• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೆಎನ್ ಯು ವಿವಿಯಲ್ಲಿ ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಕೋರ್ಸ್ ಪ್ರಸ್ತಾಪ, ಇನ್ನಾದರೂ ಇವರಿಗೆ ಬುದ್ಧಿ ಬರಲಿ!

TNN Correspondent Posted On May 19, 2018
0


0
Shares
  • Share On Facebook
  • Tweet It

ದೆಹಲಿ: ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ 2016ರಲ್ಲಿ ಒಂದು ವಿಲಕ್ಷಣ ಘಟನೆಯೊಂದು ನಡೆಯಿತು. ದೇಶದ ಸಂಸತ್ತಿನ ಮೇಲೆ ದಾಳಿ ಮಾಡಿದ್ದ, ಪಾಪಿ ಅಫ್ಜಲ್ ಗುರು ತಿಥಿ ಆಚರಿಸುವ ಭರದಲ್ಲಿ, ಭಾರತದ ಅನ್ನವೇ ತಿನ್ನುವ ಕೆಲವು ಕುತ್ಸಿತ ಮನಸ್ಸುಗಳು ಭಾರತದ ವಿರುದ್ಧ ಘೋಷಣೆ ಕೂಗಿದ್ದರು. ಅದೂ ಅಫ್ಜಲ್ ಗುರು ಒಬ್ಬ ಇಸ್ಲಾಮಿಕ್ ಭಯೋತ್ಪಾದನೆಯ ದ್ಯೋತಕ, ಆತ ಭಾರತೀಯರನ್ನೇ ಕೊಂದಿದ್ದ ಎಂಬುದನ್ನೂ ಮರೆತು.

ಇಂತಹ ವಿದ್ಯಾರ್ಥಿಗಳು ಇದ್ದ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಈಗ ಬದಲಾವಣೆಯ ಪುಟ್ಟ ಗಾಳಿಯೊಂದು ಬೀಸಿದ್ದು, ವಿಶ್ವದ ಶಾಂತಿಗೇ ಭಂಗ ತಂದಿರುವ ಇಸ್ಲಾಮಿಕ ಭಯೋತ್ಪಾದನೆ ಕುರಿತು ಕೋರ್ಸ್ ಒಂದನ್ನು ತೆರೆಯಲು ಜೆಎನ್ ಯು ವಿವಿಯ ಅಕಾಡೆಮಿಕ್ ಕೌನ್ಸಿಲ್ ಕೇಂದ್ರದ ರಾಷ್ಟ್ರೀಯ ಭದ್ರತಾ ಅಧ್ಯಯನ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದೆ.

ಇತ್ತೀಚೆಗಷ್ಟೇ ವಿವಿಯ ಅಕಾಡೆಮಿ ಸಮಿತಿ 145ನೇ ಸಭೆ ನಡೆದಿದ್ದು, ಸಭೆಗೆ ಆಗಮಿಸಿದವರಲ್ಲಿ ಕೆಲವು ಜನ ಇದು ಜಾತ್ಯತೀತ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಇಂತಹದದ್ದೊಂದು ಕೋರ್ಸ್ ಅನ್ನು ವಿವಿಯಲ್ಲಿ ತೆರೆಯುವುದು ಬೇಡ ಎಂದು ವಾದಿಸಿದ್ದರು. ಆದರೂ ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಅಧ್ಯಯನ ಮಾಡಲು ಹಿನ್ನೆಲೆಯಲ್ಲಿ ಕೋರ್ಸ್ ತೆರೆಯಲು ಪ್ರಸ್ತಾಪ ರಚಿಸಲಾಗಿದೆ ಎಂದು ಸಮಿತಿಯ ವಿಶೇಷ ಆಹ್ವಾನಿತ ಸುಧೀರ್ ಕೆ. ಸುತಾರ್ ಮಾಹಿತಿ ನೀಡಿದ್ದಾರೆ.

ಒಂದು ವೇಳೆ ರಾಷ್ಟ್ರೀಯ ಭದ್ರತಾ ಅಧ್ಯಯನ ಕೇಂದ್ರವು ಒಪ್ಪಿಗೆ ಸೂಚಿಸಿದರೆ, ಜೆಎನ್ ಯು ವಿವಿಯಲ್ಲಿ ವಿದ್ಯಾರ್ಥಿಗಳು ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಅಧ್ಯಯನ ಮಾಡಲಿದ್ದಾರೆ. ಮೂಲಗಳ ಪ್ರಕಾರ ಪ್ರಸ್ತಾಪಕ್ಕೆ ಒಪ್ಪಿಗೆ ಸಿಕ್ಕಿದ್ದರೆ ವಿವಿಯಲ್ಲಿ ಮೊದಲ ಐದು ವರ್ಷದ ತನಕ ಇಸ್ಲಾಮಿಕ್ ಭಯೋತ್ಪಾದನೆ ಕುರಿತ ಸಂಶೋಧನೆಯೇ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಒಟ್ಟಿನಲ್ಲಿ ಇಸ್ಲಾಮಿನ ಹೆಸರಿನಲ್ಲಿ ಭಯೋತ್ಪಾದನೆಯಲ್ಲಿ ತೊಡಗಿದವನ ತಿಥಿಯನ್ನೇ ಆಚರಿಸಿದ್ದ ವಿಶ್ವವಿದ್ಯಾಲಯದಲ್ಲಿ ಈಗ ಅದೇ ಇಸ್ಲಾಮಿಕ್ ಭಯೋತ್ಪಾದನೆ ಕುರಿತು ಅಧ್ಯಯನ ಮಾಡಲು ಕೋರ್ಸ್ ತೆರೆಯಲು ಮುಂದಾಗಿರುವುದು ಉತ್ತಮ ನಡೆಯಾಗಿದೆ. ಇನ್ನಾದರೂ ಭಾರತ್ ತೇರೆ ತುಕಡೆ ಹೋಂಗೆ ಎನ್ನುವವರಿಗೆ ಬುದ್ಧಿ ಬರಲಿ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search