• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೆಎನ್ ಯು ವಿವಿಯಲ್ಲಿ ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಕೋರ್ಸ್ ಪ್ರಸ್ತಾಪ, ಇನ್ನಾದರೂ ಇವರಿಗೆ ಬುದ್ಧಿ ಬರಲಿ!

TNN Correspondent Posted On May 19, 2018
0


0
Shares
  • Share On Facebook
  • Tweet It

ದೆಹಲಿ: ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ 2016ರಲ್ಲಿ ಒಂದು ವಿಲಕ್ಷಣ ಘಟನೆಯೊಂದು ನಡೆಯಿತು. ದೇಶದ ಸಂಸತ್ತಿನ ಮೇಲೆ ದಾಳಿ ಮಾಡಿದ್ದ, ಪಾಪಿ ಅಫ್ಜಲ್ ಗುರು ತಿಥಿ ಆಚರಿಸುವ ಭರದಲ್ಲಿ, ಭಾರತದ ಅನ್ನವೇ ತಿನ್ನುವ ಕೆಲವು ಕುತ್ಸಿತ ಮನಸ್ಸುಗಳು ಭಾರತದ ವಿರುದ್ಧ ಘೋಷಣೆ ಕೂಗಿದ್ದರು. ಅದೂ ಅಫ್ಜಲ್ ಗುರು ಒಬ್ಬ ಇಸ್ಲಾಮಿಕ್ ಭಯೋತ್ಪಾದನೆಯ ದ್ಯೋತಕ, ಆತ ಭಾರತೀಯರನ್ನೇ ಕೊಂದಿದ್ದ ಎಂಬುದನ್ನೂ ಮರೆತು.

ಇಂತಹ ವಿದ್ಯಾರ್ಥಿಗಳು ಇದ್ದ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಈಗ ಬದಲಾವಣೆಯ ಪುಟ್ಟ ಗಾಳಿಯೊಂದು ಬೀಸಿದ್ದು, ವಿಶ್ವದ ಶಾಂತಿಗೇ ಭಂಗ ತಂದಿರುವ ಇಸ್ಲಾಮಿಕ ಭಯೋತ್ಪಾದನೆ ಕುರಿತು ಕೋರ್ಸ್ ಒಂದನ್ನು ತೆರೆಯಲು ಜೆಎನ್ ಯು ವಿವಿಯ ಅಕಾಡೆಮಿಕ್ ಕೌನ್ಸಿಲ್ ಕೇಂದ್ರದ ರಾಷ್ಟ್ರೀಯ ಭದ್ರತಾ ಅಧ್ಯಯನ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದೆ.

ಇತ್ತೀಚೆಗಷ್ಟೇ ವಿವಿಯ ಅಕಾಡೆಮಿ ಸಮಿತಿ 145ನೇ ಸಭೆ ನಡೆದಿದ್ದು, ಸಭೆಗೆ ಆಗಮಿಸಿದವರಲ್ಲಿ ಕೆಲವು ಜನ ಇದು ಜಾತ್ಯತೀತ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಇಂತಹದದ್ದೊಂದು ಕೋರ್ಸ್ ಅನ್ನು ವಿವಿಯಲ್ಲಿ ತೆರೆಯುವುದು ಬೇಡ ಎಂದು ವಾದಿಸಿದ್ದರು. ಆದರೂ ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಅಧ್ಯಯನ ಮಾಡಲು ಹಿನ್ನೆಲೆಯಲ್ಲಿ ಕೋರ್ಸ್ ತೆರೆಯಲು ಪ್ರಸ್ತಾಪ ರಚಿಸಲಾಗಿದೆ ಎಂದು ಸಮಿತಿಯ ವಿಶೇಷ ಆಹ್ವಾನಿತ ಸುಧೀರ್ ಕೆ. ಸುತಾರ್ ಮಾಹಿತಿ ನೀಡಿದ್ದಾರೆ.

ಒಂದು ವೇಳೆ ರಾಷ್ಟ್ರೀಯ ಭದ್ರತಾ ಅಧ್ಯಯನ ಕೇಂದ್ರವು ಒಪ್ಪಿಗೆ ಸೂಚಿಸಿದರೆ, ಜೆಎನ್ ಯು ವಿವಿಯಲ್ಲಿ ವಿದ್ಯಾರ್ಥಿಗಳು ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಅಧ್ಯಯನ ಮಾಡಲಿದ್ದಾರೆ. ಮೂಲಗಳ ಪ್ರಕಾರ ಪ್ರಸ್ತಾಪಕ್ಕೆ ಒಪ್ಪಿಗೆ ಸಿಕ್ಕಿದ್ದರೆ ವಿವಿಯಲ್ಲಿ ಮೊದಲ ಐದು ವರ್ಷದ ತನಕ ಇಸ್ಲಾಮಿಕ್ ಭಯೋತ್ಪಾದನೆ ಕುರಿತ ಸಂಶೋಧನೆಯೇ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಒಟ್ಟಿನಲ್ಲಿ ಇಸ್ಲಾಮಿನ ಹೆಸರಿನಲ್ಲಿ ಭಯೋತ್ಪಾದನೆಯಲ್ಲಿ ತೊಡಗಿದವನ ತಿಥಿಯನ್ನೇ ಆಚರಿಸಿದ್ದ ವಿಶ್ವವಿದ್ಯಾಲಯದಲ್ಲಿ ಈಗ ಅದೇ ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಅಧ್ಯಯನ ಮಾಡಲು ಕೋರ್ಸ್ ತೆರೆಯಲು ಮುಂದಾಗಿರುವುದು ಉತ್ತಮ ನಡೆಯಾಗಿದೆ. ಇನ್ನಾದರೂ ಭಾರತ್ ತೇರೆ ತುಕಡೆ ಹೋಂಗೆ ಎನ್ನುವವರಿಗೆ ಬುದ್ಧಿ ಬರಲಿ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search