• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದು ದಿನದ ಭೇಟಿಯಲ್ಲೇ ಕಣಿವೆ ರಾಜ್ಯ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶ ಸಾರಿದ ಮೋದಿ

TNN Correspondent Posted On May 20, 2018
0


0
Shares
  • Share On Facebook
  • Tweet It

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಯಾವುದೇ ದೇಶ ಅಥವಾ ದೇಶದ ಯಾವುದೇ ರಾಜ್ಯಕ್ಕೆ ಭೇಟಿ ನೀಡಿದರೂ ಅದರಲ್ಲೊಂದು ದೂರದೃಷ್ಟಿಯ ಚಿಂತನೆ ಹೊಂದಿರುತ್ತಾರೆ. ಅದರ ಫಲ ದೇಶವಾಸಿಗಳಿಗೆ ದೊರಯಬೇಕು ಎಂಬ ದೂರದೃಷ್ಟಿಯಿಂದಲೇ ಸದಾ ಕಾರ್ಯಪವೃತ್ತರಾಗಿರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಆ ಮಾತಿಗೆ ಪುಷ್ಠಿ ನೀಡಿದ್ದುಮ ಮೇ.19 ಜಮ್ಮು ಕಾಶ್ಮೀರ ಭೇಟಿ ವೇಳೆ ಶತ್ರು ರಾಷ್ಟ್ರ ಪಾಕಿಸ್ತಾನದ ಜೊತೆಗೆ ಇಡೀ ವಿಶ್ವಕ್ಕೆ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಸಾರಿ ಬಂದಿದ್ದಾರೆ.

ಮೇ.19ರಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ಅತಿ ಉದ್ದನೆಯ ದ್ವಿಪಥ ಸುರಂಗಮಾರ್ಗ ಝೋಜಿಲಾ ಯೋಜನೆಗೆ ಚಾಲನೆ ನೀಡುವ ಮೂಲಕ ಪಾಕಿಸ್ತಾನಕ್ಕೆ ಚುರುಕು ಮುಟ್ಟಿಸಿದ್ದಾರೆ. ಸುಮಾರು 25 ಸಾವಿರ ಕೋಟಿ ಅನುದಾನದ ಈ ಯೋಜನೆಯಿಂದ ಕಣಿವೆ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ದೊರೆಯಲಿದೆ. ಅಲ್ಲದೇ ಶ್ರೀನಗರ, ಕಾರ್ಗಿಲ್ ಮತ್ತು ಲೇಹ್ ಮಧ್ಯೆ ಉತ್ತಮ ಸಂಪರ್ಕ ಸಾಧಿಸಲು ಪೂರಕವಾಗಲಿದೆ. ಈ ದ್ವಿಪಥ ರಸ್ತೆ ಹಲವು ದೃಷ್ಟಿಯಿಂದ ದೇಶಕ್ಕೆ ಅನುಕೂಲವಾಗಲಿದೆ.

330 ಮೇಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಕಿಶನ್ ಗಂಗಾ ಜಲ ವಿದ್ಯುದಾಗಾರವನ್ನು ಶ್ರೀನಗರದಲ್ಲಿ ಹಮ್ಮಿಕೊಂಡಿರುವ ಶೇರ್ ಇ ಕಾಶ್ಮೀರ ಸಮ್ಮೇಳದ ಮೂಲಕ ದೇಶಕ್ಕೆ ಸಮರ್ಪಿಸಿದರು. ಇದು ಕಣಿವೆ ರಾಜ್ಯಕ್ಕೆ ವಿದ್ಯುತ್ ಒದಗಿಸಲು ಅನುಕೂಲ ಕಲ್ಪಿಸಲಿದೆ. ಅಲ್ಲದೇ ಮಾತಾ ವೈಷ್ಣೋದೇವಿ ಕ್ಷೇತ್ರಕ್ಕೆ ಭೇಟಿ ನೀಡುವ ಯಾತ್ರಿಕರ ಅನುಕೂಲಕ್ಕೆ ನಿರ್ಮಿಸಲಾಗಿರುವ ರೋಪ್ ವೇಗೂ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಹೀಗೆ ಒಂದೇ ಸಾಲು ಸಾಲು ಕಾರ್ಯಕ್ರಮಗಳ ಮೂಲಕ ಕಣಿವೆ ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಇಡೀ ವಿಶ್ವಕ್ಕೆ ವಿಶೇಷವಾಗಿ ಪಾಕಿಸ್ತಾನಕ್ಕೆ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಸಾರಿದ್ದಾರೆ.

ಝೋಜಿಲಾ ಸುರಂಗ ಮಾರ್ಗ, ಕಿಶನಗಂಗಾ ಜಲವಿದ್ಯುತ್ ಗಾರ, ಪಾಕುಲ್ ದರ್ ವಿದ್ಯುತ್ ಯೋಜನೆ ಸೇರಿ ನಾನಾ ಯೋಜನೆಗಳನ್ನು ಒಂದೇ ದಿನದಲ್ಲಿ ಉದ್ಘಾಟನೆ, ಶಂಕುಸ್ಥಾಪನೆ ಮಾಡುವ ಮೂಲಕ ಇಡೀ ಕಣಿವೆ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭಿಸಿ, ಯುವಕರನ್ನು ಹೊಸ ಚಿಂತನೆಗೆ ಹಚ್ಚಿಸುವ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search