• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಸ್ತೆ ಕಾಮಗಾರಿಯ ಭ್ರಷ್ಟ ಗುತ್ತಿಗೆದಾರರಿಗೆ ಸಚಿವ ನಿತಿನ್ ಗಡ್ಕರಿ ಹೇಗೆ ಎಚ್ಚರಿಕೆ ನೀಡಿದ್ದಾರೆ ನೋಡಿ!

TNN Correspondent Posted On May 20, 2018
0


0
Shares
  • Share On Facebook
  • Tweet It

ಭೋಪಾಲ್: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಪ್ರಸ್ತುತ 400ಕ್ಕೂ ಅಧಿಕ ರಸ್ತೆ ಯೋಜನೆಗಳು ಮುಗಿಯುವ ಹಂತದಲ್ಲಿದ್ದರೆ, 200 ಯೋಜನೆಗಳಿಗೆ ಚಾಲನೆ ನೀಡುವ ಚಿಂತನೆಯಲ್ಲಿ ಸರ್ಕಾರವಿದೆ.

ಹೀಗೆ ಯಾವುದೇ ಸರ್ಕಾರಗಳು ಯೋಜನೆಗಳನ್ನೇನೋ ಜಾರಿಗೆ ತರುತ್ತವೆ. ಆದರೆ ಆ ಯೋಜನೆಗಳು ಎಷ್ಟರಮಟ್ಟಿಗೆ ಜಾರಿಗೆ ಬಂದವು, ಎಷ್ಟರಮಟ್ಟಿಗೆ ಕಾಮಗಾರಿ ಗುಣಮಟ್ಟದಿಂದ ಕೂಡಿದೆ, ಗುತ್ತಿಗೆದಾರರು ಹೇಗೆ ಕಾಮಗಾರಿ ಪೂರ್ಣಗೊಳಿಸಲು ಬದ್ಧತೆ ತೋರಿಸುತ್ತಾರೆ ಎಂಬುದನ್ನು ಗಮನಹರಿಸುವುದು ತುಸು ಕಷ್ಟಸಾಧ್ಯ.

ಆದರೆ ಈ ಮಾತಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ವಿರುದ್ಧವಾಗಿದ್ದು, ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ಮಾಡಿದರೆ, ರಸ್ತೆ ಯೋಜನೆಗಳಲ್ಲಿ ಭ್ರಷ್ಟಾಚಾರ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೊಳಿಸುವ ರಸ್ತೆ ಯೋಜನೆಗಳು ಸಮರ್ಪಕವಾಗಿ ಜಾರಿಗೊಳಿಸಬೇಕು. ಇದಕ್ಕಾಗಿ ಗುತ್ತಿಗೆದಾರರು ಬದ್ಧತೆ ತೋರಿಸಬೇಕು. ಒಂದು ವೇಳೆ ಗುತ್ತಿಗೆದಾರರು ಅಕ್ರಮ ಎಸಗಿದರೆ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ರಸ್ತೆ ಯೋಜನೆಗಳು ದೇಶದ ಅಭಿವೃದ್ಧಿಯನ್ನು ಬಿಂಬಿಸುತ್ತವೆ. ಅದಕ್ಕಾಗಿಯೇ ಕೇಂದ್ರ ಸರ್ಕಾರ ರಸ್ತೆ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ರಸ್ತೆ ಕಾಮಗಾರಿಗಳಿಗೆ ನೀಡುವ ಹಣ ಗುತ್ತಿಗೆದಾರರದ್ದಲ್ಲ, ಯೋಜನೆಗೆ ಸೀಮಿತವಾದ ಹಣ ಅದೇ ಕಾರಣಕ್ಕೆ ಮಾತ್ರ ಬಳಸಬೇಕು ಎಂದು ಸೂಚಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search