• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಬಿಜೆಪಿ ಶತಕ ಬಾರಿಸುವ ಹಾಗೆ ಮಾಡಿದ ಚಾಣಕ್ಯನ ದೃಷ್ಟಿ ಈಗ ಯಾವ ರಾಜ್ಯದತ್ತ ನೆಟ್ಟಿದೆ ಗೊತ್ತಾ?

TNN Correspondent Posted On May 20, 2018
0


0
Shares
  • Share On Facebook
  • Tweet It

2013ರ ವಿಧಾನಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಬಿಜೆಪಿ ತೆರೆಮರೆಗೆ ಸರಿಯಿತು ಎಂದೇ ಹೇಳಲಾಗುತ್ತಿತ್ತು. ಆದರೆ 2018ರ ಚುನಾವಣೆ ಫಲಿತಾಂಶದ ಬಳಿಕ ಮರೆಗೆ ಸರಿದಿದ್ದು ಕಾಂಗ್ರೆಸ್ ಎಂಬುದು ಈಗ ಜಗಜ್ಜಾಹೀರಾಗಿದೆ. ಪ್ರಸ್ತುತ ಬಿಜೆಪಿ ಅಧಿಕಾರ ಹಿಡಿಯದಿರಬಹುದು, ಆದರೆ ಅಧಿಕ ಸ್ಥಾನ ಪಡೆದ ರಾಜ್ಯದ ಮೊದಲ ಪಕ್ಷವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಹೀಗೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದ ರಾಜಕೀಯ ಹೆಬ್ಬಾಗಿಲು ಆಗಿರುವ ಕರ್ನಾಟಕದಲ್ಲಿ ಬಿಜೆಪಿ ಶತಕ ಬಾರಿಸುವಲ್ಲಿ ಪ್ರಧಾನಿ ಮೋದಿ ಅಲೆ, ಯಡಿಯೂರಪ್ಪ ವರ್ಚಸ್ಸು ಎಷ್ಟಿದೆಯೋ, ಅಷ್ಟೇ ಪ್ರಮಾಣದ ತಂತ್ರಗಾರಿಕೆ, ಸಂಘಟನೆ, ಚಾಣಕ್ಷತನವನ್ನು ತೋರಿಸಿದ್ದು ಅಮಿತ್ ಶಾ. ಅದೇ ಕಾರಣಕ್ಕೆ ಅವರನ್ನು ಚಾಣಕ್ಯ ಎನ್ನುವುದು.

ಇಂತಹ ಚಾಣಕ್ಯ ಕರ್ನಾಟಕದಲ್ಲಿ ಬಿಜಿಪಿ ಅಧಿಕಾರ ಹಿಡಿಯಲಿಲ್ಲವಲ್ಲ ಎಂದು ಸುಮ್ಮನೆ ಕುಳಿತಿಲ್ಲ. ಮುಂದಿನ ವರ್ಷ ತೆಲಂಗಾಣದಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಶಸ್ತ್ರಸನ್ನದ್ಧರಾಗುತ್ತಿದ್ದಾರೆ. ತಂತ್ರಗಾರಿಕೆ ರೂಪಿಸುತ್ತಿದ್ದಾರೆ.

ಹೌದು, ಮುಂದಿನ ವರ್ಷ ಬಹು ಕುತೂಹಲ ಕೆರಳಿಸಿರುವ ಲೋಕಸಬೆ ಚುನಾವಣೆ ಜತೆಗೆ, ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹಾಗಾಗಿ ಅಮಿತ್ ಶಾ ಅವರು ಲೋಕಸಭೆ ಚುನಾವಣೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಅಷ್ಟೇ ಪ್ರಾಮುಖ್ಯತೆಯನ್ನು ತೆಲಂಗಾಣಕ್ಕೂ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಲಕ್ಷ್ಮಣ್ ಮಾಹಿತಿ ನೀಡಿದ್ದು, ಇತ್ತೀಚೆಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ದೆಹಲಿಯಲ್ಲಿ ನಮ್ಮೊಂದಿಗೆ ಸಭೆ ನಡೆಸಿದ್ದಾರೆ, ಅಲ್ಲದೆ ನಮ್ಮ ಮುಂದಿನ ಗಮನ ತೆಲಂಗಾಣ ವಿಧಾನಸಭೆ ಚುನಾವಣೆಯತ್ತ ಹರಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಒಡಿಶಾ ಚುನಾವಣೆಗಳತ್ತಲೂ ನಾವು ಗಮನ ಕೇಂದ್ರೀಕೃತವಾಗಿಸೋಣ ಎಂಬುದಾಗಿ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search