• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಬಿಜೆಪಿ ಶತಕ ಬಾರಿಸುವ ಹಾಗೆ ಮಾಡಿದ ಚಾಣಕ್ಯನ ದೃಷ್ಟಿ ಈಗ ಯಾವ ರಾಜ್ಯದತ್ತ ನೆಟ್ಟಿದೆ ಗೊತ್ತಾ?

TNN Correspondent Posted On May 20, 2018
0


0
Shares
  • Share On Facebook
  • Tweet It

2013ರ ವಿಧಾನಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಬಿಜೆಪಿ ತೆರೆಮರೆಗೆ ಸರಿಯಿತು ಎಂದೇ ಹೇಳಲಾಗುತ್ತಿತ್ತು. ಆದರೆ 2018ರ ಚುನಾವಣೆ ಫಲಿತಾಂಶದ ಬಳಿಕ ಮರೆಗೆ ಸರಿದಿದ್ದು ಕಾಂಗ್ರೆಸ್ ಎಂಬುದು ಈಗ ಜಗಜ್ಜಾಹೀರಾಗಿದೆ. ಪ್ರಸ್ತುತ ಬಿಜೆಪಿ ಅಧಿಕಾರ ಹಿಡಿಯದಿರಬಹುದು, ಆದರೆ ಅಧಿಕ ಸ್ಥಾನ ಪಡೆದ ರಾಜ್ಯದ ಮೊದಲ ಪಕ್ಷವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಹೀಗೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದ ರಾಜಕೀಯ ಹೆಬ್ಬಾಗಿಲು ಆಗಿರುವ ಕರ್ನಾಟಕದಲ್ಲಿ ಬಿಜೆಪಿ ಶತಕ ಬಾರಿಸುವಲ್ಲಿ ಪ್ರಧಾನಿ ಮೋದಿ ಅಲೆ, ಯಡಿಯೂರಪ್ಪ ವರ್ಚಸ್ಸು ಎಷ್ಟಿದೆಯೋ, ಅಷ್ಟೇ ಪ್ರಮಾಣದ ತಂತ್ರಗಾರಿಕೆ, ಸಂಘಟನೆ, ಚಾಣಕ್ಷತನವನ್ನು ತೋರಿಸಿದ್ದು ಅಮಿತ್ ಶಾ. ಅದೇ ಕಾರಣಕ್ಕೆ ಅವರನ್ನು ಚಾಣಕ್ಯ ಎನ್ನುವುದು.

ಇಂತಹ ಚಾಣಕ್ಯ ಕರ್ನಾಟಕದಲ್ಲಿ ಬಿಜಿಪಿ ಅಧಿಕಾರ ಹಿಡಿಯಲಿಲ್ಲವಲ್ಲ ಎಂದು ಸುಮ್ಮನೆ ಕುಳಿತಿಲ್ಲ. ಮುಂದಿನ ವರ್ಷ ತೆಲಂಗಾಣದಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಶಸ್ತ್ರಸನ್ನದ್ಧರಾಗುತ್ತಿದ್ದಾರೆ. ತಂತ್ರಗಾರಿಕೆ ರೂಪಿಸುತ್ತಿದ್ದಾರೆ.

ಹೌದು, ಮುಂದಿನ ವರ್ಷ ಬಹು ಕುತೂಹಲ ಕೆರಳಿಸಿರುವ ಲೋಕಸಬೆ ಚುನಾವಣೆ ಜತೆಗೆ, ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹಾಗಾಗಿ ಅಮಿತ್ ಶಾ ಅವರು ಲೋಕಸಭೆ ಚುನಾವಣೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಅಷ್ಟೇ ಪ್ರಾಮುಖ್ಯತೆಯನ್ನು ತೆಲಂಗಾಣಕ್ಕೂ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಲಕ್ಷ್ಮಣ್ ಮಾಹಿತಿ ನೀಡಿದ್ದು, ಇತ್ತೀಚೆಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ದೆಹಲಿಯಲ್ಲಿ ನಮ್ಮೊಂದಿಗೆ ಸಭೆ ನಡೆಸಿದ್ದಾರೆ, ಅಲ್ಲದೆ ನಮ್ಮ ಮುಂದಿನ ಗಮನ ತೆಲಂಗಾಣ ವಿಧಾನಸಭೆ ಚುನಾವಣೆಯತ್ತ ಹರಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಒಡಿಶಾ ಚುನಾವಣೆಗಳತ್ತಲೂ ನಾವು ಗಮನ ಕೇಂದ್ರೀಕೃತವಾಗಿಸೋಣ ಎಂಬುದಾಗಿ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search