• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೆಎನ್ ಯು ವಿವಿಯಲ್ಲಿ ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಕೋರ್ಸ್ ಪ್ರಸ್ತಾಪ, ಇನ್ನಾದರೂ ಇವರಿಗೆ ಬುದ್ಧಿ ಬರಲಿ!

TNN Correspondent Posted On May 19, 2018
0


0
Shares
  • Share On Facebook
  • Tweet It

ದೆಹಲಿ: ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ 2016ರಲ್ಲಿ ಒಂದು ವಿಲಕ್ಷಣ ಘಟನೆಯೊಂದು ನಡೆಯಿತು. ದೇಶದ ಸಂಸತ್ತಿನ ಮೇಲೆ ದಾಳಿ ಮಾಡಿದ್ದ, ಪಾಪಿ ಅಫ್ಜಲ್ ಗುರು ತಿಥಿ ಆಚರಿಸುವ ಭರದಲ್ಲಿ, ಭಾರತದ ಅನ್ನವೇ ತಿನ್ನುವ ಕೆಲವು ಕುತ್ಸಿತ ಮನಸ್ಸುಗಳು ಭಾರತದ ವಿರುದ್ಧ ಘೋಷಣೆ ಕೂಗಿದ್ದರು. ಅದೂ ಅಫ್ಜಲ್ ಗುರು ಒಬ್ಬ ಇಸ್ಲಾಮಿಕ್ ಭಯೋತ್ಪಾದನೆಯ ದ್ಯೋತಕ, ಆತ ಭಾರತೀಯರನ್ನೇ ಕೊಂದಿದ್ದ ಎಂಬುದನ್ನೂ ಮರೆತು.

ಇಂತಹ ವಿದ್ಯಾರ್ಥಿಗಳು ಇದ್ದ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಈಗ ಬದಲಾವಣೆಯ ಪುಟ್ಟ ಗಾಳಿಯೊಂದು ಬೀಸಿದ್ದು, ವಿಶ್ವದ ಶಾಂತಿಗೇ ಭಂಗ ತಂದಿರುವ ಇಸ್ಲಾಮಿಕ ಭಯೋತ್ಪಾದನೆ ಕುರಿತು ಕೋರ್ಸ್ ಒಂದನ್ನು ತೆರೆಯಲು ಜೆಎನ್ ಯು ವಿವಿಯ ಅಕಾಡೆಮಿಕ್ ಕೌನ್ಸಿಲ್ ಕೇಂದ್ರದ ರಾಷ್ಟ್ರೀಯ ಭದ್ರತಾ ಅಧ್ಯಯನ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದೆ.

ಇತ್ತೀಚೆಗಷ್ಟೇ ವಿವಿಯ ಅಕಾಡೆಮಿ ಸಮಿತಿ 145ನೇ ಸಭೆ ನಡೆದಿದ್ದು, ಸಭೆಗೆ ಆಗಮಿಸಿದವರಲ್ಲಿ ಕೆಲವು ಜನ ಇದು ಜಾತ್ಯತೀತ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಇಂತಹದದ್ದೊಂದು ಕೋರ್ಸ್ ಅನ್ನು ವಿವಿಯಲ್ಲಿ ತೆರೆಯುವುದು ಬೇಡ ಎಂದು ವಾದಿಸಿದ್ದರು. ಆದರೂ ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಅಧ್ಯಯನ ಮಾಡಲು ಹಿನ್ನೆಲೆಯಲ್ಲಿ ಕೋರ್ಸ್ ತೆರೆಯಲು ಪ್ರಸ್ತಾಪ ರಚಿಸಲಾಗಿದೆ ಎಂದು ಸಮಿತಿಯ ವಿಶೇಷ ಆಹ್ವಾನಿತ ಸುಧೀರ್ ಕೆ. ಸುತಾರ್ ಮಾಹಿತಿ ನೀಡಿದ್ದಾರೆ.

ಒಂದು ವೇಳೆ ರಾಷ್ಟ್ರೀಯ ಭದ್ರತಾ ಅಧ್ಯಯನ ಕೇಂದ್ರವು ಒಪ್ಪಿಗೆ ಸೂಚಿಸಿದರೆ, ಜೆಎನ್ ಯು ವಿವಿಯಲ್ಲಿ ವಿದ್ಯಾರ್ಥಿಗಳು ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಅಧ್ಯಯನ ಮಾಡಲಿದ್ದಾರೆ. ಮೂಲಗಳ ಪ್ರಕಾರ ಪ್ರಸ್ತಾಪಕ್ಕೆ ಒಪ್ಪಿಗೆ ಸಿಕ್ಕಿದ್ದರೆ ವಿವಿಯಲ್ಲಿ ಮೊದಲ ಐದು ವರ್ಷದ ತನಕ ಇಸ್ಲಾಮಿಕ್ ಭಯೋತ್ಪಾದನೆ ಕುರಿತ ಸಂಶೋಧನೆಯೇ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಒಟ್ಟಿನಲ್ಲಿ ಇಸ್ಲಾಮಿನ ಹೆಸರಿನಲ್ಲಿ ಭಯೋತ್ಪಾದನೆಯಲ್ಲಿ ತೊಡಗಿದವನ ತಿಥಿಯನ್ನೇ ಆಚರಿಸಿದ್ದ ವಿಶ್ವವಿದ್ಯಾಲಯದಲ್ಲಿ ಈಗ ಅದೇ ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಅಧ್ಯಯನ ಮಾಡಲು ಕೋರ್ಸ್ ತೆರೆಯಲು ಮುಂದಾಗಿರುವುದು ಉತ್ತಮ ನಡೆಯಾಗಿದೆ. ಇನ್ನಾದರೂ ಭಾರತ್ ತೇರೆ ತುಕಡೆ ಹೋಂಗೆ ಎನ್ನುವವರಿಗೆ ಬುದ್ಧಿ ಬರಲಿ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search