• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಬಿಜೆಪಿ ಶತಕ ಬಾರಿಸುವ ಹಾಗೆ ಮಾಡಿದ ಚಾಣಕ್ಯನ ದೃಷ್ಟಿ ಈಗ ಯಾವ ರಾಜ್ಯದತ್ತ ನೆಟ್ಟಿದೆ ಗೊತ್ತಾ?

TNN Correspondent Posted On May 20, 2018
0


0
Shares
  • Share On Facebook
  • Tweet It

2013ರ ವಿಧಾನಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಬಿಜೆಪಿ ತೆರೆಮರೆಗೆ ಸರಿಯಿತು ಎಂದೇ ಹೇಳಲಾಗುತ್ತಿತ್ತು. ಆದರೆ 2018ರ ಚುನಾವಣೆ ಫಲಿತಾಂಶದ ಬಳಿಕ ಮರೆಗೆ ಸರಿದಿದ್ದು ಕಾಂಗ್ರೆಸ್ ಎಂಬುದು ಈಗ ಜಗಜ್ಜಾಹೀರಾಗಿದೆ. ಪ್ರಸ್ತುತ ಬಿಜೆಪಿ ಅಧಿಕಾರ ಹಿಡಿಯದಿರಬಹುದು, ಆದರೆ ಅಧಿಕ ಸ್ಥಾನ ಪಡೆದ ರಾಜ್ಯದ ಮೊದಲ ಪಕ್ಷವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಹೀಗೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದ ರಾಜಕೀಯ ಹೆಬ್ಬಾಗಿಲು ಆಗಿರುವ ಕರ್ನಾಟಕದಲ್ಲಿ ಬಿಜೆಪಿ ಶತಕ ಬಾರಿಸುವಲ್ಲಿ ಪ್ರಧಾನಿ ಮೋದಿ ಅಲೆ, ಯಡಿಯೂರಪ್ಪ ವರ್ಚಸ್ಸು ಎಷ್ಟಿದೆಯೋ, ಅಷ್ಟೇ ಪ್ರಮಾಣದ ತಂತ್ರಗಾರಿಕೆ, ಸಂಘಟನೆ, ಚಾಣಕ್ಷತನವನ್ನು ತೋರಿಸಿದ್ದು ಅಮಿತ್ ಶಾ. ಅದೇ ಕಾರಣಕ್ಕೆ ಅವರನ್ನು ಚಾಣಕ್ಯ ಎನ್ನುವುದು.

ಇಂತಹ ಚಾಣಕ್ಯ ಕರ್ನಾಟಕದಲ್ಲಿ ಬಿಜಿಪಿ ಅಧಿಕಾರ ಹಿಡಿಯಲಿಲ್ಲವಲ್ಲ ಎಂದು ಸುಮ್ಮನೆ ಕುಳಿತಿಲ್ಲ. ಮುಂದಿನ ವರ್ಷ ತೆಲಂಗಾಣದಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಶಸ್ತ್ರಸನ್ನದ್ಧರಾಗುತ್ತಿದ್ದಾರೆ. ತಂತ್ರಗಾರಿಕೆ ರೂಪಿಸುತ್ತಿದ್ದಾರೆ.

ಹೌದು, ಮುಂದಿನ ವರ್ಷ ಬಹು ಕುತೂಹಲ ಕೆರಳಿಸಿರುವ ಲೋಕಸಬೆ ಚುನಾವಣೆ ಜತೆಗೆ, ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹಾಗಾಗಿ ಅಮಿತ್ ಶಾ ಅವರು ಲೋಕಸಭೆ ಚುನಾವಣೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಅಷ್ಟೇ ಪ್ರಾಮುಖ್ಯತೆಯನ್ನು ತೆಲಂಗಾಣಕ್ಕೂ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಲಕ್ಷ್ಮಣ್ ಮಾಹಿತಿ ನೀಡಿದ್ದು, ಇತ್ತೀಚೆಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ದೆಹಲಿಯಲ್ಲಿ ನಮ್ಮೊಂದಿಗೆ ಸಭೆ ನಡೆಸಿದ್ದಾರೆ, ಅಲ್ಲದೆ ನಮ್ಮ ಮುಂದಿನ ಗಮನ ತೆಲಂಗಾಣ ವಿಧಾನಸಭೆ ಚುನಾವಣೆಯತ್ತ ಹರಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಒಡಿಶಾ ಚುನಾವಣೆಗಳತ್ತಲೂ ನಾವು ಗಮನ ಕೇಂದ್ರೀಕೃತವಾಗಿಸೋಣ ಎಂಬುದಾಗಿ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search