್ಲಿ ತಿಂದುಂಡು ತಿರುಗಾಡುತ್ತಿದ್ದ ಮಾಜಿ ಮುಖ್ಯಮಂತ್ರಿಗಳಿಗೆ ತಮ್ಮ ಕಚೇರಿ ಖಾಲಿ ಮಾಡುವಂತೆ ಆದೇಶಿಸಿ ಹೊರಡಿಸಿ ನೋಟಿಸ್ ಕಳುಹಿಸಿದ್ದಾರೆ.

ಆರು ಮುಖ್ಯಮಂತ್ರಿಗಳಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಬಹುಜನ ಸಮಾಜವಾದ ಪಕ್ಷದ ಮುಖ್ಯಸ್ಥೆ ಮಾಯಾವತಿ, ರಾಜನಾಥ ಸಿಂಗ್, ನಾರಾಯಣ ದತ್ ತಿವಾರಿ, ಅಖಿಲೇಶ್ ಯಾದವ್ ಅವರಂತ ಘಟಾನುಘಟಿಗಳಿದ್ದು, ಇವರೆಲ್ಲರಿಗೂ ಹದಿನೈದು ದಿನದಲ್ಲಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ.

ಹಾಗಂತ ವೈಯಕ್ತಿಕ ದ್ವೇಷದಿಂದ ಯೋಗಿ ಆದಿತ್ಯನಾಥರು ಈ ಕ್ರಮ ಕೈಗೊಂಡಿಲ್ಲ. ಯಾವುದೇ ಮುಖ್ಯಮಂತ್ರಿಗಳು ತಮ್ಮ ಅವಧಿ ಮುಗಿದ ಬಳಿಕ ಯಾವುದೇ ಕಾರಣಕ್ಕೂ ಸರ್ಕಾರಿ ಬಂಗಲೆಯಲ್ಲಿ ವಾಸ ಮಾಡಬಾರದು ಎಂದು ಆದೇಶ ಹೊರಡಿಸಿತ್ತು. ಅದರಂತೆ ಯೋಗಿ ಆದಿತ್ಯನಾಥರು ನೋಟಿಸ್ ಜಾರಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ಹರಿಯಾಣದ ಬಿಜೆಪಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಸರ್ಕಾರಿ ಜಾಗದಲ್ಲಿ ನಿರ್ಮಿಸಿದ್ದ ಪಕ್ಷದ ಕಚೇರಿ ತೆರವುಗೊಳಿಸಬೇಕು ಎಂದು ಆದೇಶ ಹೊರಡಿಸಿ ದೇಶಾದ್ಯಂತ ಸುದ್ದಿಯಾಗಿದ್ದರು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search