• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದು ದಿನದ ಭೇಟಿಯಲ್ಲೇ ಕಣಿವೆ ರಾಜ್ಯ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶ ಸಾರಿದ ಮೋದಿ

TNN Correspondent Posted On May 20, 2018
0


0
Shares
  • Share On Facebook
  • Tweet It

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಯಾವುದೇ ದೇಶ ಅಥವಾ ದೇಶದ ಯಾವುದೇ ರಾಜ್ಯಕ್ಕೆ ಭೇಟಿ ನೀಡಿದರೂ ಅದರಲ್ಲೊಂದು ದೂರದೃಷ್ಟಿಯ ಚಿಂತನೆ ಹೊಂದಿರುತ್ತಾರೆ. ಅದರ ಫಲ ದೇಶವಾಸಿಗಳಿಗೆ ದೊರಯಬೇಕು ಎಂಬ ದೂರದೃಷ್ಟಿಯಿಂದಲೇ ಸದಾ ಕಾರ್ಯಪವೃತ್ತರಾಗಿರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಆ ಮಾತಿಗೆ ಪುಷ್ಠಿ ನೀಡಿದ್ದುಮ ಮೇ.19 ಜಮ್ಮು ಕಾಶ್ಮೀರ ಭೇಟಿ ವೇಳೆ ಶತ್ರು ರಾಷ್ಟ್ರ ಪಾಕಿಸ್ತಾನದ ಜೊತೆಗೆ ಇಡೀ ವಿಶ್ವಕ್ಕೆ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಸಾರಿ ಬಂದಿದ್ದಾರೆ.

ಮೇ.19ರಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ಅತಿ ಉದ್ದನೆಯ ದ್ವಿಪಥ ಸುರಂಗಮಾರ್ಗ ಝೋಜಿಲಾ ಯೋಜನೆಗೆ ಚಾಲನೆ ನೀಡುವ ಮೂಲಕ ಪಾಕಿಸ್ತಾನಕ್ಕೆ ಚುರುಕು ಮುಟ್ಟಿಸಿದ್ದಾರೆ. ಸುಮಾರು 25 ಸಾವಿರ ಕೋಟಿ ಅನುದಾನದ ಈ ಯೋಜನೆಯಿಂದ ಕಣಿವೆ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ದೊರೆಯಲಿದೆ. ಅಲ್ಲದೇ ಶ್ರೀನಗರ, ಕಾರ್ಗಿಲ್ ಮತ್ತು ಲೇಹ್ ಮಧ್ಯೆ ಉತ್ತಮ ಸಂಪರ್ಕ ಸಾಧಿಸಲು ಪೂರಕವಾಗಲಿದೆ. ಈ ದ್ವಿಪಥ ರಸ್ತೆ ಹಲವು ದೃಷ್ಟಿಯಿಂದ ದೇಶಕ್ಕೆ ಅನುಕೂಲವಾಗಲಿದೆ.

330 ಮೇಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಕಿಶನ್ ಗಂಗಾ ಜಲ ವಿದ್ಯುದಾಗಾರವನ್ನು ಶ್ರೀನಗರದಲ್ಲಿ ಹಮ್ಮಿಕೊಂಡಿರುವ ಶೇರ್ ಇ ಕಾಶ್ಮೀರ ಸಮ್ಮೇಳದ ಮೂಲಕ ದೇಶಕ್ಕೆ ಸಮರ್ಪಿಸಿದರು. ಇದು ಕಣಿವೆ ರಾಜ್ಯಕ್ಕೆ ವಿದ್ಯುತ್ ಒದಗಿಸಲು ಅನುಕೂಲ ಕಲ್ಪಿಸಲಿದೆ. ಅಲ್ಲದೇ ಮಾತಾ ವೈಷ್ಣೋದೇವಿ ಕ್ಷೇತ್ರಕ್ಕೆ ಭೇಟಿ ನೀಡುವ ಯಾತ್ರಿಕರ ಅನುಕೂಲಕ್ಕೆ ನಿರ್ಮಿಸಲಾಗಿರುವ ರೋಪ್ ವೇಗೂ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಹೀಗೆ ಒಂದೇ ಸಾಲು ಸಾಲು ಕಾರ್ಯಕ್ರಮಗಳ ಮೂಲಕ ಕಣಿವೆ ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಇಡೀ ವಿಶ್ವಕ್ಕೆ ವಿಶೇಷವಾಗಿ ಪಾಕಿಸ್ತಾನಕ್ಕೆ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಸಾರಿದ್ದಾರೆ.

ಝೋಜಿಲಾ ಸುರಂಗ ಮಾರ್ಗ, ಕಿಶನಗಂಗಾ ಜಲವಿದ್ಯುತ್ ಗಾರ, ಪಾಕುಲ್ ದರ್ ವಿದ್ಯುತ್ ಯೋಜನೆ ಸೇರಿ ನಾನಾ ಯೋಜನೆಗಳನ್ನು ಒಂದೇ ದಿನದಲ್ಲಿ ಉದ್ಘಾಟನೆ, ಶಂಕುಸ್ಥಾಪನೆ ಮಾಡುವ ಮೂಲಕ ಇಡೀ ಕಣಿವೆ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭಿಸಿ, ಯುವಕರನ್ನು ಹೊಸ ಚಿಂತನೆಗೆ ಹಚ್ಚಿಸುವ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search